ಕೆರೆ ಒಡ್ಡು ಒಡೆಯುವ ಭೀತಿ-6 ವರ್ಷವಾದ್ರೂ ದುರಸ್ತಿಯಿಲ್ಲ
Team Udayavani, Aug 10, 2022, 4:57 PM IST
ಅಫಜಲಪುರ: ನೂರಾರು ಎಕರೆ ಜಮೀನುಗಳಿಗೆ ನೀರೊದಗಿಸುವ, ಜಲಮೂಲಗಳಿಗೆ ಅಂತರ್ಜಲ ಮಟ್ಟ ಹೆಚ್ಚಿಸುವ ಪಟ್ಟಣದ ಕೆರೆ ಒಡ್ಡಿಗೆ ಬಿರುಕು ಬಿಟ್ಟು ಆರು ವರ್ಷ ಗತಿಸಿದರೂ ಇನ್ನೂ ದುರಸ್ತಿ ಭಾಗ್ಯ ಕಂಡಿಲ್ಲ. ಕಳೆದ ಆರು ವರ್ಷಗಳ ಹಿಂದೆ ಕೆರೆ ಒಡ್ಡಿಗೆ ಬಿರುಕು ಬಿಟ್ಟು, ನೆಲ ಕುಸಿದು ಆತಂಕ ಹೆಚ್ಚಿಸಿತ್ತು. ಆಗಿನಿಂದ ಈಗಿನವರೆಗೆ ಬಿರುಕು ಬಿಟ್ಟಾಗಲೊಮ್ಮೆ ಮುರುಮ್ ಹಾಕಲಾಗುತ್ತಿದೆಯೇ ವಿನಃ ಶಾಶ್ವತ ದುರಸ್ತಿ ಕಾರ್ಯ ನಡೆಯುತ್ತಿಲ್ಲ.
ಲಕ್ಷಾಂತರ ರೂ. ಖರ್ಚು: ಕೆರೆ ಒಡ್ಡಿಗೆ ಬಿರುಕು ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ದುರಸ್ತಿ ಹೆಸರಿನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತಿದೆಯಾದರೂ ಶಾಶ್ವತ ಪರಿಹಾರ ಮಾತ್ರ ದೊರಕುತ್ತಿಲ್ಲ.
ಒಡ್ಡು ಒಡೆಯುವ ಭೀತಿ: ಕಳೆದ ಆರು ವರ್ಷದ ಹಿಂದೆ ಕೆರೆ ಒಡ್ಡಿಗೆ ಬಿರುಕು ಬಿಟ್ಟು ಆತಂಕ ಹೆಚ್ಚಿಸಿತ್ತು. ಸಣ್ಣ ನೀರಾವರಿ ಇಲಾಖೆಯವರು ಆಗಿನಿಂದ ಇಲ್ಲಿಯವರೆಗೆ ಜವಾಬ್ದಾರಿಯಿಂದ ಕೆಲಸ ಮಾಡಿದ್ದರೆ ಇಷ್ಟೊತ್ತಿಗೆ ಸಮಸ್ಯೆಗೆ ಪರಿಹಾರ ಸಿಗುತ್ತಿತ್ತು. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕೆರೆಯ ಒಡ್ಡು ಒಡೆಯುವ ಹಂತಕ್ಕೆ ಬಂದಿದೆ.
ಒಂದು ವೇಳೆ ಕೆರೆ ಒಡೆದರೆ ಇಡೀ ಪಟ್ಟಣವೇ ಜಲಾವೃತವಾಗುವುದು ನಿಶ್ಚಿತ. ಕೆರೆ ಒಡ್ಡಿಗೆ ಬಿರುಕು ಬಿಟ್ಟಾಗಲೊಮ್ಮೆ ಮುರುಮ್ ಹಾಕಿಸಿ ಕೈ ತೊಳೆದುಕೊಳ್ಳುತ್ತಿರುವ ಬದಲು ತಜ್ಞರನ್ನು ಕರೆಸಿ, ಸ್ಥಳ ಪರಿಶೀಲನೆ ನಡೆಸಬೇಕು. ಕೆರೆಯಿಂದ ಯಾವುದೇ ಅಪಾಯವಾಗದಂತೆ ಕ್ರಮ ಕೈಗೊಳ್ಳಬೇಕು. ಈ ಬಾರಿ ಮಳೆಯಿಂದಾದ ಹೊಡೆತ ತಡೆದುಕೊಳ್ಳಲು ಪ್ಲಾಸ್ಟಿಕ್ ಮುಚ್ಚಲಾಗಿದೆ. ಇದು ಎಷ್ಟು ದಿನ ಮಳೆಯ ರಭಸ ತಡೆದುಕೊಳ್ಳುತ್ತದೆ ಎಂಬುದು ತಿಳಿಯುತ್ತಿಲ್ಲ.
ಕೆರೆಯ ಒಡ್ಡು (ಏರಿಯು) ಬಿರುಕು ಬಿಟ್ಟ ಸ್ಥಳದಲ್ಲಿ ಮಳೆಯ ನೀರು ಹೋಗಬಾರದೆಂದು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದೆ. ರವಿವಾರದಂದು ಮುಖ್ಯ ಎಂಜಿನಿಯರ್ ಅವರಿಗೆ ಭೇಟಿಯಾಗಿ ಕೆರೆಯ ಬಿರುಕು ಬಿಟ್ಟ ಸ್ಥಳದಲ್ಲಿ ಮುರುಮ್ ಹಾಕಿದ ಸ್ಥಳದಲ್ಲಿ ಮತ್ತೆ ಬಿರುಕು ಬಿಡುತ್ತಿರುವುದು ಕಂಡುಬರುತ್ತಿದೆ ಎಂದು ತಿಳಿಸಿದ್ದೇನೆ. ಆದರೆ ಮುಖ್ಯ ಎಂಜಿನಿಯರ್ ಹೇಳಿದ ಹಾಗೆ ಮುರುಮ್ ಎಷ್ಟು ಇಳಿಯುತ್ತೆ ಇಳಿಯಲು ಬಿಡಿ. ಆದರೆ ಕೆರೆಗೆ ಹೆಚ್ಚುವರಿ ಬರುವ ಹೆಚ್ಚುವರಿ ನೀರು ಹೊರಗೆ ಹರಿದು ಬಿಡಲು ಹೇಳಿದ್ದಾರೆ. ಅವರು ಹೇಳಿದ ಹಾಗೆ ಹೆಚ್ಚುವರಿ ನೀರನ್ನು ಹೊರಗೆ ಹರಿದು ಬಿಡಲಾಗುತ್ತಿದೆ. -ಶಾಂತಪ್ಪ ಜಾಧವ, ಎಇಇ, ಸಣ್ಣ ನೀರಾವರಿ ಇಲಾಖೆ, ಅಫಜಲಪುರ
ಕೆರೆ ಒಡ್ಡು ದುರಸ್ತಿ ಕಾರ್ಯವನ್ನು ಸಣ್ಣ ನೀರಾವರಿ ಇಲಾಖೆಯವರು ಮಾಡಬೇಕು. ಪುರಸಭೆ ವತಿಯಿಂದ ಈ ಕುರಿತು ಸಣ್ಣ ನೀರಾವರಿ ಇಲಾಖೆ ಗಮನಕ್ಕೆ ತರಲಾಗಿದೆ. -ಸುರೇಶ ಬಬಲಾದ, ಮುಖ್ಯಾಧಿಕಾರಿ, ಪುರಸಭೆ
-ಮಲ್ಲಿಕಾರ್ಜುನ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!