ಅಯ್ಯೋ..ಹಸುಗೂಸನ್ನು ಎದೆಗವಚಿಕೊಂಡು ಬೆಂಕಿ ಹಚ್ಚಿಕೊಂಡ ಅಪ್ಪ!
Team Udayavani, Mar 4, 2018, 4:58 PM IST
ಕಲಬುರಗಿ: ಜಿಲ್ಲೆಯ ಅಫ್ಜಲ್ಪುರದ ಗಾಣಗಾಪುರದಲ್ಲಿ ತಂದೆಯೊಬ್ಬ ಎರಡೂವರೆ ತಿಂಗಳ ಹೆಣ್ಣು ಮಗುವನ್ನು ಎದೆಗವಚಿಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಭಾನುವಾರ ನಡೆದಿದೆ.
ವರದಿಯಾದಂತೆ ಶರಣ ಕವಲಗಿ (35) ಎಂಬಾತ ಕುಡಿದ ಮತ್ತಿನಲ್ಲಿ ಹೆಂಡತಿ ಮನೆಗೆ ತೆರಳಿ ಗಲಾಟೆ ಮಾಡಿದ್ದು ಈ ವೇಳೆ ಜೋಳಿಗೆಯಲ್ಲಿದ್ದ ಮಗುವನ್ನು ಏಕಾಏಕಿ ಎತ್ತಿಕೊಂಡು ಕೋಣೆಯೊಳಗೆ ತೆರಳಿ ಬಾಗಿಲು ಹಾಕಿಕೊಂಡು ಸೀಮೆ ಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಮನೆಯಲ್ಲಿದ್ದವರು ಬಾಗಿಲು ಒಡೆದು ಒಳಹೋಗುವಷ್ಟರಲ್ಲಿ ಮಗು ಸುಟ್ಟು ಕರಕಲಾಗಿತ್ತು. ಶರಣ ಕೂಡ ಬೆಂಕಿಯಲ್ಲಿ ಸುಟ್ಟು ಹೋಗಿದ್ದ.
ಶರಣ ನಿತ್ಯವೂ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಹೇಳಲಾಗಿದೆ.
ಪತ್ನಿ ಮತ್ತು ಮನೆಯವರ ರೋದನ ಮುಗಿಲು ಮುಟ್ಟಿದೆ. ಗ್ರಾಮಸ್ಥರು ಮಗುವಿನ ಸಾವಿಗೆ ತೀವ್ರ ಮರುಕ ಪಟ್ಟಿದ್ದಾರೆ.
ಗಾಣಗಾಪುರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ