ರೌಡಿಶೀಟರ್ಗಳ ಮೇಲೆ ಫೈರಿಂಗ್
Team Udayavani, Oct 9, 2017, 11:22 AM IST
ಕಲಬುರಗಿ: ರೌಡಿಶೀಟರ್ಗಳನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಗಳು ಪ್ರತಿದಾಳಿ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಗುಂಡಿನ ದಾಳಿ ನಡೆಸಿ, ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಪಿಎಸ್ಐ
ಅಕ್ಕಮಹಾದೇವಿ ಹಾಗೂ ಪೇದೆ ಪ್ರಲ್ಹಾದ ಕುಲಕರ್ಣಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅ.2ರ ಗಾಂಧಿ ಜಯಂತಿಯಂದು ರೌಡಿಶೀಟರ್ಗಳಾದ ಚೇತನ, ಶಿವಕುಮಾರ ಹಾಗೂ ಇತರರು ವಿನಾಯಕ, ಪ್ರವೀಣ ಎಂಬುವರಿಗೆ ನಗರದ ಎಂಎಸ್ಕೆ ಮಿಲ್ ರಸ್ತೆಯ ಕಣ್ಣಿ ಮಾರ್ಕೆಟ್ ಬಳಿ ಹಣ ನೀಡುವಂತೆ ಪೀಡಿಸಿ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದರು. ಭಾನುವಾರ ಬೆಳಗ್ಗೆ ಕೂಡ ಅವರು ದರೋಡೆಗೆ ಹೊಂಚು ಹಾಕಿದ್ದರು.
ಇದನ್ನರಿತ ರಾಘವೇಂದ್ರ ಪೊಲೀಸ್ ಠಾಣೆಯ ಪಿಎಸ್ಐ ಅಕ್ಕಮಹಾದೇವಿ, ಸಿಬ್ಬಂದಿಯೊಂದಿಗೆ ಬಂಧಿಸಲು ತೆರಳಿದ್ದರು. ಆಗ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾದರು. ಅಲ್ಲದೇ ಜೀಪ್ ಮೇಲೆ ಕಲ್ಲೆಸೆದರು. ಈ ಸಂದರ್ಭದಲ್ಲಿ ಪಿಎಸ್ಐ ಗಾಳಿಯಲ್ಲಿ ಗುಂಡು ಹಾರಿಸಿದರು. ಇದಕ್ಕೂ ಬಗ್ಗದಿದ್ದಾಗ ರೌಡಿ ಶೀಟರ್ಗಳ ಕಾಲಿಗೆ ಗುಂಡು ಹಾರಿಸಲಾಯಿತು. ಈ ನಡುವೆ, ಅಶೋಕ ನಗರ ಠಾಣೆ ಇನ್ಸ್ಪೆಕ್ಟರ್ ಮಿನೇಜನಸ್ ಸ್ಥಳಕ್ಕೆ ಧಾವಿಸಿ ರೌಡಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ
ಪಿಎಸ್ಐ ಅಕ್ಕಮಹಾದೇವಿ ಹಾಗೂ ಪೇದೆ ಪ್ರಲ್ಹಾದ ಕುಲಕರ್ಣಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿಗಾರರ ಜೊತೆ ಮಾತನಾಡಿದ ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಜೀವದ ಹಂಗು ತೊರೆದು ರೌಡಿ ಶೀಟರ್ಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಪಿಎಸ್ಐ ಅಕ್ಕಮಹಾದೇವಿ ಹಾಗೂ ಸಿಬ್ಬಂದಿಗೆ
ಮುಖ್ಯಮಂತ್ರಿಗಳ ಸೇವಾ ಪದಕಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು