ಮಂತ್ರಾಲಯದಲ್ಲಿ ಶೀಘ್ರ 33 ಅಡಿ ಆಂಜನೇಯ ಮೂರ್ತಿ ಪ್ರತಿಷ್ಠಾಪನೆ
Team Udayavani, Apr 5, 2018, 4:10 PM IST
ರಾಯಚೂರು: ಮಂತ್ರಾಲಯದ ಹೊರವಲಯದಲ್ಲಿ ಪ್ರತಿಷ್ಠಾಪಿಸಲು ನಿರ್ಮಿಸಿದ 33 ಅಡಿ ಎತ್ತರದ ಏಕಶಿಲಾ ಅಭಯಾಂಜನೇಯ ಮೂರ್ತಿಗೆ ಮಂತ್ರಾಲಯದಲ್ಲಿ ಬುಧವಾರ ಅದ್ದೂರಿ ಸ್ವಾಗತ ದೊರಕಿತು.
ಶ್ರೀಮಠದ ಗೋಶಾಲಾ ಬಳಿಯಿರುವ ಒಂದು ಎಕರೆ ಪ್ರದೇಶದಲ್ಲಿ ಈ ಏಕಶಿಲಾ ಮೂರ್ತಿಯನ್ನು ಪ್ರತಿಷ್ಠಾಪಿಸುವ ಉದ್ದೇಶ ಹೊಂದಿದ್ದು, ಕಳೆದ ಆರು ತಿಂಗಳಿಂದ ಕೆತ್ತನೆ ಕಾರ್ಯ ಆರಂಭಿಸಲಾಗಿತ್ತು. ಬೆಂಗಳೂರಿನ ಕೃಷ್ಣಮೂರ್ತಿ ಎನ್ನುವ ಉದ್ಯಮಿ ಮೂರ್ತಿ ದಾನ ನೀಡಿದ್ದಾರೆ. ಬಿಡದಿ ಸಮೀಪದ ಶಿಲ್ಪಾಕಲಾ ಕೇಂದ್ರದಲ್ಲಿ ಮೈಸೂರು ಮೂಲದ ಅಶೋಕ ಗುಡಿಹಾರ ನೇತೃತ್ವದಲ್ಲಿ 10 ಜನ ಶಿಲ್ಪಿಗಳು ಮೂರ್ತಿ ಕೆತ್ತನೆ ಮಾಡಿದ್ದಾರೆ. 90 ಟನ್ಗೂ ಅಧಿಕ ಭಾರದ ಮೂರ್ತಿಯನ್ನು 88 ಚಕ್ರಗಳ ಬೃಹದಾಕಾರದ ಲಾರಿಯಲ್ಲಿ ತರಲಾಗಿದೆ.
ಈ ವೇಳೆ ಆಶೀರ್ವಚನ ನೀಡಿದ ಶ್ರೀಮಠದ ಪೀಠಾ ಧಿಪತಿ ಶ್ರೀ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಬೃಹದಾಕಾರದಲ್ಲಿ ಬೆಳೆಯುತ್ತಿದೆ. ಈ ಅಭಯಾಂಜನೇಯ ಮೂರ್ತಿಯನ್ನು ಗೋಶಾಲೆ ಬಳಿ ಪ್ರತಿಷ್ಠಾಪಿಸಲಾಗುವುದು. ಅದೊಂದು ಧಾರ್ಮಿಕ ಕೇಂದ್ರವಾಗುವ ವಿಶ್ವಾಸವಿದೆ. ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಅದೊಂದು ಪ್ರೇಕ್ಷಣೀಯ ಸ್ಥಳವಾಗಲಿದೆ. ಅಲ್ಲಿ ಲ್ಯಾಂಡ್ ಸ್ಕೇಪ್ ನಿರ್ಮಿಸಿ, ಸುತ್ತಲೂ ನೀರಿನ ಕೊಳ ನಿರ್ಮಿಸುವ ಉದ್ದೇಶವಿದೆ. ಶೀಘ್ರದಲ್ಲೇ ಮೂರ್ತಿ ಪ್ರತಿಷ್ಠಾಪನೆ ಸಮಾರಂಭ ಹಮ್ಮಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು