ಕಲಬುರಗಿಯಲ್ಲಿ ವಿಮಾನ ಬಿಡಿ ಭಾಗ ತಯಾರಿಕೆ ಘಟಕ


Team Udayavani, Nov 1, 2021, 11:10 AM IST

5flight

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕೋದ್ಯಮ ಬೆಳವಣಿಗೆ ನಿಟ್ಟಿನಲ್ಲಿ ಇಲ್ಲಿನ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ ವಿಮಾನಗಳ ಬಿಡಿಭಾಗ ಉತ್ಪಾದನಾ ಘಟಕ ಮತ್ತು ದುರಸ್ತಿಗೊಳಿಸುವ ಕೇಂದ್ರ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.

ರವಿವಾರ ನಗರದ ಬಿಜೆಪಿ ಕಚೇರಿಗೆ ರವಿವಾರ ಸಂಜೆ ಭೇಟಿ ನೀಡಿ ಗ್ರಾಮಾಂತರ ಜಿಲ್ಲಾ ಮತ್ತು ಮಹಾನಗರ ಜಿಲ್ಲಾ ಘಟಕದ ಪದಾಧಿಕಾರಿಗಳ ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿ, ಕಲಬುರಗಿಯಲ್ಲಿ ವಿಮಾನ ಬಿಡಿ ಭಾಗಗಳ ಉತ್ಪಾದನಾ ಘಟಕ ಹಾಗೂ ಸೆಮಿಕಂಡಕ್ಟರ್‌ಗಳ ಉತ್ಪಾದನ ವಲಯ ಆರಂಭಗೊಂಡರೆ ಸಾವಿರಾರು ಜನರಿಗೆ ಉದ್ಯೋಗ ಸಿಗಲಿದೆ. ಬೆಂಗಳೂರು ಸಿಲಿಕಾನ್‌ ಸಿಟಿ ಆದಂತೆ, ಕಲಬುರಗಿ ಸೆಮಿ ಕಂಡಕ್ಟರ್‌ ಹಬ್‌ ಆಗಲಿದೆ. ಜತೆಗೆ ಸಾಕಷ್ಟು ಪ್ರಗತಿ ಸಹ ಆಗಲಿದೆ ಎಂದರು.

ಜಿಲ್ಲೆಯಲ್ಲಿ ಮತ್ತು ಈ ವಿಭಾಗದ ಜಿಲ್ಲೆಗಳಲ್ಲಿ ಹೆಚ್ಚು ಉದ್ಯಮಗಳನ್ನು ಸ್ಥಾಪನೆ ಮಾಡಲು ಹಲವು ಕಂಪನಿಗಳಿಗೆ ಆಹ್ವಾನಿಸುವ ಮೂಲಕ ಕೈಗಾರಿಕೆಗಳನ್ನು ಆರಂಭಿಸುವ ಮೂಲಕ ಇಲ್ಲಿನವರಿಗೆ ಉದ್ಯೋಗ ಕಲ್ಪಿಸಲು ಕ್ರಮ ಹೆಚ್ಚಿನ ಆದ್ಯತೆ ನೀಡಿ ಕೆಲಸ ಮಾಡಲಾಗುವುದು ಎಂದು ಸಚಿವರು ಪ್ರಕಟಿಸಿದರು.

ದೇಶದಲ್ಲಿಯೇ ಮೊದಲು ಎನ್ನುವಂತೆ “ಸೆಮಿಕಂಡಕ್ಟರ್‌ ಪಾಲಿಸಿ’ (ಅರೆವಾಹಕ ನೀತಿ)ಯನ್ನು (ವಾಹಕಗಳು ಮತ್ತು ಅವಾಹಕಗಳ ನಡುವಣ ವಿದ್ಯುತ್‌ ವಾಹಕತೆ ಹೊಂದಿರುವ ಘನ ವಸ್ತುಗಳು ಅರೆವಾಹಕ) ರಾಜ್ಯದಲ್ಲಿ ಜಾರಿಗೆ ತರಲು ನಿರ್ಧರಿಸಲಾಗಿದೆ. ಹೊಸ ನೀತಿಯಡಿ ಕಲಬುರಗಿಯಲ್ಲಿ ಅರೆವಾಹಕ ಉತ್ಪಾದನಾ ವಲಯ ಸ್ಥಾಪಿಸಲು ಕೆಲವು ಕಂಪನಿಗಳಿಗೆ ಆಹ್ವಾನ ನೀಡಲಾಗಿದೆ. ಅಲ್ಲದೇ ಸೆಮಿಕಂಡಕ್ಟರ್‌ಗಳನ್ನು ಹಾಗೂ ವಿಮಾನ ಬಿಡಿ ಭಾಗಗಳನ್ನು ಉತ್ಪಾದನೆ ಮಾಡಲು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 500 ಎಕರೆ ಜಮೀನು ನೀಡಲು ಉದ್ಯಮಿಗಳು ಬೇಡಿಕೆಯಿಟ್ಟಿದ್ದಾರೆ. ಅಲ್ಲಿ ಜಮೀನು ಸಿಗುವುದು ಕಷ್ಟ. ಹೀಗಾಗಿ ಕಲಬುರಗಿಗೆ ಬರಲು ಆಹ್ವಾನಿಸಿದ್ದೇನೆ. ಬೇಕಾದಷ್ಟು ಜಮೀನು ನೀಡುವುದರ ಜತೆಗೆ ಹಲವು ಸಬ್ಸಿಡಿ ಸಹ ನೀಡುವುದಾಗಿ ಭರವಸೆ ನೀಡಿ ಮನವೊಲಿಸುವ ಕೆಲಸ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಬೆಳಗಾವಿ ಮತ್ತು ಹುಬ್ಬಳ್ಳಿ ನಡುವೆ ಕಿತ್ತೂರು ರಾಣಿ ಚನ್ನಮ್ಮ ಹೆಸರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಮೂರು ಸಾವಿರ ಎಕರೆ ಪ್ರದೇಶದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಬೆಂಗಳೂರಿನಲ್ಲಿ ವಿಮಾನ ಬಿಡಿ ಭಾಗಗಳ ಉತ್ಪಾದನೆ ಮಾಡಲು ಘಟಕಗಳನ್ನು ಸ್ಥಾಪಿಸಲು ಹಲವು ವಿದೇಶಿ ಕಂಪನಿಗಳು ಮುಂದೆ ಬಂದಿವೆ. ಆದರೆ, ಕಲಬುರಗಿಗೆ ಮೊದಲ ಆದ್ಯತೆ ನೀಡಿದ ನಂತರ ಹುಬ್ಬಳ್ಳಿ-ಧಾರವಾಡಕ್ಕೆ ಎಂದು ಹೇಳಿದರು.

ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ಸಿದ್ಧಾಜಿ ಪಾಟೀಲ ಸ್ವಾಗತಿಸಿದರು. ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕರ್ತರ ಬೇಡಿಕೆ ಮಂಡಿಸಿದರು. ಶಾಸಕರಾದ ಬಸವರಾಜ ಮತ್ತಿಮಡು, ಶಶೀಲ್‌ ನಮೋಶಿ, ಡಾ| ಅವಿನಾಶ ಜಾಧವ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ, ಅಮರನಾಥ ಪಾಟೀಲ, ಕಾಡಾ ಅಧ್ಯಕ್ಷ ಶರಣಪ್ಪ ತಳವಾರ, ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಧರ್ಮಣ್ಣ ದೊಡ್ಡಮನಿ, ಮಹಿಳಾ ಘಟಕದ ಅಧ್ಯಕ್ಷೆ ಭಾಗೀರಥಿ ಗುನ್ನಾಪುರ, ಪ್ರಮುಖರಾದ ಲಿಂಗರಾಜ ಬಿರಾದಾರ, ಪರಸರಡ್ಡಿ, ಡಾ| ಮಹೇಂದ್ರ ಕೋರಿ, ಸಿದ್ಧು ಪಾಟೀಲ ಮುಂತಾದವರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ಬಗಲಿ ನಿರೂಪಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.