ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು
Team Udayavani, Apr 13, 2018, 3:19 PM IST
ಕಲಬುರಗಿ: ನಗರದಲ್ಲಿ ಗುರುವಾರ ಬೆಳಗಿನ ಜಾವ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ದರೋಡೆಕೋರರ ಮೇಲೆ ಪೊಲೀಸರು ಗುಂಡು ಹಾರಿಸಿ ಅವರನ್ನು ಸೆರೆ ಹಿಡಿದ ಘಟನೆ ನಗರದ ಹೊರವಲಯದ ಆಶ್ರಯ ಕಾಲೋನಿ ಬಳಿ ನಡೆದಿದೆ.
ನಗರದ ಆಳಂದ ಚೆಕ್ಪೋಸ್ಟ್ ನಿವಾಸಿಗಳಾದ ಶೇಖರ್ ಅಲಿಯಾಸ್ ಶೇಖ್ಯಾ ಹಾಗೂ ಅಜೀಂ ಎನ್ನುವರು ಆಶ್ರಯ ಕಾಲೋನಿ ಬಳಿ ಇರುವ ಖಚಿತ ಮಾಹಿತಿ ಆಧರಿಸಿ ಎ ಉಪವಿಭಾಗದ ಎಎಸ್ಪಿ ಲೋಕೇಶ ಮಾರ್ಗದರ್ಶನದಲ್ಲಿ ಪಿಎಸ್ಐಗಳಾದ ವಾಹೀದ್ ಕೋತ್ವಾಲ್, ಪರಶುರಾಮ ಹಾಗೂ ಸಿಬ್ಬಂದಿ ದಾಳಿ ನಡೆಸಿದಾಗ, ಶೇಖರ್ ಹಾಗೂ ಅಜೀಂ ಮಾರಕಾಸ್ತ್ರಗಳಿಂದ ಪೇದೆಗಳಾದ ಬಂದೇನವಾಜ್, ಭೀಮಾನಾಯಕ ಎನ್ನುವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದರು.
ಪೊಲೀಸ್ ಪೇದೆಗಳ ಮೇಲೆ ಹಲ್ಲೆ ನಡೆದದ್ದನ್ನು ನೋಡಿದ ಫರತಾಬಾದ ಪಿಎಸ್ಐ ವಾಹೀದ್ ಕೋತ್ವಾಲ್ ಹಾಗೂ ಪಿಎಸ್ಐ ಪರಶುರಾಮ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಗಾಯಗೊಂಡಿರುವ ಬಂದೇನವಾಜ್ ಹಾಗೂ ಭೀಮಾನಾಯಕ ಅವರನ್ನು ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ದರೋಡೆಕೋರರಾದ ಶೇಖರ ಹಾಗೂ ಅಜೀಂನನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶೇಖರ್ ಹಾಗೂ ಅಜೀಂ ಮೇಲೆ ದರೋಡೆ, ಕೊಲೆಯತ್ನ ಸೇರಿದಂತೆ ಅನೇಕ ಪ್ರಕರಣಗಳು ದಾಖಲಾಗಿದ್ದು, ವಿವಿಧ ದರೋಡೆ ಪ್ರಕರಣದಲ್ಲಿ ಭಾಗಿಯಾಗಿರುವ ಇವರು, ಮಾರ್ಕೆಟ್ ಸತೀಶನ ಸಹಚರರು ಎನ್ನಲಾಗಿದೆ.
ಐಜಿಪಿ ಅಲೋಕಕುಮಾರ ಈಶಾನ್ಯ ವಲಯದ ಐಜಿಪಿಯಾಗಿದ್ದಾಗ ಅನೇಕ ರೌಡಿಗಳನ್ನು ಮಟ್ಟಹಾಕುವಲ್ಲಿ ಯಶಸ್ವಿಯಾಗಿದ್ದರು. ಈಗ ಮತ್ತೆ ಎ ಉಪವಿಭಾಗದ ಎಎಸ್ಪಿ ಲೋಕೇಶ ಮಾರ್ಗದರ್ಶನದಲ್ಲಿ ರೌಡಿಗಳ ಹುಟ್ಟಡಗಿಸಲು ಪೊಲೀಸರು ಸಜ್ಜಾಗುವ ಮೂಲಕ ಮತ್ತೆ ತಲೆ ಎತ್ತಲಿದ್ದ
ರೌಡಿಗಳು ನೇಪಥ್ಯಕ್ಕೆ ಸರಿಯುವಂತಾಗಿದೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ