ಸಿಯುಕೆ ವಿದ್ಯಾರ್ಥಿಗೆ ಯುರೇಶಿಯಾ ಸಂಶೋಧನಾ ಪ್ರಶಸ್ತಿ
Team Udayavani, Feb 23, 2019, 4:21 AM IST
ಕಲಬುರಗಿ: ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಪ್ರವೀಣ ಕುಮಾರ ರಾಜಸ್ಥಾನದ ಯುರೇಶಿಯಾ ಸಂಶೋಧನಾ ಸಂಸ್ಥೆ ನೀಡುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಯುವ ಸಂಶೋಧನಾ ವಿದ್ಯಾರ್ಥಿ ವೇತನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಜಸ್ಥಾನ ಯುರೇಶೀಯಾ ಸಂಶೋಧನಾ ಸಂಸ್ಥೆ ಉತ್ತಮ ಮತ್ತು ಹೆಚ್ಚು ಅಂತಾರಾಷ್ಟ್ರೀಯ ಪ್ರಬಂಧ ಮಂಡನೆ, ಪ್ರಕಟಪಡಿಸಿದ ಸಂಶೋಧನಾ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಿ, ಗುರುತಿಸಿ ಪ್ರಶಸ್ತಿ ನೀಡುತ್ತದೆ.
ಪ್ರಸಕ್ತ ಥೈಲ್ಯಾಂಡ್ನ ಬ್ಯಾಂಕಾಕ್ನ ಸರಟ್ ವಿಶ್ವವಿದ್ಯಾಲಯದಲ್ಲಿ ನಡೆದ ವಿಜ್ಞಾನ ಮತ್ತು ತಂತ್ರಜ್ಞಾನ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಈಜಿಪ್ಟ್ನ ಕೈರೋ ವಿಶ್ವವಿದ್ಯಾಲಯದ ಏಲ್ಗೇರಾಬಾ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸುಮಾರು 17ಕ್ಕೂ ಹೆಚ್ಚು ದೇಶಗಳ ಯುವ ಸಂಶೋಧನಾ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ ಪ್ರವೀಣಕುಮಾರ ಮಾತ್ರ ಆಯ್ಕೆಯಾಗಿರುವುದು ವಿಶೇಷ. ಪ್ರವೀಣಕುಮಾರ ಸದ್ಯ ಭೂಗರ್ಭ ವಿಜ್ಞಾನದ ಪ್ರೊ| ಎಂ.ಎ.ಅಸ್ಲಾಂ ಅವರ ಮಾರ್ಗದರ್ಶನದಲ್ಲಿ ಭೂಮಿ ಮತ್ತು ಮಳೆ ನೀರು ಕುರಿತು ಸಂಶೋಧನೆ ಮಾಡುತ್ತಿದ್ದಾರೆ. ರೈತರು ಮತ್ತು ಸಾರ್ವಜನಿಕರು ಅಂತರ್ಜಲ, ಮಳೆ ನೀರು ಮತ್ತು ಕುಡಿಯುವ ನೀರಿನ ಬಳಕೆ ಬಗ್ಗೆ ಪ್ರವೀಣಕುಮಾರ ಪ್ರಬಂಧ ಮಂಡಿಸಿದ್ದರು. ವಿದ್ಯಾರ್ಥಿ ಪ್ರವೀಣಕುಮಾರ ಸಾಧನೆಗೆ ಪ್ರೊ| ಎಚ್.ಎಂ. ಮಹೇಶ್ವರಯ್ಯ ಹರ್ಷವ್ಯಕ್ತಪಡಿಸಿದ್ದಾರೆ. ಅಲ್ಲದೇ, ಅಪ್ರತಿಮ ಸಾಧನೆ ತೋರುವ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯ ಸದಾ ಪ್ರೋತ್ಸಾಹಿಸಿ ಅಗತ್ಯ ನೇರವು ನೀಡುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ
Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್ ಖರ್ಗೆ
Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್ ಏಕಾಂಗಿ ಫೈಟ್
MUST WATCH
ಹೊಸ ಸೇರ್ಪಡೆ
Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ
Pak ಬಳಿ ಅಣುಬಾಂಬ್ ಇದೆ ಅವರಿಗೆ ಗೌರವ ಕೊಡಿ… ಕಾಂಗ್ರೆಸ್ ನಾಯಕನ ವಿವಾದಾತ್ಮಕ ಹೇಳಿಕೆ
Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
Panambur: ರಿಕ್ಷಾ ಚಾಲಕನ ಮೇಲೆ ಸ್ಥಳೀಯ ರಿಕ್ಷಾ ಚಾಲಕರಿಂದ ಹಲ್ಲೆ… ದೂರು ದಾಖಲು