ಹಣ ಕೊಡಲಿಲ್ಲವೆಂದು ವಾಹನದಿಂದ ಗುದ್ದಿ ಕೊಲೆ, ಅಪಘಾತದ ನಾಟಕ: ಕಲಬುರಗಿಯಲ್ಲಿ ಸಿನಿಮೀಯ ಘಟನೆ
Team Udayavani, May 18, 2020, 9:11 AM IST
ಕಲಬುರಗಿ: ನಗರದ ರಿಂಗ್ ರಸ್ತೆಯ ಟಿಪ್ಪು ಸುಲ್ತಾನ್ ಕಾಲೇಜಿನ ಬಳಿ ಮೇ 15ರಂದು ನಡೆದ ರಸ್ತೆ ಅಪಘಾತ ಪ್ರಕರಣ ತಿರುವು ಪಡೆದಿದೆ. ಹಣ ಕೊಡಲಿಲ್ಲ ಎಂಬ ಕಾರಣಕ್ಕೆ ಕೊಲೆ ಮಾಡಿದ ವಿಷಯ ಬಯಲಿಗೆ ಬಂದಿದೆ.
ಸ್ಕೂಟರ್ ನಲ್ಲಿ ಹೊರಟಿದ್ದ ಅಬ್ದುಲ್ ರಹೀಂ (63) ಎಂಬುವವರು ಬೊಲೆರೊ ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಇದನ್ನು ಪೊಲೀಸರು ರಸ್ತೆ ಅಪಘಾತವೆಂದೇ ಭಾವಿಸಿದ್ದರು. ಈ ಬಗ್ಗೆ ಸಂಚಾರಿ ಠಾಣೆ-2ರಲ್ಲಿ ಪ್ರಕರಣ ಸಹ ದಾಖಲಾಗಿತ್ತು.
ಆದರೆ, ರವಿವಾರ ಸಂಚಾರ ಠಾಣೆಗೆ ಹಾಜರಾದ ಮೃತ ಅಬ್ದುಲ್ ಘನಿ ಮಗ ಅಜ್ಮೋದ್ದೀನ್ ತಮ್ಮ ತಂದೆಯದ್ದು ರಸ್ತೆ ಅಪಘಾತವಲ್ಲ. ನಮ್ಮ ಚಿಕ್ಕಪ್ಪನ ಅಳಿಯ ಮಕ್ಬೂಲ್ ಸೌದಾಗರ ಅವರು ತಂದೆಯವರ ಬಳಿ ಹಣ ಕೇಳಿದ್ದರು. ಆದರೆ, ತಂದೆ ಹಣ ಕೊಡಲು ನಿರಾಕರಿಸಿದ್ದರು. ಇದೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿದ್ದಾರೆ ಎಂದು ಹೇಳಿದ್ದರು.
ಅಜ್ಮೋದ್ದೀನ್ ಈ ಹೇಳಿಕೆ ನೀಡುತ್ತಿದ್ದಂತೆ ತಕ್ಷಣವೇ ಕಾರ್ಯ ಪ್ರವೃತ್ತರಾದ ತನಿಖಾಧಿಕಾರಿ, ಸಂಚಾರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಶಾಂತಿನಾಥ ಅವರು ಆರೋಪಿ ಮಕ್ಬೂಲ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಈ ವೇಳೆ ತಾನೇ ಬೊಲೆರೊ ವಾಹನದಿಂದ ಗುದ್ದಿ ಕೊಲೆಗೈದಿರುವುದಾಗಿ ಆರೋಪಿ ಬಾಯಿ ಬಿಟ್ಟಿದ್ದಾನೆ ಎಂದು ಪೊಲೀಸ್ ಆಯುಕ್ತ ಎನ್. ಸತೀಶಕುಮಾರ ತಿಳಿಸಿದ್ದಾರೆ.
ಕೊಲೆ ಪ್ರಕರಣವಾದ್ದರಿಂದ ಇದೀಗ ಈ ಪ್ರಕರಣವನ್ನು ಸಂಚಾರಿ ಠಾಣೆ-2ರಿಂದ ರೋಜಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ