ಗುಳೆ ಹೊರಡಲು ಸಿದ್ಧವಾದ ರೈತರು, ಕೃಷಿ ಕಾರ್ಮಿಕರು


Team Udayavani, Oct 14, 2018, 6:00 AM IST

ban14101807medn.jpg

ಕಲಬುರಗಿ: ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದ ತತ್ತರಿಸಿದ್ದ ಉತ್ತರ ಕರ್ನಾಟಕದ ರೈತರಿಗೆ ಈಗ ಹಿಂಗಾರಿಯಲ್ಲೂ ಬರದ ಛಾಯೆ ಆವರಿಸಿದೆ. ಬದುಕು ದುಸ್ತರವಾಗಿದ್ದು, ಅನ್ನದಾತರು ಹಾಗೂ ಕೃಷಿ ಕಾರ್ಮಿಕರು ಗುಳೆ ಹೊರಡಲು ಸಜ್ಜಾಗಿದ್ದಾರೆ.

ಮಳೆ ಅಭಾವದಿಂದ ಹೈಕ ಭಾಗದಲ್ಲಿ ಮುಂಗಾರು ಬೆಳೆಗಳು ಬರಲಿಲ್ಲ. ಈಗ ಹಿಂಗಾರಿಯಲ್ಲೂ ಭೂಮಿಯಲ್ಲಿ ತೇವಾಂಶವಿಲ್ಲದ ಕಾರಣ ಜೋಳ, ಕಡಲೆ, ಗೋಧಿ ಬಿತ್ತನೆ ಬಿತ್ತನೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಸೆಪ್ಟೆಂಬರ್‌ ಕೊನೆ ವಾರ, ಅಕ್ಟೋಬರ್‌ನ ಮೊದಲೆರಡು ವಾರ ಜೋಳ ಬಿತ್ತನೆಗೆ ಸಕಾಲ. ಈಗಲೂ ಬಿತ್ತನೆ ಮಾಡಲಾಗದೆ ಕೆಲ ರೈತರು, ಕೃಷಿ ಕಾರ್ಮಿಕರು ಗುಳೆಗೆ ಮುಂದಾಗಿದ್ದಾರೆ.

ಉತ್ತರ ಕರ್ನಾಟಕದಾದ್ಯಂತ ಪ್ರತಿವರ್ಷ ಸುಮಾರು 12 ಲಕ್ಷ ಹೆಕ್ಟೇರ್‌ ಭೂಮಿಯಲ್ಲಿ ಜೋಳ ಬಿತ್ತನೆಯಾಗುತ್ತದೆ. ರಾಜ್ಯದಲ್ಲಿ ಜೋಳದಿಂದಲೇ 50 ಲಕ್ಷ ಮೆಟ್ರಿಕ್‌ ಟನ್‌ ಮೇವು ದೊರಕುತ್ತದೆ. ಈ ಬಾರಿ ಶೇ.25ರಷ್ಟು ಕೂಡ ಬಿತ್ತನೆಯಾಗಿಲ್ಲ. ಕಡಲೆ ಸಹ ಉತ್ತರ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಸೇರಿ ಕನಿಷ್ಠ 20 ಲಕ್ಷಕ್ಕೂ ಅಧಿಕ ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆಯಾಗುತ್ತದೆ. ಮಳೆ ಬರಬಹುದು ಎಂಬ ಆಶಾಭಾವನೆಯಲ್ಲಿದ್ದವರಿಗೆ ಹಿಂಗಾರು ಕೈಕೊಟ್ಟು ಆತಂಕದ ಸ್ಥಿತಿ ನಿರ್ಮಾಣ ಮಾಡಿದೆ.

ಗೋಧಿ, ಕುಸುಬೆ, ಸೂರ್ಯಕಾಂತಿ ಬಿತ್ತನೆಗೂ ಮುಂದಾಗುತ್ತಿಲ್ಲ. ಮುಂಗಾರು ಹಂಗಾಮಿನ ಅಲ್ಪಾವಧಿ ಬೆಳೆಗಳಾದ ಹೆಸರು, ಉದ್ದು, ಸೋಯಾಬಿನ್‌, ಎಳ್ಳು ಬೆಳೆ ಕೆಲವು ಕಡೆ ಅಲ್ಪ ಮಳೆಯಿಂದ ಸ್ವಲ್ಪ ಪ್ರಮಾಣದಲ್ಲಿ ಇಳುವರಿ ಬಂದಿದೆ. ಆದರೆ ಹಿಂಗಾರು ಮಳೆ ಅಭಾವದಿಂದ ಕೈಗೆಟುಕದಂತಾಗಿದೆ. ಮುಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ತೊಗರಿ ಈಗಾಗಲೇ ಶೇ.50ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಕಡಿಮೆ ಇಳುವರಿ ಬರುವ ಸಾಧ್ಯತೆಗಳಿವೆ.

ಮೋಡ ಬಿತ್ತನೆಗೆ ಮಾಡಲಿಲ್ಲ ಮನಸ್ಸು: ಆಗಸ್ಟ್‌ ಕೊನೆವಾರ, ಸೆಪ್ಟೆಂಬರ್‌ ಮೊದಲ ಹಾಗೂ ಎರಡನೇ ವಾರದಲ್ಲಿ ಮೋಡ ವ್ಯಾಪಕವಾಗಿದ್ದರೂ ಮಳೆ ಸುರಿಯಲಿಲ್ಲ. ಈ ಸಂದರ್ಭದಲ್ಲಿಯೇ ಮೋಡ ಬಿತ್ತನೆ ಮಾಡಬೇಕೆಂದು ರೈತರು ಆಗ್ರಹಿಸಿದ್ದರು. ಆದರೆ ಸರ್ಕಾರ ಸೂಕ್ತ ನಿರ್ಧಾರ ತಳೆಯಲಿಲ್ಲ. ಸಚಿವ ಸಂಪುಟದಲ್ಲಿ ಈ ಕುರಿತು ಚರ್ಚೆಯಾಗಿದೆ. ಉಪ ಸಮಿತಿ ರಚಿಸಲಾಗಿದೆ ಎಂದು ಸಬೂಬು ಹೇಳಿದರೆ ಹೊರತು ನಿರ್ಧಾರ ತೆಗೆದುಕೊಳ್ಳಲಿಲ್ಲ.

ಶೇ.89ರಷ್ಟು ಕೊರತೆ
ಕಲಬುರಗಿ ಜಿಲ್ಲೆಯಲ್ಲಿ ಅಕ್ಟೋಬರ್‌ನ ಮೊದಲೆರಡು ವಾರದಲ್ಲಿ 59 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ, ಕೇವಲ 7 ಮಿ.ಮೀ ಮಳೆಯಾಗಿ ಶೇ.89ರಷ್ಟು ಕೊರತೆಯಾಗಿದೆ.ಸೆಪ್ಟೆಂಬರ್‌ ತಿಂಗಳಿನಲ್ಲಿ 189 ಮಿ.ಮೀ. ಮಳೆ ಪೈಕಿ ಕೇವಲ 63 ಮಿ.ಮೀ. ಮಳೆಯಾಗಿ ಶೇ.67ರಷ್ಟು ಕೊರತೆಯಾಗಿದೆ. ಉಳಿದಂತೆ ಅಕ್ಟೋಬರ್‌ನಲ್ಲಿ ಮುಗಿದಿರುವ ಈ ಎರಡು ವಾರದಲ್ಲಿ ಉತ್ತರ ಕರ್ನಾಟಕದಲ್ಲಿ 62 ಮಿ.ಮೀ. ಮಳೆಯಾಗ ಬೇಕಿತ್ತು. ಆದರೆ ಕೇವಲ 6 ಮಿ.ಮೀ. ಮಳೆಯಾಗಿ ಶೇ. 90ರಷ್ಟು ಕೊರತೆಯಾಗಿದೆ.

ಹಿಂಗಾರು ಹಂಗಾಮಿನ ಮಳೆ ಶೇ.90ರಷ್ಟು ಕೊರತೆ ಉಂಟಾಗಿದ್ದರಿಂದ ಬೆಳೆಗಳು ದುಃಸ್ಥಿತಿ ಉಂಟಾಗಿದೆ. ಆದರೆ ರೈತ, ಕೃಷಿ ಕೂಲಿ ಕಾರ್ಮಿಕರಿಗೆ ಕೆಲಸ ದೊರಕಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಕಾರ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳಲು ಯೋಜನೆ ರೂಪಿಸಲಾಗುತ್ತಿದೆ. ಅಲ್ಲದೇ ರೈತರಿಗೆ ಇನ್‌ಪುಟ್‌ ಸಬ್ಸಿಡಿ ದೊರಕುವ ಹೆಜ್ಜೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಹಾನಿ ಸಮೀಕ್ಷೆ ನಡೆದಿದೆ.
ರಿತೇಂದ್ರನಾಥ ಸೂಗುರ,
ಕೃಷಿ ಜಂಟಿ ನಿರ್ದೇಶಕರು, ಕಲಬುರಗಿ

ಕಲಬುರಗಿ ಜಿಲ್ಲೆಯಲ್ಲಿ ಮಳೆ ಅಭಾವದಿಂದ ಆಗಿರುವ ಮುಂಗಾರು ಹಂಗಾಮಿನ ಬೆಳೆ ಹಾನಿಯ ಸಮೀಕ್ಷೆ ನಡೆದಿದ್ದು, ಶೇ.50ರಷ್ಟು ಬೆಳೆ ಹಾನಿಯಾಗಿರುವುದು ಕಂಡು ಬಂದಿದೆ. ಹಿಂಗಾರಿ ಬಿತ್ತನೆಯೇ ಆಗಿಲ್ಲ. ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ ಉದ್ಯೋಗ ಖಾತ್ರಿಯಿಂದ ಸಮಗ್ರ ಕ್ರಿಯಾ ಯೋಜನೆ ಹಾಗೂ ಮಂಜೂರಾತಿ ದೊರೆತ ಕೆಲಸಗಳನ್ನು ಮಾಸಾಂತ್ಯ ನಂತರ ಕೈಗೊಳ್ಳಲಾಗುವುದು.
ಆರ್‌. ವೆಂಕಟೇಶಕುಮಾರ,
ಜಿಲ್ಲಾಧಿಕಾರಿ, ಕಲಬುರಗಿ

– ಹಣಮಂತರಾದ ಭೈರಾಮಡಗಿ

ಟಾಪ್ ನ್ಯೂಸ್

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.