ನಾಲೆಗೆ ಬಿದ್ದ ಮಾಜಿ ಸೈನಿಕ; ರಕ್ಷಣೆ ಮಾಡಿದ ಅಗ್ನಿ ಶಾಮಕ ದಳ ಸಿಬಂದಿ
ನಾಲೆಯಲ್ಲಿ ಕೊಚ್ಚಿಕೊಂಡು ಹದಿನೈದು ಅಡಿ ದೂರ ಹೋಗಿದ್ದ ನಿವೃತ್ತ ಯೋಧ
Team Udayavani, Oct 14, 2022, 7:54 PM IST
ಕಲಬುರಗಿ: ನಗರದ ಬ್ರಹ್ಮಪುರ ಬಡಾವಣೆಯ ಮಹಾಲಕ್ಷ್ಮಿ ಲೇ ಔಟ್ ನಲ್ಲಿ ಹಾಯ್ದು ಹೋಗುವ ರಸ್ತೆ ಬದಿಯ ಕಾಲುವೆಗೆ ಆಯ ತಪ್ಪಿ ಬಿದ್ದಿದ್ದ ಮಾಜಿ ಸೈನಿಕರೊಬ್ಬನ್ನು ಅಗ್ನಿಶಾಮಕ ದಳದ ಸಿಬಂದಿ ಹರಸಾಹಸ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ನಾಲೆಗೆ ಬಿದ್ದ ಮಾಜಿ ಸೈನಿಕ ಮಲ್ಲಿಕಾರ್ಜುನ್ ಮಾಡಿಯಾಳು ಎಂದು ಗುರುತಿಸಲಾಗಿದೆ. ಇವರು ಸಂಜೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ, ಎದುರಿಗೆ ಬಂದ ವಾಹನಕ್ಕೆ ದಾರಿ ನೀಡಲು ಹೋಗಿ ಆಯತಪ್ಪಿ ಕಾಲುವೆಯೊಳಗೆ ಬಿದ್ದಿದ್ದರು. ಕಳೆದ 2-3ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಕಾಲುವೆಯಲ್ಲಿ ನೀರು ರಭಸದಿಂದ ಹರಿಯುತ್ತಿತ್ತು. ನೀರಿನ ರಭಸಕ್ಕೆ ಅವರು ಕೊಚ್ಚಿಕೊಂಡು ನಾಲೆಯಲ್ಲಿ ಹದಿನೈದು ಅಡಿ ದೂರ ಹೋಗಿದ್ದರು.
ಅದೃಷ್ಟವಶಾತ್ ಅವರು ನಾಲೆಗೆ ಬಿದ್ದ ಸ್ಥಳ ಅಗ್ನಿಶಾಮಕ ದಳದ ಮುಖ್ಯ ಕಚೇರಿಯ ಮುಂಭಾಗದಲ್ಲಿ ಆಗಿತ್ತು. ಇದರಿಂದಾಗಿ ಕೂಡಲೇ ಅಗ್ನಿಶಾಮಕ ದಳದ ಸಿಬಂದಿ ರಕ್ಷಣೆಗೆ ಧಾವಿಸಿದರು. ಹಗ್ಗಗಳ ಸಹಾಯದಿಂದ ಅವರನ್ನು ಪ್ರಾಣಾಪಾಯದಿಂದ ಪಾರು ಮಾಡುವಲ್ಲಿಸಿಬಂದಿ ಯಶಸ್ವಿಯಾಗಿದ್ದಾರೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪರಶುರಾಮ್ ಅವರ ನೇತೃತ್ವದಲ್ಲಿ ಸುಮಾರು 1ಗಂಟೆಗಳ ಕಾಲ ಈ ರಕ್ಷಣಾ ಕಾರ್ಯ ನಡೆದಿದೆ.
ಸಿಬಂದಿಗಳಾದ ಮಲ್ಲಿಕಾರ್ಜುನ ತಳವಾರ, ಮೋತಿಲಾಲ್ ಪತಂಗೆ, ನಯೀಮ್, ಭೀಮಯ್ಯ, ಫಾರೂಕ್ ಅಲಿ ಮತ್ತು ವಿನೋದ್ ತಮ್ಮ ಶಕ್ತಿಮೀರಿ ಪ್ರಯತ್ನ ಮಾಡಿ ನಿವೃತ್ತ ಸೈನಿಕರನ್ನು ರಕ್ಷಣೆ ಮಾಡಿದ್ದಾರೆ. ಈ ಕಾರ್ಯ ಸುತ್ತಲಿನ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ