ಸಿಪಿಐ ಕಚೇರಿಗೆ ಬೆಂಕಿ: ಕ್ರಮಕ್ಕೆ ಒತ್ತಾಯ
Team Udayavani, Jan 5, 2019, 6:26 AM IST
ಕಲಬುರಗಿ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಜ.2 ರಂದು ರಾತ್ರಿ ಪಕ್ಷದ ಕಚೇರಿಗೆ ಬಾಗಿಲು ಒಡೆದು ದಾಖಲೆ ಪತ್ರಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಧ್ವಂಸಗೊಳಿಸಲಾಗಿದೆ ಎಂದು ಆರೋಪಿಸಿದರು.
ಈ ದುಷ್ಕೃತ್ಯಕ್ಕೆ ಕೇರಳದಲ್ಲಿರುವ ವಿದ್ಯಮಾನಗಳೇ ಕಾರಣ. ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರೇ ಇದಕ್ಕೆ ಹೊಣೆಯಾಗಿದ್ದಾರೆ. ಕೂಡಲೇ ಸರ್ಕಾರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಪ್ರಭುದೇವ ಯಳಸಂಗಿ, ಮಹೇಶಕುಮಾರ ರಾಠೊಡ, ಮೌಲಾಮುಲ್ಲಾ, ಎಚ್.ಎಸ್. ಪತಕಿ, ಶರಣಬಸಪ್ಪ ಗಣಜಲಖೇಡ, ಪಾಂಡುರಂಗ ಹಾಗೂ ಇತರ ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್