ಬರ ಪರಿಹಾರಕ್ಕೆ ಆಗ್ರಹಿಸಿ ರೈತರ ಪ್ರತಿಭಟನೆ
Team Udayavani, Nov 17, 2018, 11:01 AM IST
ಕಲಬುರಗಿ: ಬರ ಪರಿಹಾರ ಸೇರಿದಂತೆ ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ರೈತ-ಕೃಷಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಮುಂಗಾರು ಬೆಳೆ ನಷ್ಟದ ಪರಿಹಾರವನ್ನು ಕೂಡಲೇ ಬಿಡುಗಡೆ ಮಾಡಬೇಕು. ರೈತರ ಸಾಲದ ಜೊತೆಗೆ ಕೃಷಿ ಕಾರ್ಮಿಕರ, ಸ್ತ್ರೀ ಶಕ್ತಿ ಸಂಘಗಳ, ನಿರುದ್ಯೋಗಿ ರೈತ ಮಕ್ಕಳ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು, ಬೆಳೆ ನಷ್ಟ ಪರಿಹಾರವನ್ನು ಕೆಲ ಬ್ಯಾಂಕ್ಗಳು ಸಾಲಕ್ಕೆ ವಜಾ ಮಾಡಿಕೊಳ್ಳುತ್ತಿದ್ದು, ಕೂಡಲೇ ಇದನ್ನು ನಿಲ್ಲಿಸಬೇಕು. ಬರ ಪರಿಹಾರ ಕಾಮಗಾರಿಗಳನ್ನು ತ್ವರಿತವಾಗಿ ಆರಂಭಿಸಬೇಕೆಂದು ಒತ್ತಾಯಿಸಿದರು.
ಕೃಷಿ ಕಾರ್ಮಿಕರು ಪಟ್ಟಣಗಳಿಗೆ ವಲಸೆ ಹೋಗುವುದನ್ನು ತಡೆಯಲು ಉದ್ಯೋಗ ಒದಗಿಸಬೇಕು. ಉದ್ಯೋಗ ಖಾತ್ರಿ
ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಪಡಿಸಬೇಕು. ಗ್ರಾಮಗಳ ಜನರಿಗೆ ಹಾಗೂ ಜಾನುವಾರುಗಳಿಗೆ ಸಮರ್ಪಕ ಕುಡಿವ ನೀರು ಒದಗಿಸಬೇಕು. ಗ್ರಾ.ಪಂ. ಮಟ್ಟದಲ್ಲಿ ಜಾನುವಾರುಗಳಿಗೆ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅವಶ್ಯವಿದ್ದ ಕಡೆ ಗೋಶಾಲೆ ಹಾಗೂ ಮೇವು ಬ್ಯಾಂಕ್ಗಳನ್ನು ಆರಂಭಿಸಬೇಕು, ಉಚಿತ ಮೇವು ಒದಗಿಸಬೇಕು, ಕುಸಿದಿರುವ
ಅಂತರ್ಜಲಮಟ್ಟ ಹೆಚ್ಚಿಸಲು ಕೆರೆ, ಕಾಲುವೆಗಳ ದುರಸ್ತಿ ಹಾಗೂ ಹೂಳೆತ್ತುವ ಕೆಲಸಗಳನ್ನು ಕೈಗೊಳ್ಳಬೇಕು, ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಿ ಗುಣಮಟ್ಟ ಖಾತ್ರಿ ಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾ ಸಂಚಾಲಕ ಗಣಪತರಾವ್ ಕೆ. ಮಾನೆ, ದಿವಾಕರ ಹಾಗೂ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ