1.28 ಲಕ್ಷ ಅನಕ್ಷರಸ್ಥರನ್ನು ಸಾಕ್ಷರರಾಗಿಸಿ: ವಿಜಯ
Team Udayavani, Feb 3, 2018, 12:25 PM IST
ಕಲಬುರಗಿ: ಜಿಲ್ಲೆಯ 1.28 ಲಕ್ಷ ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡುವಂತೆ ಲೋಕ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಕೆ.ಎನ್. ವಿಜಯ ಅಧಿಕಾರಿಗಳಿಗೆ ಸೂಚಿಸಿದರು.
ಬೀದರ, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಯಾ ಜಿಲ್ಲೆಗೆ ನೀಡಲಾದ ಗುರಿಯನ್ವಯ ಬೀದರ ಜಿಲ್ಲೆಯ 78 ಸಾವಿರ, ಯಾದಗಿರಿ ಜಿಲ್ಲೆಯ 65 ಸಾವಿರ ಅನಕ್ಷರಸ್ಥರನ್ನು ಸಾಕ್ಷರನ್ನಾಗಿ ಮಾಡಲು ಆಯಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಮಾ. 25ರಂದು ಅನಕ್ಷರಸ್ಥರಿಗೆ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಹಾಗೂ ಸಾಕ್ಷರ ಭಾರತ ಕಾರ್ಯಕ್ರಮದ ಅಂಗವಾಗಿ ಜ. 29ರಿಂದ 31ರ ವರೆಗೆ ಜಿಲ್ಲೆಯ ಏಳು ತಾಲೂಕಿನ 21 ಗ್ರಾಪಂನ ಕಲಿಕಾ ಕೇಂದ್ರಗಳಿಗೆ ಕರ್ನಾಟಕ ರಾಜ್ಯ ಸಾಕ್ಷರತಾ ಮಿಷನ್ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿಯಿಂದ ಹಿರಿಯ ಅಧಿಕಾರಿಗಳನ್ನು ಒಳಗೊಂಡ ತಂಡವು ಭೇಟಿ ನೀಡಿ ಕಲಿಕಾ ವಾತಾವರಣ ಪ್ರಚಾರಾಂದೋಲನದ ಪೋಸ್ಟರ್, ಕ್ಯಾಲೆಂಡರ್, ಫೋಲ್ಡರ್, ಸ್ಟೀಕರ್ಗಳನ್ನು ಕಲಿಕಾ ಕೇಂದ್ರಗಳಿಗೆ ನೀಡುವ ಮೂಲಕ ಅನಕ್ಷರಸ್ಥರನ್ನು ಪ್ರೋತ್ಸಾಹಿಸಲಾಗಿದೆ. ಇನ್ನುಳಿದ ಕಲಿಕಾ ಕೇಂದ್ರಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಪ್ರತಿ ದಿನ 10 ಕಲಿಕಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷೆಗೆ ಮುನ್ನವೇ ನೀಡಲಾದ ಗುರಿ ಸಾಧಿಸಬೇಕೆಂದು ಹೇಳಿದರು.
ಮೈಸೂರಿನ ರಾಜ್ಯ ಸಂಪನ್ಮೂಲ ಕೇಂದ್ರದ ನಿರ್ದೇಶಕ ಎಸ್. ತುಕಾರಾಂ, ಆರ್. ವೆಂಕಟೇಶ, ನೋಡಲ್ ಅಧಿಕಾರಿ ಎಸ್.ಎಂ. ಮಾರುತಿ, ಲೋಕ ಶಿಕ್ಷಣ ನಿರ್ದೇಶನಾಲಯದ ಉಪನಿರ್ದೇಶಕಿ ಗೀತಾ, ಲೆಕ್ಕಾಧಿಕಾರಿ ಮಂಜುಳಾ, ಜಿಲ್ಲೆಯ ನೋಡಲ್ ಅಧಿಕಾರಿ ಅಶ್ವಥರಾಮು, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳಾದ ಎನ್.ವಿ. ಶಿವಪ್ಪ, ಯಾದಗಿರಿ ಜಿಲ್ಲೆಯ ಲೋಹಿತ, ಬೀದರ ಜಿಲ್ಲೆಯ ಶಿವಪುರ, ಕಾರ್ಯಕ್ರಮ ಸಹಾಯಕಿ ಅರ್ಚನಾ ಎಸ್. ಎಂ. ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು