ಪ್ರಾಯೋಗಿಕ ವಿಮಾನ ಹಾರಾಟ ಸಿದ್ಧತೆ ಪರಿಶೀಲನೆ
Team Udayavani, Aug 26, 2018, 10:49 AM IST
ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಶ್ರೀನಿವಾಸ ಸರಡಗಿ ಹತ್ತಿರ ನಿರ್ಮಾಣಗೊಂಡಿರುವ ಕಲಬುರಗಿ ವಿಮಾನ ನಿಲ್ದಾಣದ ಕಾಮಗಾರಿ ಹಾಗೂ ಪ್ರಾಯೋಗಿಕ ವಿಮಾನ ಹಾರಾಟದ ಸಿದ್ಧತೆಗಳನ್ನು ಪರಿಶೀಲಿಸಿದರು.
ಕಲಬುರಗಿ ನಗರಕ್ಕೆ ಪ್ರಥಮ ಬಾರಿಗೆ ವಿಮಾನಗಳು ಬಂದಿಳಿಯುತ್ತಿವೆ. ಇದನ್ನು ನೋಡಲು ಸಾರ್ವಜನಿಕರಲ್ಲಿ ಕುತೂಹಲವಿದ್ದು, ಪ್ರಾಯೋಗಿಕ ವಿಮಾನ ಹಾರಾಟ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು. ಸಾರ್ವಜನಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮಾರ್ಗ ಗುರುತಿಸಬೇಕು. ಸಾರ್ವಜನಿಕರು ವಿಮಾನ ನಿಲ್ದಾಣಕ್ಕೆ ಆಗಮಿಸುವಾಗ ಯಾವುದೇ ತರಹದ ವಸ್ತುಗಳನ್ನು ಹಾಗೂ ಆಹಾರ ಪದಾರ್ಥಗಳನ್ನು ತರಬಾರದೆಂದು ಮನವಿ ಮಾಡಿದರು.
ಹೈದ್ರಾಬಾದ್ನಿಂದ ರವಿವಾರ ಬೆಳಗ್ಗೆ 10:30 ರಿಂದ 11 ರೊಳಗಾಗಿ ಒಂದು ವಿಮಾನ ಹಾಗೂ ಬೆಳಗ್ಗೆ 11 ರಿಂದ 11:15 ರೊಳಗಾಗಿ ಇನ್ನೊಂದು ವಿಮಾನ ಹೀಗೆ ಎರಡು ವಿಮಾನಗಳು ಬಂದಿಳಿಯಲಿವೆ. ಈ ವಿಮಾನಗಳು ಮರಳಿ ಮಧ್ಯಾಹ್ನ 12 ಕ್ಕೆ ಹಾಗೂ 12:30 ಕ್ಕೆ ಟೇಕಾಫ್ ಆಗಲಿವೆ.
ವಿಮಾನಗಳ ಲ್ಯಾಂಡಿಂಗ್ ಹಾಗೂ ಟೇಕಾಫ್ ಸಮಯದಲ್ಲಿ ರನ್ವೇ ಮೇಲೆ ಯಾವುದೇ ಪ್ರಾಣಿ ಅಥವಾ ಪಕ್ಷಿಗಳು ಇರದಂತೆ ನೋಡಿಕೊಳ್ಳಬೇಕು. ಸಾಧ್ಯವಾದಲ್ಲಿ ಪೊಲೀಸರು ಏರ್ಗನ್ ವ್ಯವಸ್ಥೆ ಮಾಡಿಕೊಳ್ಳಬೇಕೆಂದು ಸೂಚಿಸಿದರು.
ಪ್ರಾಯೋಗಿಕ ವಿಮಾನ ಹಾರಾಟ ಕಾರ್ಯಕ್ರಮಕ್ಕೆ ಕಲಬುರಗಿ ವಿಭಾಗದಿಂದ ಹಲವಾರು ನಾಯಕರು, ಗಣ್ಯರು, ಜನಪ್ರತಿನಿಧಿಗಳು ಆಗಮಿಸಲಿದ್ದು, ಅವರ ವಾಹನಗಳ ನಿಲುಗಡೆಗೆ ಹಾಗೂ ಕುಳಿತುಕೊಳ್ಳಲು ಆಸನ ವ್ಯವಸ್ಥೆ ಕಲ್ಪಿಸಬೇಕು. ಕಾರ್ಯಕ್ರಮಕ್ಕೆ ಯಾವುದೇ ತರಹದ ಅಡೆತಡೆ ಆಗದಂತೆ ಎಚ್ಚರಿಕೆ ವಹಿಸಬೇಕೆಂದು ತಿಳಿಸಿದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಏಶಿಯನ್ ಪೆಸಿಫಿಕ್ ಫ್ಲೆ„ಟ್ ಟ್ರೇನಿಂಗ್ ಅಕಾಡೆಮಿಯ ಮಹಮ್ಮದ್ ಫೈಸಲ್, ಕ್ಯಾಪ್ಟನ್ ಶಾಮ, ಲೋಕೋಪಯೋಗಿ ಇಲಾಖೆಯ ಅಧಿಧೀಕ್ಷಕ ಇಂಜಿನಿಯರ್ ಪ್ರಕಾಶ ಶ್ರೀಹರಿ, ಕಾರ್ಯನಿರ್ವಾಹಕ ಇಂಜಿನಿಯರ್ ಅಮೀನ್ ಮುಕ್ತಾರ,
ಪೊಲೀಸ್ ಅಧಿಕಾರಿಗಳು ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ