ಶೋಷಣೆ ನಿರುದ್ಯೋಗಕ್ಕೆ ಕಾರಣ
Team Udayavani, Oct 31, 2021, 10:06 AM IST
ವಾಡಿ: ಮಾನವ ಶೋಷಣೆ ಹೆಚ್ಚುತ್ತಿದ್ದಂತೆ ಬಂಡವಾಳಶಾಹಿಗಳ ಆಸ್ತಿ ಶಿಖರದಂತೆ ಬೆಳೆದಿದೆ. ಇದು ನಿರುದ್ಯೋಗ ಸಮಸ್ಯೆ ಸೃಷ್ಟಿಗೆ ಪ್ರಮುಖ ಕಾರಣವಾಗಿದೆ ಎಂದು ಆಲ್ ಇಂಡಿಯಾ ಡೇಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ರಾಜ್ಯಾಧ್ಯಕ್ಷೆ ಎಂ.ಉಮಾದೇವಿ ಹೇಳಿದರು.
ಪಟ್ಟಣದ ಅಂಬೇಡ್ಕರ್ ಸ್ಮಾರಕ ಭವನದಲ್ಲಿ ಶನಿವಾರ ಎಐಡಿವೈಒ ವತಿಯಿಂದ ಏರ್ಪಡಿಸಲಾಗಿದ್ದ 8ನೇ ಜಿಲ್ಲಾ ಮಟ್ಟದ ಯವಜನ ಸಮ್ಮೇಳನ ಉದ್ದೇಶಿಸಿ ಅವರು ಮಾತನಾಡಿದರು.
ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸಿದ್ದ ಭಗತ್ಸಿಂಗ್, ಚಂದ್ರಶೇಖರ ಆಜಾದ್, ಅಶಾಖುಲ್ಲಾಖಾನ್, ಖುರಾಂ ಬೋಸ್ ಅವರಂತ ಕ್ರಾಂತಿಕಾರಿಗಳ ನೇತೃತ್ವದಲ್ಲಿ ರಾಜಿರಹಿತ ಹೋರಾಟ ಹೂಡುವ ಮೂಲಕ ಬ್ರಿಟಿಷರ ಎದೆಗುಂಡಿಗೆ ನಡುಗಿಸಿದ್ದರು. ಆದರೆ ಸ್ವಾತಂತ್ರ್ಯ ಭಾರತದ ಆಡಳಿತ ವ್ಯವಸ್ಥೆ ಕ್ರಾಂತಿಕಾರಿಗಳ ಆಶಯ ಧಿಕ್ಕರಿಸಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶದಲ್ಲಿ ಹೊಸ ಬದಲಾವಣೆ ಬರಲು ಯುವಕರು ವೈಜ್ಞಾನಿಕ ಚಿಂತನೆ ಮೈಗೂಡಿಸಿಕೊಳ್ಳಬೇಕು. ಸಂಪ್ರದಾಯ, ಮೌಢ್ಯಾಚರಣೆಗಳಿಂದ ಹೊರಬರಬೇಕು. ಎಐಡಿವೈಒ ಸಂಘಟನೆ ಬಲಪಡಿಸಬೇಕು ಎಂದು ಕರೆ ನೀಡಿದರು.
ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಎಸ್ ಯುಸಿಐ (ಕಮ್ಯುನಿಸ್ಟ್) ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ದಿವಾಕರ, ದುಡಿಯುವ ಕೈಗಳಿಗೆ ಕೆಲಸವಿಲ್ಲ. ಬೆಲೆ ಏರಿಕೆಯಿಂದ ಜನರ ಶೋಷಣೆ ಆಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದನ್ನೂ ಓದಿ: ಹಲ್ಲೆ ಆರೋಪ: ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಎಐಡಿವೈಒ ಜಿಲ್ಲಾಧ್ಯಕ್ಷ ನಿಂಗಣ್ಣ ಜಂಬಗಿ, ಕಾರ್ಯದರ್ಶಿ ಜಗನ್ನಾಥ ಎಸ್. ಎಚ್, ಮುಖಂಡರಾದ ಭೀಮಾಶಂಕರ ಪಾಣೇಗಾಂವ, ಶರಣು ವಿ.ಕೆ, ಮಲ್ಲಿನಾಥ ಹುಂಡೇಕಲ್, ರಾಜು ಒಡೆಯರ, ಸಿದ್ಧು ಚೌದ್ರಿ, ಅಂಬಿಕಾ ಗುತ್ತೇದಾರ, ಸಾಯಿನಾಥ ಚಿಟೇಲಕರ, ಅವಿನಾಶ ಒಡೆಯರ ಹಾಗೂ ಜಿಲ್ಲೆಯ ಯುವ ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ