ರೈತರ ಮನೆಬಾಗಿಲಿಗೆ ತೋಟಗಾರಿಕೆ


Team Udayavani, Mar 5, 2017, 2:39 PM IST

gul1.jpg

ಕಲಬುರಗಿ: ಇವತ್ತಿನ ದಿನಗಳಲ್ಲಿ ರೈತರನ್ನು ಆರ್ಥಿಕವಾಗಿ ಬಲಗೊಳಿಸುವ ಹಿನ್ನೆಲೆಯಲ್ಲಿ ತೋಟಗಾರಿಕೆಯನ್ನು ರೈತರ ಮನೆ ಬಾಗಿಲಿಗೆ ಕೊಂಡೊಯ್ಯುವ ಜರೂರತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.ಇಲ್ಲಿನ ಸಾರ್ವಜನಿಕ ಉದ್ಯಾನವನದಲ್ಲಿ ಶನಿವಾರ ಸಂಜೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಮತ್ತು ತೋಟಗಾರಿಕೆ ಇಲಾಖೆ ಆಯೋಜಿಸಿದ್ದ ಫಲ-ಪುಷ್ಪ ಪ್ರದರ್ಶನ 2016-17ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. 

ಬರಗಾಲ, ಹವಾಮಾನ ವೈಪರಿತ್ಯ, ರಸಾಯನಿಕದ ಅಡ್ಡ ಪರಿಣಾಮಗಳಿಂದ ರೈತರು ಪದೇ ಪದೇ ಸೋಲುತ್ತಿದ್ದಾರೆ. ಅವರ ಬೆನ್ನಿಗೆ ಸರಕಾರವಿದೆ ಎನ್ನುವ ಭರವಸೆ ಮೂಡಿಸಬೇಕಾದರೆ ಅವರನ್ನು ಆರ್ಥಿಕವಾಗಿ ಬಲಗೊಳಿಸಬೇಕಿದೆ. ಈ ನಿಟ್ಟಿನಲ್ಲಿ ತೋಟಗಾರಿಕೆ ಒಂದು ಉತ್ತಮ ಸಾಧನವಾಗಲಿದೆ. ಆದರೆ, ಅಧಿಕಾರಿಗಳು ತೋಟಗಾರಿಕೆಯಲ್ಲಿ ಲಾಭಗಳು, ಬೆಳೆ ಪದ್ಧತಿ ಮತ್ತು ಇಳುವರಿಯ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕು. 

ಅದರಿಂದ ಅವರು ತೋಟಗಾರಿಕೆಯತ್ತ ಮುಖ ಮಾಡುತ್ತಾರೆ ಎಂದರು. ಜಿಲ್ಲೆಯಲ್ಲಿ ತೋಟಗಾರಿಕೆ ಕಡಿಮೆ ಇದೆ. ಅದನ್ನು ಹೆಚ್ಚಿಗೆ ಮಾಡುವ ಮತ್ತು ಕೇವಲ ಇಲಾಖೆ ಗುರಿಗೆ ಜೋತು ಬೀಳದೆ ರೈತರಿಗೆ ಯೋಜನೆ ಪ್ರಯೋಜನ ತಲುಪಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದ ಅವರು, ಈಗೀಗ ತಂತ್ರಜ್ಞಾನ ಬೆಳೆಯುತ್ತಿದೆ. ಯುವಕರು ಹೆಚ್ಚೆಚ್ಚು ಕೃತಿ ಕಡೆಗೆ ಆಕರ್ಷಣೆಗೊಳಗಾಗುತ್ತಿದ್ದಾರೆ.

ಆದ್ದರಿಂದ ಯುವಕರಿಗೆ ನೆರವಾಗುವ ನಿಟ್ಟಿನಲ್ಲಿ ಲಭ್ಯ ಮಾಧ್ಯಗಳನ್ನು ಬಳಕೆ ಮಾಡಿಕೊಂಡು ಯುವ ಜನತೆಯನ್ನು ಕೃಷಿ ಮತ್ತು ತೋಟಗಾರಿಕೆ ಕಡೆಗೆ ಆಹ್ವಾನಿಸಿ ಎಂದರು. ಸೆಡ್‌ನೆಟ್‌, ಪಾಲಿಹೌಸ್‌ ಆಸಕ್ತಿ ಹೆಚ್ಚಾಗುತ್ತಿದೆ. ಜಿಲ್ಲೆಗೆ ನೀಡಿರುವ ಗುರಿಯ ಕುರಿತು ಕೃಷಿ ಸಚಿವರೊಂದಿಗೆ ಮಾತನಾಡಿ ಹೆಚ್ಚಳ ಮಾಡಲು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಅಲ್ಲದೆ ಏನಾದರೂ ಸಮಸ್ಯೆಗಳಿದ್ದರೆ ನನ್ನೊಂದಿಗೆ ನೇರವಾಗಿ ಮಾತನಾಡಿ, ಸದಾ ನಿಮ್ಮ ಸೇವೆಗೆ ಲಭ್ಯ ಇರತ್ತೇನೆ ಎಂದರು. ಹವಾಮಾನ ಆಧಾರಿತ, ಮಿಶ್ರ ಬೇಸಾಯ ಪದ್ಧತಿ, ನೀರುಕಡಿಮೆ ಬಳಕೆ ಮಾಡುವ ಪದ್ಧತಿಗಳಲ್ಲಿ ತೋಟಗಾರಿಕೆ ಫಲಸಲು ತೆಗೆಯುವ ನಿಟ್ಟಿನಲ್ಲಿ ಮಾಹಿತಿ ನೀಡಿ. ಜಿಲ್ಲೆಯಲ್ಲೂ ಅತೀ ಹೆಚ್ಚು ಹಣ್ಣಿನ ಬೆಳೆಗಳನ್ನು ಬೆಳೆಯಿರಿ, ಜಿಲ್ಲೆಯಲ್ಲಿ ಕಾಗಿಣಾ ನದಿಯಲ್ಲಿ ನೀರಿನ ಕೊರತೆ ಇಲ್ಲ.

ಆದರೆ, ಅದನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಿಲ್ಲಾ ಪಂಚಾಯತ್‌ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜೀವನ್‌ ಯಾಕಾಪುರ ಮಾತನಾಡಿ, ಜಿಲ್ಲೆಯಲ್ಲಿ ತೋಟಗಾರಿಕೆಗೆ ವಿಫುಲ ಅವಕಾಶಗಳಿವೆ. ಆದರೆ, ಇಲಾಖೆಯಲ್ಲಿ ಜಿಲ್ಲೆಗೆ ನೀಡಿರುವ ಹಲವಾರು ಜನೆಗಳ ಅಡಿ ಗುರಿ ಕಡಿಮೆ ಇದೆ. ಇದರಿಂದಾಗಿ ಎಲ್ಲ ಅರ್ಹ ರೈತರಿಗೆ ಯೋಜನೆ ಪ್ರಯೋಜನ ತಲುಪಿಸಲು ಸಾಧ್ಯವಾಗುತ್ತಿಲ್ಲ.

ಆದ್ದರಿಂದ ಸಚಿವರು, ಗುರಿಹೆಚ್ಚಳಕ್ಕೆ ಹೆಚ್ಚು ಆಸಕ್ತಿ ವಹಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಅತಿ ಹೆಚ್ಚು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಸಾಧ್ಯವಾಗುತ್ತದೆ ಎಂದರು.ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪಾ ಪಾಟೀಲ ದಂಗಾಪುರ, ತೋಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರು, ಜಿಪಂ ಅಧ್ಯಕ್ಷೆ ಸುವರ್ಣಾ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ,

ಎನ್‌ಇಕೆಆರ್‌ಟಿಸಿ ಅಧ್ಯಕ್ಷ ಇಲಿಯಾಸ್‌ ಸೇಠ ಬಾಗಬಾನ್‌, ಜಿಪಂ ಸಿಇಒ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾ ಹಾಪ್ಸಕಾಮ್‌ ಅಧ್‌ ಯಕ್ಷ ಮಲ್ಲಿಕಾರ್ಜುನ ಭೂಶೆಟ್ಟಿ ಇದ್ದರು. ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮೊಹಮ್ಮದ ಅಲಿ ಸ್ವಾಗತಿಸಿದರು. ಶಿವಕುಮಾರ ಪವಾಡಶೆಟ್ಟಿ ಹಾಗೂ ತಾಲೂಕು ಸಹಾಯಕ ಅಧಿಕಾರಿಗಳು ಇದ್ದರು. ಆರ್‌ಜೆ ವಾಣಿಶ್ರೀ ನಿರೂಪಿಸಿದರು. 

ಟಾಪ್ ನ್ಯೂಸ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

3

ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

doctor

Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!

1-wqeewqe

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Suresh Sajjan submits nomination as BJP rebel candidate

Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ

ಕಲಬುರಗಿ: ಎಂಎಲ್ಸಿ ಚುನಾವಣೆಯಲ್ಲಿ ಕೈತಪ್ಪಿದ ಟಿಕೆಟ್: ಬಿಜೆಪಿಯಲ್ಲಿ ಬಂಡಾಯ ಬಿಸಿ

ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…

2-kalburgi

Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ

1-wqew-ewqe

Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್‌!: 7 ಮಂದಿ ಸೆರೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

Kalladka: ಕಾರು ಢಿಕ್ಕಿಯಾಗಿ ಪಾದಚಾರಿ ಗಾಯ

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.