ಚಿತ್ತಾಪುರ: ನದಿ ದಂಡೆಯ ಗ್ರಾಮಗಳಲ್ಲಿ ನೀರಿನ ಗೋಳು
Team Udayavani, Jul 25, 2021, 8:13 PM IST
ವಾಡಿ (ಚಿತ್ತಾಪುರ): ತಾಲೂಕಿನ ವ್ಯಾಪ್ತಿಯಲ್ಲಿ ಭೀಮಾನದಿ ಮತ್ತು ಕಾಗಿಣಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದರೂ ನದಿ ದಂಡೆಯ ಹಲವು ಗ್ರಾಮಸ್ಥರು ಕುಡಿಯುವ ನೀರಿಗಾಗಿ ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ.
ಕಡಬೂರ ಗ್ರಾಪಂ ವ್ಯಾಪ್ತಿಯ ಚಾಮನೂರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದೆ. ಪ್ರವಾಹ ಭೀತಿಯ ಈ ಹಳ್ಳಿಯಲ್ಲಿ ಜನರು ಕೆಸರುಗದ್ದೆಯ ರಸ್ತೆಯಲ್ಲಿ ಸಾಗಿ ನೀರು ತರುತ್ತಿದ್ದಾರೆ. ತುಂಬಿ ಹರಿಯುತ್ತಿರುವ ಭೀಮಾನದಿ ಪಾತ್ರಕ್ಕಿಳಿಯುತ್ತಿರುವ ಮಹಿಳೆಯರು, ಮಕ್ಕಳು, ವಯಸ್ಕರು ಹೂಳಿನಲ್ಲಿ ಸಾಗಿ ನೀರು ಪಡೆಯುತ್ತಿದ್ದಾರೆ.
ಇದನ್ನೂಓದಿ:ಕಾವೇರಿ ನದಿಗೆ KRSನಿಂದ 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ :ನದಿ ಪಾತ್ರದ ಜನರಿಗೆ ಎಚ್ಚರಿಕೆ
ಗ್ರಾಮದ ನೀರು ಸರಬರಾಜು ಮೋಟಾರು ಕೆಟ್ಟು ವಾರ ಕಳೆದರೂ ಅಧಿಕಾರಿಗಳು ರಿಪೇರಿಗೆ ಮುಂದಾಗದ ಕಾರಣ ಜಲ ಸಂಕಟ ಎದುರಾಗಿದೆ. ಹೊಲಗಳು ಮತ್ತು ಊರುಗಳು ಮುಳುಗುವಷ್ಟು ನದಿಯಲ್ಲಿ ನೀರಿದ್ದರೂ ಚಾಮನೂರು ಗ್ರಾಮಸ್ಥರಿಗೆ ಕುಡಿಯಲು ಹನಿ ನೀರು ಸಿಗದಂತಾಗಿದೆ.
ನರಕ ಸದೃಶ್ಯ ನದಿಯ ರಸ್ತೆಯಲ್ಲಿ ನೀರಿಗಾಗಿ ಏಳುಬೀಳು ನಡೆಸುತ್ತ ಜನಪ್ರತಿನಿಧಿಗಳಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಶಾಪ ಹಾಕುತ್ತಿದ್ದಾರೆ. ಕೂಡಲೇ ಕುಡಿಯುವ ನೀರಿನ ಗೋಳು ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ