ಆಧುನಿಕ ಕೃಷಿ ಪದ್ಧತಿ ಅನುಸರಿಸಿ: ಡಾ| ರಾಜಕುಮಾರ


Team Udayavani, Jul 13, 2017, 9:53 AM IST

13-GUB-1.jpg

ನಾರಾಯಣಪುರ: ನೀರಿನ ಮಿತ ಬಳಕೆಗೆ ಆದ್ಯತೆ ನೀಡಿ, ಆಧುನಿಕ ಕೃಷಿ ಪದ್ಧತಿ ಅನುಸರಿಸಬೇಕು ಎಂದು ಮಾಳನೂರು ಕೃಷಿ ಸಂಶೋಧನಾ ಕೇಂದ್ರದ ವಿಜ್ಞಾನಿ ಡಾ| ರಾಜಕುಮಾರ ಹೇಳಿದರು.

ಪಟ್ಟಣದ ಶ್ರೀ ಯಲ್ಲಾಲಿಂಗ ದೇವಸ್ಥಾನದ ಮಂಗಲ ಮಂಟಪದಲ್ಲಿ ಬುಧವಾರ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಇತರೆ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ 2017-18 ನೇ ಸಾಲಿನ ಕೃಷಿ ಅಭಿಯಾನ, ರೈತರೊಂದಿಗೆ ವಿಜ್ಞಾನಿಗಳ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೀರಿನ ಮಿತ ಬಳಕೆಗೆಂದು ಇರುವ ತುಂತುರು, ಹನಿ ನೀರಾವರಿ ಪದ್ಧತಿಗಳನ್ನು ಅನುಸರಿಸಿ ಭೂಮಿ ಸವಳು
ಜವಳು ಆಗುವುದನ್ನು ತಡೆಯಬೇಕು. ಇದಕ್ಕಾಗಿ ತಜ್ಞರ ಮಾರ್ಗದರ್ಶನದಲ್ಲಿ ಬಸಿಗಾಲುವೆ ನಿರ್ಮಿಸಿ ಭೂಮಿಯ ಫಲವತ್ತತೆ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರತಿಯೊಬ್ಬ ರೈತನು ಜಮೀನಿನಲ್ಲಿನ ಮಣ್ಣು ಪರೀಕ್ಷೆ ಮಾಡಿಸಿಕೊಳ್ಳಬೇಕು. ಇದರಿಂದ ಭೂಮಿಯಲ್ಲಿ ಮಣ್ಣಿನ ಫಲವತ್ತತೆ ಅರಿತು ಮಿತವಾದ ರಸಾಯನಿಕಗಳನ್ನು ಬಳಕೆ ಮಾಡಿಕೊಂಡು ಕೃಷಿ ಮಾಡಬಹುದು, ಸಾವಯವ ಕೃಷಿಗೆ ಮಹತ್ವ ನೀಡಿ, ಭೂಮಿ ಫಲವತ್ತತೆಗೆ ನೈಸರ್ಗಿಕ ಎರೆಹುಳು ಹಾಗೂ ಹಸಿರೆಲೆ ಗೊಬ್ಬರವನ್ನು ಯಥೇಚ್ಚವಾಗಿ ಬಳಸಿ ಶ್ರಮವಹಿಸಿ ದುಡಿದರೆ ನಾನಾ ಮಾದರಿಯ ಬೆಳೆಗಳನ್ನು ಬೆಳೆಯಬಹುದು ಎಂದು ವಿವರಿಸಿದರು.  

ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಹಾದೇವಪ್ಪ ಮಾತನಾಡಿ, ಕೃಷಿ ಇಲಾಖೆ ಮಳೆಯಾಶ್ರಿತ ವಲಯದ ರೈತರ ಜೀವನ ಮಟ್ಟ ಉತ್ತಮಗೊಳಿಸಲು ಇಲಾಖೆ ವತಿಯಿಂದ ಇಲಾಖೆಯ ನಡಿಗೆ ರೈತರ ಮನೆ ಬಾಗಿಲಿಗೆ ಎನ್ನುವ ಘೋಷಣೆಯೊಂದಿಗೆ ಮಹತ್ವಾಕಾಂಕ್ಷಿ ಯೋಜನೆಯಾದ ಕೃಷಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ತಾಪಂ ಅಧ್ಯಕ್ಷೆ ಅನಸೂಬಾಯಿ ಚವ್ವಾಣ ಉದ್ಘಾಟಿಸಿದರು, ಗ್ರಾ.ಪಂ ಅಧ್ಯಕ್ಷ  ಧೀರಪ್ಪ ರಾಠೊಡ ಅಧ್ಯಕ್ಷತೆ ವಹಿಸಿದ್ದರು, 
ಉಪತಹಶೀಲ್ದಾರ ಮಹಾದೇವಪ್ಪಗೌಡ ಬಿರಾದಾರ, ಜಿ.ಪಂ. ಸದಸ್ಯ ಎನ್‌.ಡಿ. ನಾಯಕ, ಗ್ರಾಪಂ ತಾ.ಪಂ ಸದಸ್ಯ ಮೋಹನ
ಪಾಟೀಲ, ಬಾಲಾಜಿ ಚವ್ವಾಣ, ಶೇಖ ಅಹ್ಮದ, ಕೃಷಿ ಅಧಿಕಾರಿಗಳಾದ ಎಸ್‌.ಬಿ. ತೆಗ್ಗಿ, ಪಶುಸಂಗೋಪನಾ ಅಧಿ ಕಾರಿ ಡಾ|
ಮೆಹಬೂಬಸಾಬ ಖಾಜಿ, ತೋಟಗಾರಿಗೆ ಅಧಿಕಾರಿ ಶಿವಾನಂದ, ಬಸಮ್ಮ, ಎಸ್‌.ಬಿ.ಪಾಲ್ಕೆ ಹಾಗೂ ಕೃಷಿ, ತೋಟಗಾರಿಕೆ, ರೇಷ್ಮೆ,
ಪಶುಸಂಗೋಪನೆ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಬಾಪೂಜಿ ಶಾಲೆ ವಿದ್ಯಾರ್ಥಿಗಳು ರೈತ ಗೀತೆ ಹಾಡಿದರು,
ಎಸ್‌.ಆರ್‌.ಚಳಗೇರಿ ಸ್ವಾಗತಿಸಿದರು, ಆರ್‌.ಎಸ್‌. ಸರ್ಜಾಪುರ ನಿರೂಪಿಸಿದರು. ಕೃಷಿ ಅಧಿ ಕಾರಿ ಚನ್ನಪ್ಪಗೌಡ ಗೌಡರ
ವಂದಿಸಿದರು.

ವಿವಿಧ ಇಲಾಖೆಗಳಿಂದ ಕೃಷಿಯಂತ್ರಗಳ ಪ್ರದರ್ಶನ: ಇಲಾಖೆಯ ನಡೆ ರೈತರ ಮನೆ ಕಡೆ ಕಾರ್ಯಕ್ರಮದಡಿ ರೈತರ ಕೃಷಿಗೆ ಉಪಯೋಗವಾಗುವ ವಿವಿಧ ಯಂತ್ರಗಳ  ಪ್ರದರ್ಶನ ಹಾಗೂ ವಸ್ತು ಪ್ರದರ್ಶನ ವಿಶೇಷ ಗಮನ ಸೆಳೆಯಿತು. ನಾರಾಯಣಪುರಕ್ಕೂ ರೈತ ಸಂಪರ್ಕ ಕೇಂದ್ರ ನೀಡಿ ನಾರಾಯಣಪುರ ಸುತ್ತಮುತ್ತ ಅನೇಕ ಹಳ್ಳಿಗಳಿವೆ. ಇಲ್ಲಿಯೇ ರೈತ ಸಂಪರ್ಕ ಕೇಂದ್ರವಾದರೆ ಈ ಭಾಗದ ರೈತರಿಗೆ ಅನುಕೂಲವಾಗುತ್ತದೆ. ರೈತರಿಗೆ ಇಲಾಖೆಯಿಂದ ವಿವಿಧ ಯೋಜನೆಗಳ ಮಾಹಿತಿ ದೊರೆಯುತ್ತದೆ. ಈ
ನಿಟ್ಟಿನಲ್ಲಿ ಕೃಷಿ ಅಧಿ ಕಾರಿಗಳು ಯೋಚಿಸಬೇಕು.
ಸೋಮನಗೌಡ, ರೈತ ಸಂಘದ ಮುಖಂಡ

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.