ಅಪ್ಪನ ಕೊಲೆಗೆ ಸುಪಾರಿ: ಮಕ್ಕಳು ಸೇರಿ ಐವರ ಸೆರೆ ‌


Team Udayavani, Mar 28, 2021, 8:25 PM IST

ndfxhd

ಕಲಬುರಗಿ: ಆಳಂದ ತಾಲೂಕಿನ ನರೋಣಾ ಗ್ರಾಮದ ಬಟ್ಟೆ ವ್ಯಾಪಾರಿ ಓಂಕಾರ ಅನಶೆಟ್ಟಿ ಕೊಲೆ ಪ್ರಕರಣವನ್ನು ನಗರ ಪೊಲೀಸ್‌ ಆಯುಕ್ತಾಲಯದ ಗ್ರಾಮೀಣ ಠಾಣೆ ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದು, ಕೊಲೆಯಾದ ಹನಶೆಟ್ಟಿಯ ಇಬ್ಬರು ಪುತ್ರರು ಸೇರಿ ಐವರನ್ನು ಬಂಧಿಸಿದ್ದಾರೆ.

ಇವರಲ್ಲಿ ಕೆಎಸ್‌ಆರ್‌ಪಿ ಎಎಸ್‌ ಐಯೊಬ್ಬರ ಪುತ್ರನೂ ಸೇರಿದ್ದಾನೆ. ಓಂಕಾರ ಹನಶೆಟ್ಟಿಯ ಮಕ್ಕಳಾದ ಶರಣಬಸಪ್ಪ ಹನಶೆಟ್ಟಿ, ರವಿ ಹನಶೆಟ್ಟಿ ಮತ್ತು ಇವರ ಸ್ನೇಹಿತರಾದ ಜೈಕರವೇ ವಿದ್ಯಾರ್ಥಿ ಘಟಕ ಅಧ್ಯಕ್ಷನಾದ ತಾಜಸುಲ್ತಾನಪುರದ ನಿವಾಸಿ ಅಮರ ಹಿಂದೊಡ್ಡಿ, ನಗರದ ಬಂಬೂಬಜಾರ್‌ ನ ಹರೀಶ್‌ ಒಂಟಿ, ಸುರೇಶ ಡೆಂಗಿ ಎನ್ನುವರೇ ಬಂಧಿತ ಆರೋಪಿಗಳು. ಇವರೆಲ್ಲರೂ ಸ್ನೇಹಿತರಾಗಿದ್ದು, ಇಬ್ಬರು ಮಕ್ಕಳೊಂದಿಗೆ ಮೂವರು ಸುಪಾರಿ ಪಡೆದುಕೊಂಡವರಂತೆ ಕೈಜೋಡಿಸಿ ಕೊಲೆ ಮಾಡಿದ್ದರು.

ನರೋಣಾ ಗ್ರಾಮದ ಓಂಕಾರ ಮಾ.22ರಂದು ಕೆಲಸದ ನಿಮಿತ್ತ ಕಲಬುರಗಿ ನಗರಕ್ಕೆ ಬೈಕ್‌ ಮೂಲಕ ಬರುತ್ತಿದ್ದರು. ಇದನ್ನು ಅರಿತು ಸ್ನೇಹತರ ಜತೆಗೂಡಿ ಮಕ್ಕಳು ಆಟೋದಲ್ಲಿ ಬೈಕ್‌ ಬೆನ್ನಟ್ಟಿದ್ದರು. ನಗರ ಹೊರವಲಯದ ಅಷ್ಟಗಾ ಸಮೀಪ ಅಡ್ಡಗಟ್ಟಿ ಓಂಕಾರ ಅವರನ್ನು ಆಟೋದಲ್ಲಿ ಕರೆದುಕೊಂಡು ಹೋಗಿದ್ದರು. ಅಲ್ಲಿಂದ ಹೊಲವೊಂದಕ್ಕೆ ಕರೆದುಕೊಂಡು ಹೋಗಿ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದರು.

ಓಂಕಾರ ಅವರಿಗೆ ಗುರುಬಾಯಿ ಮತ್ತು ಜಗದೇವಿ ಎನ್ನುವ ಇಬ್ಬರು ಪತ್ನಿಯರಿದ್ದಾರೆ. ಇಬ್ಬರಿಗೂ ತಲಾ ಮೂವರು ಮಕ್ಕಳಿದ್ದಾರೆ. ಮೊದಲ ಪತ್ನಿ ಗುರುಬಾಯಿ 30 ವರ್ಷಗಳ ಹಿಂದೆ ತೀರಿಕೊಂಡ ಬಳಿಕ ಎರಡನೇ ಮದುವೆ ಮಾಡಿಕೊಂಡಿದ್ದರು. ಈ ನಡುವೆ ತಂದೆ ವಿಪರೀತ ಕಿರಿಕಿರಿ ಮಾಡುತ್ತಿದ್ದರು. ಅಲ್ಲದೇ, ಹಣ ಖರ್ಚು ಮಾಡುತ್ತಿದ್ದರು. ಇದಕ್ಕಾಗಿ ಹೊಲವನ್ನು ಬೇರೆಯವರಿಗೆ ಮಾರಿಬಿಟ್ಟರೆ ತಮ್ಮ ಗತಿಯೇನು ಎಂದುಕೊಂಡು ಮಕ್ಕಳಾದ ಶರಣಬಸಪ್ಪ ಮತ್ತು ರವಿ ತಮ್ಮ ಸ್ನೇಹಿತರ ಜತೆಗೂಡಿ ಕೊಲೆ ಸಂಚು ರೂಪಿಸಿ ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂದು ಕೊಲೆ ಮಾಡಿದ ನಂತರ ಅವರೇ ಮನೆಗೆ ಮನೆಯಲ್ಲಿ ಸಹೋದರಿಗೆ ಅಪ್ಪನ ಬಗ್ಗೆ ವಿಚಾರಿಸಿದಂತೆ ಮಾಡಿದ್ದರು. ನಂತರ ಬೈಕ್‌ ನಿಂತಿರುವುದು ಗೊತ್ತಾಗಿದೆ ಎಂಬಂತೆ ನಾಟಕವಾಡಿದ್ದರು. ಅಲ್ಲದೇ, ತಂದೆಯ ಶವ ಊರಿಗೆ ಬಂದಾಗ ಇಬ್ಬರು ಸಿಕ್ಕಾಪಟ್ಟೆ ಅತ್ತಿದ್ದರು. ಅಂತ್ಯಕ್ರಿಯೆಯಲ್ಲಿ ತಾವೇನು ಮಾಡಿಲ್ಲ ಎಂಬಂತೆ ಕಂಡು ಬಂದಿದ್ದರು ಎಂದು ಪೊಲೀಸರು ಹೇಳಿದ್ದಾರೆ. ನಗರ ಪೊಲೀಸ್‌ ಆಯುಕ್ತ ಎನ್‌. ಸತೀಶಕುಮಾರ, ಉಪ ಆಯುಕ್ತರಾದ ಕಿಶೋರಬಾಬು, ಶ್ರೀಕಾಂತ ಕಟ್ಟಿಮನಿ, ಸಹಾಯಕ ಆಯುಕ್ತ ಜೆ.ಎಚ್‌. ಇನಾಮದಾರ ಮಾರ್ಗದರ್ಶನದಲ್ಲಿ ಗ್ರಾಮೀಣ ಇನ್‌ಸ್ಪೆಕ್ಟರ್‌ ಭಾಸು ಚವ್ಹಾಣ, ಪಿಎಸ್‌ಐ ಕವಿತಾ ಚವ್ಹಾಣ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿತರನ್ನು ಬಂಧಿಸಿದ್ದಾರೆ. ಈಗಾಗಲೇ ಎಲ್ಲರನ್ನೂ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.