ಆರನೇ ದಿನಕ್ಕೆ ಕಾಲಿಟ್ಟ ರೈತರ ಧರಣಿ
Team Udayavani, Nov 13, 2017, 10:49 AM IST
ಅಫಜಲಪುರ: ಕಬ್ಬಿಗೆ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿ ಕಬ್ಬು ಬೆಳೆಗಾರ ಸಂಘದವರು ಮತ್ತು ಕಬ್ಬು ಬೆಳೆಗಾರ ರೈತರು ರೇಣುಕಾ ಸಕ್ಕರೆ ಕಾರ್ಖಾನೆ ಎದುರು ಕುಳಿತಿರುವ ಧರಣಿ ಆರನೇ ದಿನಕ್ಕೆ ಕಾಲಿಟ್ಟಿದೆ.
ಧರಣಿ ಸ್ಥಳಕ್ಕೆ ಬಿಜೆಪಿ ಮುಖಂಡ, ಸಮಾಜ ಸೇವಕ ರಾಜೇಂದ್ರ ಪಾಟೀಲ ಭೇಟಿ ನೀಡಿ ಮಾತನಾಡಿ, ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ, ನೀರಿನ ಅಭಾವದ ಮಧ್ಯೆ ಸಾಲ ಮಾಡಿ ಕಬ್ಬು ಬೆಳೆದಿರುವ ರೈತರಿಗೆ ನ್ಯಾಯಯುತ ಬೆಲೆಯನ್ನು
ಕಾರ್ಖಾನೆಯವರು ನೀಡುತ್ತಿಲ್ಲ. ಇಷ್ಟು ವರ್ಷಗಳ ಕಾಲ ರೈತರಿಗೆ ಅನ್ಯಾಯ ಮಾಡಿದ್ದಾರೆ. ಈಗಲೂ ಇದೇ ಪ್ರವೃತ್ತಿ ಮುಂದುವರಿಸಿದ್ದಾರೆ. ಹೀಗಾಗಿ ಪ್ರತಿಭಟನೆ, ಧರಣಿ ಅನಿವಾರ್ಯವಾಗಿದ್ದು, ರೈತರ ಧರಣಿಗೆ ನಾವು ಬೆಂಬಲಿಸುತ್ತೇವೆ. ಅಲ್ಲದೆ ರಾಜ್ಯದಲ್ಲಿ ಬೇರೆ ಕಾರ್ಖಾನೆಗಳಲ್ಲಿ ಸಿಗುತ್ತಿರುವ ಬೆಲೆ ಇಲ್ಲೂ ಸಿಗಬೇಕು ಎಂದು ಹೇಳಿದರು.
ಧರಣಿ ಕುಳಿತಿರುವ ರೈತರಿಗೆ ಧರಣಿ ಮುಗಿಯುವ ವರೆಗೂ ನಮ್ಮ ಆರ್.ವಿ ಫೌಂಡೇಶನ್ ವತಿಯಿಂದ ಊಟ ಮತ್ತು
ಉಪಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ನಾವು ಸದಾ ರೈತರೊಂದಿಗೆ ಇರುತ್ತೇವೆ ಎಂದು ಹೇಳಿದರು.
ಕಬ್ಬು ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷ ರಮೇಶ ಹೂಗಾರ ಮಾತನಾಡಿ, ರೇಣುಕಾ ಸಕ್ಕರೆ ಕಾರ್ಖಾನೆಯವರು ನಮ್ಮ ತಾಲೂಕಿನ ರೈತರೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ. ಹೀಗಾಗಿ ನಮ್ಮ ರೈತರಿಗೆ ನ್ಯಾಯ ಸಿಗುವವರೆಗೆ ನಾವು
ಧರಣಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.
ಮುಖಂಡರಾದ ಶಿವು ಪ್ಯಾಟಿ, ದಯಾನಂದ ಪಾರಗೊಂಡ, ಸುರೇಶ ಸಿಂಗೆ, ಮಹಾಂತೇಶ ಉಜನಿ, ಗಜೇಂದ್ರ ಜೇರಟಗಿ, ಪ್ರಶಾಂತ ಹಿರೇಮಠ, ರಾಜು ನಿಂಬಾಳ, ಬಸವರಾಜ ಗುಣಾರಿ, ರೈತರಾದ ಮಲ್ಲು ಬಳೂರ್ಗಿ, ಪರೇಪ್ಪ ಬಳೂರ್ಗಿ, ಮಲ್ಲು ಸೋಲಾಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ