ರೈತರನ್ನುಳಿಸಿ ಲಾಭ ಪಡೆಯಿರಿ


Team Udayavani, Nov 27, 2020, 5:12 PM IST

ರೈತರನ್ನುಳಿಸಿ ಲಾಭ ಪಡೆಯಿರಿ

ಅಫಜಲಪುರ: ಯಾವುದೇ ಕಾರ್ಖಾನೆ, ಕಂಪನಿಗೆ ಲಾಭದ ಉದ್ದೇಶ ಇರುವುದು ಸಹಜ. ಆದರೆ ರೈತರನ್ನು ಉಳಿಸಿ ಆಮೇಲೆ ಲಾಭದ ಲೆಕ್ಕ ಹಾಕಿ ಎಂದುಶಾಸಕ ಎಂ.ವೈ. ಪಾಟೀಲ ಮನವಿ ಮಾಡಿದರು.

ತಹಶೀಲ್ದಾರ್‌ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ರೇಣುಕಾ ಸಕ್ಕರೆ ಕಾರ್ಖಾನೆ ಅ ಧಿಕಾರಿಗಳು ಮತ್ತು ರೈತರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಒಂದೇ ಸಕ್ಕರೆ ಕಾರ್ಖಾನೆ ಇದೆ. ಆದ್ದರಿಂದ ಆಡಳಿತ ಮಂಡಳಿ ಜವಾಬ್ದಾರಿಯಿಂದ ಇರಬೇಕು. ರೈತರು ಕಷ್ಟದಲ್ಲಿದ್ದಾರೆ. ಪ್ರವಾಹದಿಂದ ಕಬ್ಬು ಹಾಳಾಗುತ್ತಿದೆ. ಇಂತಹ ರೈತರಿಗೆ ಮೊದಲ ಆದ್ಯತೆ ನೀಡಿ, ಕಬ್ಬು ಕಟಾವು ಮಾಡಿಸಿ ಎಂದು ಸಲಹೆ ನೀಡಿದರು.

ಕಾರ್ಖಾನೆ ಸರ್ಕಾರದ ನಿಯಮ ಪಾಲಿಸುತ್ತಿಲ್ಲ. ಕಾರ್ಖಾನೆ ಆರಂಭಿಸುವ ಮುನ್ನ ರೈತರು, ಜನಪ್ರತಿನಿ ಧಿಗಳೊಂದಿಗೆ ಸಭೆ ನಡೆಸಿ, ನಡಾವಳಿ ಮಾಡಿದ ಪ್ರಕಾರ ನಡೆದುಕೊಳ್ಳಬೇಕು. ಆದರೆ ಮನಸೋ ಇಚ್ಚೆ ನಡೆದುಕೊಳ್ಳುತ್ತಿದ್ದಿರಿ. ಸರ್ಕಾರರೈತರ ನೆರವಿಗೆ ಬರುವ ಮುನ್ನ ನೀವು ಬರಬೇಕಿತ್ತು. ಆದರೆ ನಿಮ್ಮಲ್ಲಿ ರೈತರ ಮೇಲೆ ಕಾಳಜಿ ಕಾಣುತ್ತಿಲ್ಲ ಎಂದು ತರಾಟೆ ತೆಗೆದುಕೊಂಡರು.

ಕಾರ್ಖಾನೆಗೆ ಸಂಬಂಧ ಪಟ್ಟ ಘತ್ತರಗಿ ಗ್ರಾ.ಪಂಗೆ ನೀವು ತೆರಿಗೆ ಕಟ್ಟುತ್ತಿಲ್ಲ.ಆದ್ದರಿಂದ ಕೂಡಲೇ ಕಾರ್ಖಾನೆ ಪ್ರಾರಂಭದಿಂದ ಇಲ್ಲಿಯವರೆಗೆ ಪಂಚಾಯಿತಿಗೆ ಬರಬೇಕಾಗಿರುವ ತೆರಿಗೆ ಪಾವತಿಸಿ ಎಂದು ಸೂಚಿಸಿದರು.

ಶರಣು ಕುಂಬಾರ, ಸಿದ್ದರಾಮ ದಣ್ಣೂರ, ಅರ್ಜುನ ಕುಂಬಾರ, ಶಂಕರ ಸೋಬಾನಿ ಮಾತನಾಡಿ, ಕಬ್ಬು ಕಟಾವುಮಾಡಿ ಕಾರ್ಖಾನೆಗೆ ಸಾಗಿಸಲುಮಾರ್ಗ ವೆಚ್ಚವನ್ನು ಕಿಲೋ ಮಿಟರ್‌ ಪ್ರಕಾರ ನಿಗದಿ ಪಡಿಸಬೇಕು. ಕಟಾವಾದ ಹದಿನೈದು ದಿನಗಳಲ್ಲಿ ರೈತರ ಖಾತೆಗೆ ಹಣ ಜಮೆ ಮಾಡುತ್ತಿಲ್ಲ, ಯಾಕೆ ಹೀಗೆ ಎಂದು ಕೇಳಿದರೆ ಎಫ್‌ಆರ್‌ಪಿ ಬರುವುದಿಲ್ಲ ಎಂದು ಹಾರಿಕೆ ಉತ್ತರ ನಿಡಲಾಗುತ್ತಿದೆ.

ಆದರೆ ಇಥೆನಾಲ್‌ ಹಾಗೂ ಸ್ಪಿರಿಟ್‌ ತಯಾರಿಕೆ ಬಿಟ್ಟರೆ ಸರಿಯಾಗಿ ಎಫ್‌ ಆರ್‌ಪಿ ಬರುತ್ತದೆ. ಇದೆಲ್ಲವನ್ನು ಕಾರ್ಖಾನೆಯವರು ಮಾಡದೆ ತಮ್ಮ ಲಾಭಕ್ಕಾಗಿ ರೈತರನ್ನು ಬಲಿ ಕೊಡುತ್ತಿದ್ದಾರೆ ಎಂದು ಆರೋಪಿಸಿದರಲ್ಲದೇ, ವಾರದೊಳಗೆ ಬೇಡಿಕೆ ಈಡೇರಿಸದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾರ್ಖಾನೆ ಅಧಿಕಾರಿ ಸಂಜುಕುಮಾರ ಮಾತನಾಡಿ, ಎಫ್‌ಆರ್‌ಪಿ ಪ್ರಕಾರವೇ ನಾವು ರೈತರಿಗೆ ಹಣ ಪಾವತಿ ಮಾಡುತ್ತಿದ್ದೇವೆ. ಸಭೆಯಲ್ಲಿ ನಡೆದ ಚರ್ಚೆ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದು, ಸಮಸ್ಯೆ ಪರಿಹರಿಸುವ ಕೆಲಸ ಮಾಡಲಾಗುವುದು ಎಂದರು.

ತಹಶೀಲ್ದಾರ್‌ ನಾಗಮ್ಮ ಕೆ. ಮಾತನಾಡಿ, ಕಾರ್ಖಾನೆಯಲ್ಲಿನಸಮಸ್ಯೆ ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿ. ಆದಷ್ಟು ಬೇಗ ಶಾಸಕರು, ಕಂದಾಯ ಇಲಾಖೆ ಹಾಗೂ ರೈತರ ಜಂಟಿ ಸಭೆ ನಡೆಸಬೇಕು. ರೈತರಿಗೆ ಅನ್ಯಾಯವಾದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಸದಸ್ಯ ರಾಜು ಬಬಲಾದ, ಮುಖಂಡರಾದ ದತ್ತು ಜಮಾದಾರ,ರಘುನಾಥ, ಸುನಿಲ ಹೊಸಮನಿ, ರಾಜು ಬಡದಾಳ, ಸಿದ್ದು ದಣ್ಣುರ, ವಿಶ್ವನಾಥ ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಮತ್ತಿತರರು ಇದ್ದರು.

ರೇಣುಕಾ ಸಕ್ಕರೆ ಕಾರ್ಖಾನೆಯಲ್ಲಿ ಬಡ ರೈತರಿಗೆ ಅನ್ಯಾಯವಾಗುತ್ತಿದೆ. ಯಾರು ಅಧಿಕಾರಿಗಳಿಗೆ ಹಣ ನೀಡುತ್ತಾರೋ, ದಬ್ಟಾಳಿಕೆ ಮಾಡುತ್ತಾರೋ ಅಂತವರ ಕಬ್ಬನ್ನು ಮೊದಲು ತೆಗೆದುಕೊಳ್ಳಲಾಗುತ್ತಿದೆ. ಆರರಿಂದ ಎಂಟು ತಿಂಗಳ ಕಬ್ಬು ತೆಗೆದುಕೊಳ್ಳುತ್ತಿದ್ದಾರೆ. 12 ತಿಂಗಳು ಕಷ್ಟಪಟ್ಟು ಬೆಳೆದ ಕಬ್ಬನ್ನು ತೆಗೆದುಕೊಳ್ಳದೆ ತಾರತಮ್ಯ ಮಾಡುತ್ತಿದ್ದಾರೆ. ತೂಕದಲ್ಲೂವ್ಯತ್ಯಾಸ ಮಾಡುತ್ತಿದ್ದಾರೆ. ಎಫ್‌ಆರ್‌ಪಿ ಪ್ರಕಾರ ಹಣ ಪಾವತಿಸುತ್ತಿಲ್ಲ. ಕೆಪಿಆರ್‌ ಕಾರ್ಖಾನೆ ನಿಗದಿ ಪಡಿಸಿದ ಹಣವನ್ನು ಇಲ್ಲೂ ನೀಡಬೇಕು. – ಶ್ರೀಮಂತ ಬಿರಾದಾರ, ರೈತ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.