ಕಲಬುರಗಿಯಲ್ಲಿ ಕೊನೆಗೂ ಮಳೆ ಆರಂಭ
Team Udayavani, Jun 25, 2023, 4:23 PM IST
ಕಲಬುರಗಿ: ಕಳೆದ ಎರಡು ವಾರದಿಂದ ಮುನಿಸಿಕೊಂಡಿದ್ದ ಮುಂಗಾರು ಮಳೆ ಆರಂಭಗೊಂಡಿದೆ. ಜೂನ್ 7 ರಂದೇ ಆರಂಭವಾಗಬೇಕಾಗಿದ್ದ ಮುಂಗಾರು ಎರಡು ವಾರ ತಡವಾಗಿತ್ತು. ಇದರಿಂದಾಗಿ ಜಿಲ್ಲೆಯಲ್ಲಿ ಬರಗಾಲದ ಛಾಯೆ ಮೂಡಿತ್ತು.
ವಾಣಿಜ್ಯ ಬೆಳೆಗಳಾದ ಕಬ್ಬು, ಬಾಳೆ ತೋಟಗಾರಿಕೆ ಬೆಳೆಗಳಾದ ಟಮೊಟೊ, ಬದನೆಕಾಯಿ, ಮೆಣಸಿನಕಾಯಿ ಸೇರಿದಂತೆ ಇತರೆ ಎಲ್ಲ ಕಾಯಿಪಲ್ಲೆ ಬೆಲೆ ಮುಗಿಲು ಮುಟ್ಟಿತ್ತು. ಮಾರುಕಟ್ಟೆಯಲ್ಲಿ ಬೆಲೆ ಕೂಡ ಹೆಚ್ಚಾಗಿತ್ತು. ಇದರಿಂದಾಗಿ ರೈತಾಪಿ ಸೇರಿದಂತೆ ಸಾಮಾನ್ಯ ವರ್ಗದ ಜನರು ಕೂಡ ತಲ್ಲಣಗೊಂಡಿದ್ದರು.
ಆದರೆ, ಶನಿವಾರ ಸಂಜೆಯಿಂದಲೇ ಮುಂಗಾರಿನ ಆರಂಭದ ಲಕ್ಷಣಗಳು ಕಂಡುಬಂದಿದ್ದವು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಶನಿವಾರ ಮಳೆಯಾಗಿರಲಿಲ್ಲ.
ಆದರೆ ಜಿಲ್ಲೆಯ ಸೇಡಂ ಚಿಂಚೋಳಿ, ಚಿತ್ತಾಪುರ ತಾಲೂಕಿನಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಿತ್ತು. ಆಳಂದ್ ಮತ್ತು ಅಫಜಲಪುರದಲ್ಲೂ ಮಳೆ ಮುಖ ತೋರಿಸಿತ್ತು. ಆದರೆ, ಭಾನುವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ರೈತಾಪಿ ವರ್ಗವು ಸೇರಿದಂತೆ ಸಾಮಾನ್ಯ ಜನರಲ್ಲಿ ಕುರುಕು ಮೂಡಿಸಿತು. ಇದರಿಂದಾಗಿ ಮಧ್ಯಾನ ಮಳೆ ಆರಂಭವಾಗಿದೆ. ಕಳೆದ ಹಲವಾರು ವಾರಗಳಿಂದ ಕಾದು ಕೆಂಡದಂತಾಗಿದ್ದ ಕಲಬುರ್ಗಿ ಈಗ ತಂಪು ವಾತಾವರಣ ಮೂಡಿದೆ.
ಕಲಬುರಗಿ ಸೇರಿದಂತೆ ಜಿಲ್ಲೆಯ ಹಲವು ಕಡೆಗಳಲ್ಲಿ ಸಾಧಾರಣ ಗುಡುಗು ಸಹಿತ ಮಳೆಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ