ವಾಡಿ: 33 ಗೋವುಗಳು ಪೊಲೀಸ್ ವಶಕ್ಕೆ ;ರೈತ ಮಹಿಳೆಯ ಕಣ್ಣೀರು

ಅಕ್ರಮ ಗೋವುಗಳ ಸಾಗಾಟ ಹೆಚ್ಚಳ; ಕ್ರಮಕ್ಕೆ ಶ್ರೀರಾಮಸೇನೆ ಆಗ್ರಹ

Team Udayavani, Jul 3, 2022, 7:35 PM IST

1-sdsad

ವಾಡಿ: ಕೋಲಿ ಸಮಾಜಕ್ಕೆ ಸೇರಿದ ರೈತ ಮಹಿಳೆಯೊಬ್ಬರು ತನ್ನ 33 ಗೋವುಗಳನ್ನು ರಸ್ತೆ ಮೂಲಕ ಮಗಳ ಊರಿಗೆ ಕೊಂಡೊಯ್ಯುತ್ತಿದ್ದ ವೇಳೆ ಹಿಂದೂ ಸಂಘಟಕರ ದಾಳಿಗೊಳಗಾಗಿ ಇಡೀ ದಿನ ಠಾಣೆಯಲ್ಲಿ ಗೋಳಾಡಿದ ಪ್ರಸಂಗ ರವಿವಾರ ಪಟ್ಟಣದಲ್ಲಿ ನಡೆದಿದೆ.

ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಗಡಿ ಗ್ರಾಮ ಯರಗೋಳದಿಂದ ರಾಷ್ಟ್ರೀಯ ಹೆದ್ದಾರಿ-150 ಮಾರ್ಗವಾಗಿ ಜಾನುವಾರುಗಳೊಂದಿಗೆ ಶಹಾಬಾದ ನಗರಕ್ಕೆ ಬರುತ್ತಿದ್ದ ಕಾಂತಮ್ಮ ದುರ್ಗಪ್ಪ ಹತ್ತಿಕುಣಿ ಎಂಬ ರೈತ ಮಹಿಳೆಯೇ ಕಣ್ಣೀರು ಹಾಕಿ ಪರದಾಡಿದ ಮಹಿಳೆಯಾಗಿದ್ದಾಳೆ.

ಯರಗೋಳದಲ್ಲಿ ವಾಸವಿದ್ದು, ಪತಿಯ ಸಾವಿನ ನಂತರ ಕಂಗೆಟ್ಟ ಕಾಂತಮ್ಮ, ಮಗಳು ಸಾವಿತ್ರಿಬಾಯಿ ವಾಸವಿರುವ ಶಹಾಬಾದ ನಗರಕ್ಕೆ ತನ್ನೆಲ್ಲ ಗೋವುಗಳನ್ನು ಸ್ಥಾಳಂತರಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಮಾರ್ಗ ಮಧ್ಯೆ ವಾಡಿ ಪಟ್ಟಣದ ಹೊರ ವಲಯದ ಬಳಿರಾಮ ಚೌಕ್ ಮೂಲಕ ಹೋಗುತ್ತಿದ್ದಾಗ ಶ್ರೀರಾಮ ಸೇನೆಯ ಅಧ್ಯಕ್ಷ ವಿನೋದ ಹಿಂದೂ, ಕಾರ್ಯದರ್ಶಿ ವಿಶ್ವ ತಳವಾರ, ಕಾರ್ಯಕರ್ತರಾದ ಕರಣ ರಾಠೋಡ ಅವರು ಅಕ್ರಮವಾಗಿ ಗೋವುಗಳನ್ನು ಕಸಾಯಿ ಖಾನೆಗೆ ಸ್ಥಳಾಂತರಿಸುತ್ತಿದ್ದಾರೆ ಎಂಬ ಅನುಮಾನದಡಿ ತಡೆದು ಪೊಲೀಸರಿಗೆ ದೂರು ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕಾಗಮಿಸಿದ ಪೊಲೀಸರು,17 ಹಸು, 8 ಕರು, 4 ಹೊರಿ, 4 ಮಣಕಾ ಸೇರಿದಂತೆ ಒಟ್ಟು33 ಗೋವುಗಳನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ತಂದಿದ್ದಾರೆ. ಆಕಳನ್ನು ಕಟುಕರಿಗೆ ಮಾರಲು ತಂದಿಲ್ರೀ.. ನನ್ನ ಮಗಳ ಊರಿಗೆ ಬಿಡಲು ತಂದಿದ್ದೇನೆ. ಸಾಕುವ ಜಾನುವಾರಗಳನ್ನು ನಾನು ಕಟುಕರಿಗೆ ಮಾರಲ್ರೀ ಸಾಹೇಬರಾ ನನಗ ಬಿಟ್ಟುಬಿಡ್ರೀ ಎಂದು ಮಹಿಳೆ ಕಾಂತಮ್ಮ ಪೊಲೀಸರಿಗೆ ಪರಿಪರಿಯಾಗಿ ಮನವಿ ಮಾಡಿದರು.

ಸಾರ್ವಜನಿಕರ ದೂರಿನ ಮೇರೆಗೆ ಗೋವುಗಳನ್ನು ವಶಕ್ಕೆ ಪಡೆದು ಸಾಗಾಣಿಕೆ ಪರವಾನಿಗೆ ಇಲ್ಲದ ತಪ್ಪಿನಡಿ ಪ್ರಕರಣ ದಾಖಲಿಸಿಕೊಂಡು ಜಾನುವಾರುಗಳನ್ನು ಕೊಂಚೂರು ಪುಣ್ಯಕೋಟಿ ಗೋಶಾಲೆಗೆ ಕಳುಹಿಸಲಾಗಿದೆ ಎಂದು ಪಿಎಸ್‌ಐ ಮಹಾಂತೇಶ ಜಿ.ಪಾಟೀಲ ತಿಳಿಸಿದ್ದಾರೆ.

ಕ್ರಮಕ್ಕೆ ಆಗ್ರಹ

ಬಕ್ರೀದ್ ಸಮೀಪಿಸುತ್ತಿದ್ದಂತೆ ಅಕ್ರಮವಾಗಿ ಗೋವುಗಳ ಸಾಗಾಟ ಹೆಚ್ಚಾಗಿ ಕಂಡುಬರುತ್ತದೆ. ಗೋವು ಮತ್ತು ಒಂಟೆಗಳನ್ನು ಕಸಾಯಿ ಖಾನೆಗೆ ಸಾಗಿಸುವ ಜಾಲ ಕ್ರೀಯಶೀಲವಾಗುತ್ತದೆ. ರವಿವಾರದ ಪ್ರಕರಣದಲ್ಲಿ ಹಿಂದೂ ಮಹಿಳೆಯ ಮೂಲಕ ೩೩ ಗೋವುಗಳನ್ನು ಕಸಾಯಿ ಖಾನೆಗೆ ಸಾಗಿಸಲು ಕಟುಕರು ತಂತ್ರ ರೂಪಿಸಿರುವ ಸಾಧ್ಯತೆಯಿದೆ. ಗೋಹತ್ಯೆ ನಿಷೇಧದ ನಡುವೆಯೂ ಜಾನುವಾರುಗಳ ಮಾಂಸ ದಂಧೆ ವ್ಯಾಪಕವಾಗಿ ನಡೆಯುತ್ತಿದೆ. ಇದನ್ನು ಸೂಕ್ತ ತನಿಖೆಯಿಂದ ಪತ್ತೆ ಹಚ್ಚಿ ಪೊಲೀಸರು ಆರೋಪಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹಿಂದೂ ಪರ ಸಂಘಟನೆಗಳ ಮುಖಂಡರಾದ ವೀರಣ್ಣ ಯಾರಿ, ರವಿ ಕಾರಬಾರಿ, ಜಗತ್‌ಸಿಂಗ್ ರಾಠೋಡ, ದೌಲತರಾವ ಚಿತ್ತಾಪುರಕರ, ಕುಮಾರ ಚವ್ಹಾಣ, ಉಮೇಶ ರಾಠೋಡ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.