ಸಮಾನತೆ ಬದುಕಿಗೆ ಸಂವಿಧಾನ ಸೃಷ್ಟಿ


Team Udayavani, Sep 23, 2018, 4:54 PM IST

gul-3.jpg

ಕಲಬುರಗಿ: ಗಂಡು-ಹೆಣ್ಣನ್ನು ಸಮಾನವಾಗಿ ನೋಡುವುದೇ ಸಂವಿಧಾನವಾಗಿದ್ದು, ಸಮಾನತೆ ಬದುಕು ಅನುಭವಿಸಲಿಕ್ಕೆ ಸಂವಿಧಾನ ಸೃಷ್ಟಿಯಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ| ಶಿವಗಂಗಾ ರುಮ್ಮಾ ತಿಳಿಸಿದರು.

ನಗರದ ಗಂಜ್‌ನಲ್ಲಿರುವ ಶರಬಯ್ಯ ಗಾದಾ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಚಕೋರ-241 ಕವಿಕಾವ್ಯ ವಿಚಾರ ವೇದಿಕೆ ಏರ್ಪಡಿಸಿದ್ದ “ವಚನ ಸಾಹಿತ್ಯ ಮತ್ತು ಸಂವಿಧಾನದ ಆಶಯಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಾನವ ಹಕ್ಕುಗಳ ಪರಿಕಲ್ಪನೆಯೇ ಸಂವಿಧಾನ ಆಶಯದ ಒಂದು ಭಾಗವಾಗಿದೆ. ದೊಡ್ಡ ರಾಷ್ಟ್ರದಲ್ಲಿ ಸಂವಿಧಾನ ಬಹುತ್ವ ಹೊಂದಿದೆ. ಪ್ರಾದೇಶಿಕ ಭಿನ್ನತೆಗಳು ಕಂಡ ರಾಷ್ಟ್ರ ನಮ್ಮದು. ಸಂವಿಧಾನ ಆಶಯಗಳು ಶರಣರು ವಿಶ್ಲೇಷಿಸಿದ್ದನ್ನು ಅವರು ಪ್ರಸ್ತಾಪಿಸಿದರು. ಕಲ್ಯಾಣ ರಾಜ್ಯದ ಮೇಲೆ ಸಂವಿಧಾನ ನಿಂತಿದೆ. ಸಂವಿಧಾನ ಅಪ್ಪಿಕೊಳ್ಳುವುದಕ್ಕಿಂತ ಅದನ್ನು ವಿಶ್ಲೇಷಿಸುವುದು ಅಗತ್ಯವಾಗಿದೆ ಎಂದರು. 

ಕರ್ನಾಟಕ ಕೇಂದ್ರಿಯ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ| ಅಪ್ಪುಗೇರೆ ಸೋಮಶೇಖರ ಅವರು “ವಚನ ಸಾಹಿತ್ಯ ಮತ್ತು ಸಂವಿಧಾನದ ಆಶಯಗಳು’ ಕುರಿತ ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಸಂವಿಧಾನದ ಹಿನ್ನೆಲೆಯಲ್ಲಿ ತಾತ್ವಿಕ ಚಿಂತನೆ, ವಿಮರ್ಶೆ ಮಾಡುತ್ತಿಲ್ಲ ಎನ್ನುವ ಕೊರಗು ಇದೆ. ಈ ನಿಟ್ಟಿನಲ್ಲಿ ಪ್ರಜ್ಞಾಪೂರ್ವಕವಾಗಿ ವಿಚಾರ ಮಾಡುವುದು
ಅಗತ್ಯವಾಗಿದೆ. ಕುಟುಂಬವನ್ನು ವೈಚಾರಿಕವಾಗಿ ಕಟ್ಟಬಲ್ಲ ಶಕ್ತಿ ಮಹಿಳೆಯರಲ್ಲಿದೆ ಎಂದರು.

ಭಾರತದ ಸಮಾಜ ಚರಿತ್ರೆ ಕಾಲದ ಕನಿಷ್ಠ ತಿಳಿವಳಿಕೆ ಹೊಂದಿದ್ದರೆ ವಚನ ಚಳವಳಿ ಅರ್ಥೈಸಿಕೊಳ್ಳುವುದು ಮಹಿಳೆಯರಲ್ಲಿ ಸಾಧ್ಯವಾಗಲಿದೆ. ಇತಿಹಾಸ ಕಟ್ಟುವ ಕಾರ್ಯಕ್ಕೆ ಇತಿಹಾಸ ಓದಬೇಕು. ಹಿರಿಯರ ವಿಚಾರಗಳಿಗೆ ವಿಮರ್ಶೆ ಮಾಡಿ ಎನ್ನುವ ಬುದ್ಧನ ಸಂದೇಶವಿದೆ. ವಚನ ಚಳವಳಿಗೆ ಬುದ್ಧನ ಚಿಂತನೆಗಳು ಪ್ರೇರಣೆಯಾಗಿವೆ ಎಂದರು.

ನಗರೇಶ್ವರ ವೆಲ್‌ಫೇರ್‌ ಸೊಸೈಟಿ ಕಾರ್ಯದರ್ಶಿ ರವೀಂದ್ರ ಮುಕ್ಕಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಾತಿಯಿಂದ ಪ್ರತಿಭೆ ಅಳೆಯುವುದು ಸಲ್ಲ. ಶೈಕ್ಷಣಿಕ, ಉದ್ಯೋಗ, ಆರೋಗ್ಯದ ದೃಷ್ಟಿಯಿಂದ ಜಾತಿಯನ್ನು ಬೆಂಬಲವಾಗಿಟ್ಟುಕೊಂಡು ಬೆಳೆಯಲು ಸಾಧ್ಯವಿಲ್ಲ. ಪ್ರತಿಭೆ ಮತ್ತು ಮಾನವೀಯ ನೆಲೆಯಲ್ಲಿ ಸಮಾಜವನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕು ಎಂದರು.

ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕುಪೇಂದ್ರ ಪಾಟೀಲ, ಪತ್ರಕರ್ತ ಸಂಗಮನಾಥ ರೇವತಗಾಂವ್‌ ಮತ್ತು ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ| ವಿಕ್ರಮ ವಿಸಾಜಿ ಮಾತನಾಡಿದರು. ಕು.ರುಕ್ಮಿಣಿ ಪ್ರಾರ್ಥನೆ ಹಾಡಿದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರತಿನಿಧಿ ಡಾ| ಶರಣಬಸಪ್ಪ ವಡ್ಡನಕೇರಿ ಸ್ವಾಗತಿಸಿದರು, ಶಿಕ್ಷಕಿ ವಾಸವಿ ಗುಪ್ತ ನಿರೂಪಿಸಿದರು. ಶರಬಯ್ಯ ಗಾದಾ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಅಂಜನಾ ಬಿರಾದಾರ ವಂದಿಸಿದರು. ಖೀರೂಸಿಂಗ ರಾಠೊಡ, ಬಿ.ಎಸ್‌. ರುದ್ರಾಕ್ಷಿ, ಎಂ.ಎಚ್‌. ಶಂಕರ, ವತ್ಸಲಾ, ಭಾಗ್ಯಶ್ರೀ, ಸರಸ್ವತಿ, ಅನಿತಾ, ರೂಪಾ, ಪರಶುರಾಮ ಹಾಗೂ ವಿದ್ಯಾರ್ಥಿನಿಯರು ಹಾಜರಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.