ಬಸವೇಶ್ವರ ಪ್ರತಿಮೆ ಸ್ಥಾಪನೆ ಕಾಮಗಾರಿ ನನೆಗುದಿಗೆ
Team Udayavani, Feb 16, 2021, 4:36 PM IST
ಶಹಾಬಾದ: ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಿದ ಅಶ್ವಾರೂಢ ಬಸವೇಶ್ವರ ಪ್ರತಿಮೆ ಪುಣೆಯಲ್ಲಿ ಸಿದ್ಧಗೊಳ್ಳುತ್ತಿದೆ.
ಶಹಾಬಾದ: ನಗರದ ಬಸವವೃತ್ತದ ಸಮೀಪ ಸ್ಥಾಪಿಸಲು ಉದ್ದೇಶಿಸಿದ್ದ ಅಶ್ವಾರೂಢ ಬಸವೇಶ್ವರ ಪ್ರತಿಮೆ ಕಾಮಗಾರಿ ಕಳೆದ ಆರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. 2015-16ರ ಎಸ್ಎಫ್ಸಿ ಯೋಜನೆ ಯಡಿ 15 ಲಕ್ಷ ರೂ. ಅನುದಾನದಲ್ಲಿ ಪುಣೆಯಲ್ಲಿ ಪ್ರತಿಮೆ ಸ್ಥಾಪಿಸಲು ನಗರಸಭೆಸಾಮಾನ್ಯ ಸಭೆಯಲ್ಲಿ ಸರ್ವ ಸದಸ್ಯರುಒಪ್ಪಿಗೆ ಸೂಚಿಸಿದ್ದರು. ಅದರಂತೆ ಅಡಿಗಲ್ಲುನಿರ್ಮಾಣಕ್ಕೆ ಸುಮಾರು 5 ಲಕ್ಷ ರೂ.ಅನುದಾನದಲ್ಲಿ ಚಾಲನೆ ನೀಡಲಾಗಿತ್ತು. ಆಗ ಲೋಕೋಪಯೋಗಿ ಇಲಾಖೆ ತಮ್ಮ ವ್ಯಾಪ್ತಿಯಲ್ಲಿ ಈ ಸ್ಥಳ ಬರುತ್ತದೆ ಎಂದು ಹೇಳಿದ್ದರಿಂದ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು.
ಕಾಮಗಾರಿ ಸ್ಥಗಿತವಾಗಿ ಆರು ವರ್ಷಗಳಾದರೂ ಮತ್ತೆ ಚಾಲನೆ ದೊರಕಿಲ್ಲ.ನಗರಸಭೆ ಅಂದಿನ ಅಧ್ಯಕ್ಷರಾಗಿದ್ದ ಗಿರೀಶಕಂಬಾನೂರ ಅವಧಿಯಲ್ಲಿ ಇದಕ್ಕಾಗಿಯೇಅನುದಾನ ಕಾಯ್ದಿರಿಸಲಾಗಿತ್ತು. ಈಗ ಅವರ ಧರ್ಮಪತ್ನಿ ಅಂಜಲಿ ಕಂಬಾನೂರ ನಗರಸಭೆ ಅಧ್ಯಕ್ಷರಾಗಿದ್ದಾರೆ. ಈಗಲಾದರೂ ಅಂದಿನ ಕನಸು ನನಸು ಮಾಡುವಲ್ಲಿ ಅಧ್ಯಕ್ಷರು ಗಮನಹರಿಸಬೇಕು ಎನ್ನುವುದು ಸಾರ್ವಜನಿಕರಆಗ್ರಹವಾಗಿದೆ.ಅಂದು ಕಾಯ್ದಿರಿಸಿದ ಅನುದಾನದಲ್ಲಿ ಈಗ ಪ್ರತಿಮೆ ನಿರ್ಮಿಸಲು ಸಾಧ್ಯವಿಲ್ಲ. ಆದ್ದರಿಂದ ಸುಮಾರು 35 ಲಕ್ಷ ರೂ. ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. 14 ಅಡಿ ಎತ್ತರದ ಪಂಚಲೋಹದ ಅಶ್ವಾರೂಢ ಪ್ರತಿಮೆ ನಿರ್ಮಿಸಲು ನಗರಸಭೆಯ ಸಭೆಯಲ್ಲಿ ಶಾಸಕ ಬಸವರಾಜ ಮತ್ತಿಮಡು ಸಮ್ಮುಖದಲ್ಲಿಯೇಹೆಚ್ಚುವರಿಯಾಗಿ ಸುಮಾರು 20 ಲಕ್ಷ ರೂ.ಅನುದಾನ ಕಾಯ್ದಿರಿಸಲಾಗಿದೆ. ಆದರೂಕಾಮಗಾರಿಗೆ ವಿಳಂಬವೇಕೆ ಎನ್ನುವುದು ಬಸವ ಅನುಯಾಯಿಗಳ ಪ್ರಶ್ನೆಯಾಗಿದೆ.
ಬಸವೇಶ್ವರ ಮೂರ್ತಿ ಪ್ರತಿಷ್ಠಾನೆಗೆ ಅನುದಾನದ ಕೊರತೆಯಿದೆಎಂದು ಗಮನಕ್ಕೆ ತಂದಾಗ, ನಗರಸಭೆಸಾಮಾನ್ಯ ಸಭೆಯಲ್ಲಿ ಚರ್ಚೆಮಾಡಲಾಗಿತ್ತು. ಆಗ ನಗರಸಭೆಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ನಗರಸಭೆಅನುದಾನದಲ್ಲಿ ಸುಮಾರು 20 ಲಕ್ಷರೂ. ಅನುದಾನ ಕಾಯ್ದಿರಿಸಲಾಗಿದೆ. ಅಧಿಕಾರಿಗಳನ್ನು ಭೇಟಿ ಮಾಡಿ, ಕೆಲಸ ಪ್ರಾರಂಭಿಸಲು ಸಮಾಜದ ಮುಖಂಡರು ಮುಂದಾದಬೇಕು. –ಬಸವರಾಜ ಮತ್ತಿಮಡು, ಶಾಸಕ, ಕಲಬುರಗಿ ಗ್ರಾಮೀಣ ಮತಕ್ಷೇತ್ರ
ನಗರಸಭೆ ಅನುದಾನದಲ್ಲಿ ಹೆಚ್ಚುವಾರಿಯಾಗಿ 20 ಲಕ್ಷರೂ. ಅನುದಾನ ಕಾಯ್ದಿರಿಸಲಾಗಿದೆ.ಒಂದು ವಾರದಲ್ಲಿ ಸಮಾಜದಮುಖಂಡರ ನಿಯೋಗದೊಂದಿಗೆ ಮೂರ್ತಿ ವೀಕ್ಷಿಸಲು ಪುಣೆಗೆ ತೆರಳಲಿದ್ದೇವೆ. ಆದಷ್ಟು ಶೀಘ್ರ ಕಾಮಗಾರಿ ಆರಂಭಿಸಲಾಗುವುದು. – ಡಾ| ಕೆ. ಗುರಲಿಂಗಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ