ಫಿರೋಜಾಬಾದ್‌ ದರ್ಶನ-ಅಧ್ಯಯನ


Team Udayavani, Nov 26, 2019, 10:58 AM IST

gb-tdy-2

ಕಲಬುರಗಿ: ವಿಶ್ವಪರಂಪರೆ ಸಪ್ತಾಹ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಸರಕಾರಿ ವಸ್ತು ಸಂಗ್ರಹಾಲಯ ಹಾಗೂ ಇನ್‌ ಟ್ಯಾಕ್‌ ಅಧ್ಯಯನಗಳ ಸಂಯುಕ್ತ ಆಶ್ರಯದಲ್ಲಿ ಫಿರೋಜಾಬಾದ್‌ ದರ್ಶನ ಕಾರ್ಯಕ್ರಮವನ್ನು ಫಿರೋಜಾಬಾದ್‌ ಕೋಟೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಇತಿಹಾಸ ಪ್ರಾಧ್ಯಾಪಕ ಹಾಗೂ ಸಂಶೋಧಕರಾದ ಡಾ| ಶಂಭುಲಿಂಗ ಎಸ್‌. ವಾಣಿ ಉಪನ್ಯಾಸ ನೀಡಿ, ಫಿರೋಜಾಬಾದ್‌ಬಹಮನಿ ಸುಲ್ತಾನರ ಮೂರನೇ ರಾಜಧಾನಿ ಪಟ್ಟಣ. ಫಿರೋಜ್‌ ಶಹಾ ಬಹಮನಿಯು ಕ್ರಿ.ಶ. 1406ರಲ್ಲಿ ವಿಜಯನಗರದ ಮೇಲೆ ದಂಡಯಾತ್ರೆ ಮುಗಿಸಿಕೊಂಡು ಬರುವಾಗ ಅವನ ಸೈನ್ಯ ಹಾಗೂ ಸುಲ್ತಾನನು ಭೀಮಾ ನದಿಯ ದಂಡೆಯ ಮೇಲೆ ಕೆಲಕಾಲ ತಂಗಿತು. ಆಗ ಸುಲ್ತಾನನಿಗೆ ಇದು ಅತ್ಯಂತ ಸೂಕ್ತ ಮತ್ತು ಆಕರ್ಷಿಕ ಸ್ಥಳವಾಗಿ ಕಂಡುಬಂದಿತು ಎಂದು ವಿವರಿಸಿದರು.

ಕಲಬುರಗಿ ಕೋಟೆ ವಿಸ್ತಾರಗೊಳಿಸಲು ಸಾಧ್ಯವಿಲ್ಲದಿದ್ದಾಗ ಮತ್ತು ಕುದುರೆಗಳಿಗೆ, ಆನೆಗಳಿಗೆ ವಿಶಾಲ ಸ್ಥಳ ಹಾಗೂ ಕುಡಿಯಲು ನೀರಿನ ಅನುಕೂಲಕ್ಕಾಗಿ ಮತ್ತು ರಾಜ್ಯಕ್ಕೆ ನದಿಯಿಂದ ರಕ್ಷಣೆ ದೊರೆಯುತ್ತಿದೆ ಎನ್ನುವ ಹಲವು ಕಾರಣಗಳಿಗೆ ಹೊಸ ರಾಜಧಾನಿಯ ನಿರ್ಮಾಣ ಕಾರ್ಯ ಆರಂಭಗೊಂಡಿತು.ಮುಂದಿನ 8-10 ವರ್ಷಗಳಲ್ಲಿ ವಿಶಾಲವಾದ ಕೋಟೆ, ನಾಲ್ಕು ದಿಕ್ಕಿನಲ್ಲಿ ಬೃಹತ್‌ ಪ್ರಮಾಣದ ಪ್ರವೇಶ ದ್ವಾರಗಳು, ಮೂರು ಅಂತಸ್ತಿನ ಅರಮನೆ, ವಿಶಾಲವಾದ ಜಾಮಿ ಮಸೀದಿ, ಸಭಾ ಭವನ, ಸುಲ್ತಾನರ ವಿಶ್ರಾಂತಿ ಸ್ಥಳಗಳು, ಸೈನಿಕರಿಗೆ, ಆನೆಗಳಿಗೆ ಹಾಗೂ ಕುದುರೆಗಳಿಗೆ ವಿಶೇಷ ಸ್ಥಳಾವಕಾಶವನ್ನು ಫಿರೋಜ್‌ ಶಹಾ ಈ ಕೋಟೆಯ ಒಳಭಾಗದಲ್ಲಿ ಕಲ್ಪಿಸಿಕೊಟ್ಟಿರುವುದನ್ನು ವಿವರಿಸಿದರು. ಫಿರೋಜಾಬಾದ್‌ ಕೋಟೆಯ ಪ್ರವೇಶಕ್ಕೆ ಯಾವುದೇ ಸೂಕ್ತ ಪ್ರವೇಶ ದ್ವಾರಗಳು ಅಥವಾ ರಸ್ತೆಗಳು ಇರುವುದಿಲ್ಲ. ಇಡಿ ಕೋಟೆಯ ಆವರಣದ ಭೂಮಿಯನ್ನು ಕೃಷಿಗೆ ಅಳವಡಿಸಲಾಗಿದ್ದು, ಇದರ ಕಲ್ಲುಗಳು ಹೊಲಕ್ಕೆ ರಕ್ಷಣೆಗೆ ಬಳಸಿಕೊಂಡಿದ್ದು, ಪ್ರಮುಖ ದ್ವಾರಗಳ ಮುಂಭಾಗದಲ್ಲಿ ತಂತಿಯ ಬೇಲಿ ಹಾಕಿ ಪ್ರವೇಶಕ್ಕೆ ಅಡ್ಡಿ ಮಾಡಲಾಗಿದೆ. ಒಳಭಾಗದ ಕಟ್ಟಡಗಳನ್ನು ನಾಶಗೊಳಿಸುವ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವುದು ಕಂಡುಬರುತ್ತದೆ. ನಿಧಿಯ ಆಸೆಗಾಗಿ ಕಟ್ಟಡಗಳನ್ನು ನೆಲಸಮಗೊಳಿಸುವ ಚಟುವಟಿಕೆ ನಡೆಯುತ್ತಿದೆ. ಈ ರೀತಿಯ ಚಟುವಟಿಕೆಗಳು ಹಾಗೆ ಮುಂದುವರೆದರೆ ಮುಂದಿನ ಕೆಲವೇ ದಶಕಗಳಲ್ಲಿ ಕೋಟೆ ಸಂಪೂರ್ಣವಾಗಿ ನಾಶಗೊಳ್ಳುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ವಸ್ತು ಸಂಗ್ರಹಾಲಯ ಇಲಾಖೆಯ ಅನ್ವೇಷಕ ಶಬ್ಬೀರ್‌ ಅಹಮ್ಮದ್‌, ಸರಕಾರಿ (ಸ್ವಾಯತ್ತ) ಕಾಲೇಜು ಸ್ನಾತಕೋತ್ತರ ಇತಿಹಾಸ ವಿಭಾಗದ ಪ್ರಾಧ್ಯಾಪಕ ಡಾ|ಟಿ.ವಿ.ಅಡಿವೇಶ, ಪ್ರೊ| ಚಂದ್ರಶೇಖರ ಅನಾದಿ, ಸರಕಾರಿ ಮಹಿಳಾ ಕಾಲೇಜು ಸ್ನಾತಕೋತ್ತರ ಇತಿಹಾಸ ವಿಭಾಗದ ಮುಖ್ಯಸ್ಥ ಡಾ| ಶಶಿಶೇಖರ ರೆಡ್ಡಿ, ಡಾ| ಭೀಮಣ್ಣ ಘನಾತೆ, ಪ್ರೊ| ಶರಣಪ್ಪ ಗುಂಡಗುರ್ತಿ, ಪ್ರೊ| ರವಿಕುಮಾರ, ಸಂಶೋಧನಾರ್ಥಿಗಳು, ಎರಡು ಕಾಲೇಜುಗಳ ಸ್ನಾತಕೋತ್ತರ ಇತಿಹಾಸ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.