ಸಮ ಸಮಾಜ ಚಿಂತನೆ ಮುಖ್ಯ


Team Udayavani, Oct 21, 2018, 11:52 AM IST

gul-1.jpg

ಕಲಬುರಗಿ: ಪದವಿ ಪಡೆದು ಕೇವಲ ವಿದ್ಯಾವಂತರಾದರೆ ಯಾವುದೇ ಪ್ರಯೋಜನವಿಲ್ಲ. ನಾವೆಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ಮತ್ತೂಬ್ಬರ ಏಳ್ಗೆಗೆ ಬಯಸುವ ಮನಸ್ಥಿತಿ, ಚಿಂತನೆಯನ್ನು ವಿದ್ಯಾವಂತರು ಹೊಂದಬೇಕು. ಸಮ ಸಮಾಜದ ಗುರಿ ಇಲ್ಲದ ಶಿಕ್ಷಣಕ್ಕೆ ಬೆಲೆ ಇಲ್ಲ ಎಂದು ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ನಗರದ ಕರ್ನಾಟಕ ಪೀಪಲ್ಸ್‌ ಶಿಕ್ಷಣ ಸಂಸ್ಥೆಯ ಡಾ| ಅಂಬೇಡ್ಕರ್‌ ಪದವಿ ಮಹಾವಿದ್ಯಾಲಯದಲ್ಲಿ ಸಿದ್ಧಾರ್ಥ ಕಾನೂನು ಕಾಲೇಜು ಹಾಗೂ ಬೆಂಗಳೂರಿನ ತಳಸಮುದಾಯಗಳ ಅಧ್ಯಯನ ಕೇಂದ್ರ ಭಾರತ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಡಾ| ಬಿ.ಆರ್‌. ಅಂಬೇಡ್ಕರ್‌ ಚಿಂತನೆಗಳು ಮತ್ತು ಯುವಜನ’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಡಾ| ಬಿ.ಆರ್‌. ಅಂಬೇಡ್ಕರ್‌ ದೇಶದ ಸಾರ್ವಭೌಮತೆ, ಸಮಾನತೆ ಹಾಗೂ ಭಾತೃತ್ವಕ್ಕೆ ಸಂವಿಧಾನದ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅಂಬೇಡ್ಕರ್‌ ವಿಚಾರ ಹಾಗೂ ಚಿಂತನೆಗಳನ್ನು ಮಾತಿನಲ್ಲಿ ಹೇಳಿದರೆ ಸಾಲದು. ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಆಹಾರ, ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ವಿಚಾರಗಳನ್ನು ಒಳಗೊಂಡು ದೇಶದ ಸಮಗ್ರ ಜನತೆಗಾಗಿ ಅಂಬೇಡ್ಕರ್‌ ಸಂವಿಧಾನ ರಚಿಸಿದ್ದಾರೆ. ಸಂವಿಧಾನವು ಒಳ್ಳೆಯದು, ಕೆಟ್ಟದ್ದೆಂಬುದು ಆಡಳಿತ ನಡೆಸುವವರ ಮೇಲೆ ಅವಲಂಬಿತವಾಗಿದೆ. ಸಂವಿಧಾನ ಒಳ್ಳೆಯದಿದ್ದರೂ ಆಡಳಿತ ನಿರ್ವಹಿಸುವವರು ಕೆಟ್ಟವರಾಗಿದ್ದರೆ, ಅದು ಕೆಟ್ಟ ಸಂವಿಧಾನವಾಗಿರುತ್ತದೆ.

ಆಡಳಿತ ನಡೆಸುವವರು ಒಳ್ಳೆಯವರಾಗಿದ್ದರೆ ಸಂವಿಧಾನವೂ ಒಳ್ಳೆಯದು ಎಂಬ ಅಂಬೇಡ್ಕರ್‌ ಮಾತನ್ನು ಯಾರೂ ಮರೆಯಬಾರದು ಎಂದರು. ಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ| ಮಾರುತಿರಾವ್‌ ಮಾಲೆ ಅಧ್ಯಕ್ಷತೆ ವಹಿಸಿದ್ದರು. ತಳಸಮುದಾಯಗಳ ಅಧ್ಯಯನ ಕೇಂದ್ರ ರಾಷ್ಟ್ರೀಯ ಕಾನೂನು ಶಾಲೆ ಸಹಾಯಕ ಪ್ರಾಧ್ಯಾಪಕ ಡಾ| ಆರ್‌.ವಿ. ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಐ.ಎಸ್‌. ವಿದ್ಯಾಸಾಗರ ನಿರೂಪಿಸಿದರು.

ತೆಲಂಗಾಣದ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳ ಸಂಸ್ಥೆ ಕಾರ್ಯದರ್ಶಿ ಡಾ| ಆರ್‌.ಎಸ್‌. ಪ್ರವೀಣಕುಮಾರ, ಬೆಂಗಳೂರಿನ ತಳಸಮುದಾಯಗಳ ಅಧ್ಯಯನ ಕೇಂದ್ರ ರಾಷ್ಟ್ರೀಯ ಕಾನೂನು ಶಾಲೆ ಸಂಚಾಲಕ ಪ್ರದೀಪ ರಮಾವತ್‌, ಡಾ| ಅಂಬೇಡ್ಕರ್‌ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಚಂದ್ರಶೇಖರ ಶೀಲವಂತ, ಸಿದ್ಧಾರ್ಥ ಕಾನೂನು ಕಾಲೇಜಿನ ಡಾ| ಚಂದ್ರಶೇಖರ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು. 

“ದಲಿತ ಪದ ತರುತ್ತೆ ನೋವು’ ಅಂಬೇಡ್ಕರ್‌ ಅವರನ್ನು ಕೇವಲ ಒಂದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅಂಬೇಡ್ಕರ್‌ ಅವರನ್ನು ಕೇವಲ ದಲಿತರ ನಾಯಕ, ಅಸ್ಪೃಶ್ಯರ ನಾಯಕ ಎಂದು ಹೇಳಬಾರದು. ಅನೇಕ ಸಭೆ, ಸಮಾರಂಭಗಳಲ್ಲಿ ದಲಿತ ನಾಯಕ ಅಂಬೇಡ್ಕರ್‌ ಎಂದು
ಸಂಬೋ ಧಿಸುತ್ತಾರೆ. ಅಲ್ಲದೇ, ನನಗೂ ದಲಿತ ನಾಯಕ ಎಂದೇ ಕರೆಯುತ್ತಾರೆ. ನನಗೆ ಅದನ್ನು ಕೇಳಿ ಬಹಳ ನೋವಾಗುತ್ತದೆ ಎಂದು ಸಂಸದ ಖರ್ಗೆ ನುಡಿದರು. ಅದೇ ಸಮಾರಂಭದಲ್ಲಿ ಬೇರೆ ಯಾವುದೇ ಸಮಾಜದ ನಾಯಕರಿದ್ದರೂ ಅವರನ್ನು ಜಾತಿಗೆ ಸೀಮಿತಗೊಳಿಸಿ ಸಂಬೋಧಿ ಸುವುದಿಲ್ಲ. ದಲಿತ ಸಮುದಾಯದ ನಾಯಕರನ್ನು ಮಾತ್ರ ಜಾತಿ ಮೂಲಕ ಬಿಂಬಿಸಲಾಗುತ್ತದೆ. ಸಂಸತ್ತಿನಲ್ಲೂ ಪದೇ ಪದೇ ಇಂತಹ ಪ್ರಶ್ನೆ ಉದ್ಭವಿಸುತ್ತದೆ. ದಲಿತ ನಾಯಕ ಎಂದಾಗ ಆಗುವ ನೋವು ನನಗೆ ಮಾತ್ರ ಗೊತ್ತು. ಬೇರೆ ಸಮುದಾಯದವರಿಗೆ ಆ ನೋವು ಅರ್ಥವಾಗಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.