ವಸತಿ ಗೃಹಗಳ ನಿರ್ಮಾಣಕ್ಕೆ ಅಡಿಗಲ್ಲು
Team Udayavani, Dec 21, 2019, 11:33 AM IST
ಚಿಂಚೋಳಿ: ಪಟ್ಟಣದ ಬಸ್ ಡಿಪೋದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚಾಲಕರು ಮತ್ತು ನಿರ್ವಾಹಕರಿಗೆ ವಿಶೇಷ ಅಭಿವೃದ್ಧಿ ಯೋಜನೆ ಅಡಿಯಲ್ಲಿ 2 ಕೋಟಿ ರೂ. ಮಂಜೂರುಗೊಳಿಸಿ ನೌಕರರ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಂಸದ ಡಾ| ಉಮೇಶ ಜಾಧವ ಹೇಳಿದರು.
ಪಟ್ಟಣದ ಬಸ್ ಡಿಪೋ ಎದುರಿನಲ್ಲಿ 12 ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಅಡಿಗಲ್ಲು ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಡಿಪೋದಲ್ಲಿ ಕೆಲಸ ನಿರ್ವಹಿಸುತ್ತಿರುವ ಚಾಲಕ ಮತ್ತು ನಿರ್ವಾಹಕರಿಗೆ ವಸತಿ ಗೃಹ ಇಲ್ಲದ ಕಾರಣ ಸಾಕಷ್ಟು ತೊಂದರೆ ಪಡುತ್ತಿದ್ದರು. ಬರುವ ದಿನಗಳಲ್ಲಿ ಇನ್ನು ಹೆಚ್ಚಿನ ವಸತಿ ಗೃಹಗಳನ್ನು ಮಂಜೂರು ಗೊಳಿಸಲಾಗುವುದು ಎಂದರು. ತಾಲೂಕಿನ ಎಲ್ಲ ಕಡೆಗಳಲ್ಲಿ ಉತ್ತಮ ರಸ್ತೆ ಸಂಪರ್ಕ ಮಾಡಲಾಗಿದೆ.
ಎಲ್ಲ ಗ್ರಾಮ ಮತ್ತು ತಾಂಡಾಗಳಿಗೆ ಬಸ್ ಓಡಿಸಿ ಜನರಿಗೆ ಅನುಕೂಲ ಮಾಡಬೇಕು. ಶ್ರೀಮಂತರು ಖಾಸಗಿ ವಾಹನಗಳಿಗೆ ತಮ್ಮ ಗ್ರಾಮಗಳಿಗೆ ಹೋಗುತ್ತಾರೆ. ಆದರೆ ಬಡವರು ಸರ್ಕಾರಿ ಬಸ್ ಮೇಲೆ ಅವಲಂಬಿತರಾಗಿದ್ದಾರೆ. ಆದ್ದರಿಂದ ಎಲ್ಲ ಮಾರ್ಗಗಳಲ್ಲಿ ಬಸ್ ಸಂಚಾರ ಮಾಡಬೇಕೆಂದು ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು. ಶಾಸಕ ಡಾ| ಅವಿನಾಶ ಜಾಧವ ಮಾತನಾಡಿ, ವಸತಿ ಗೃಹಗಳ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ನಡೆಸಬೇಕು. ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದರು. ಸಮಾರಂಭದಲ್ಲಿ ಭೀಮಶೆಟ್ಟಿ ಮುರುಡಾ, ಬಾಬುರಾವ್ ಪಾಟೀಲ, ಜಗದೀಶಸಿಂಗ್ ಠಾಕೂರ, ರಾಜು ಪವಾರ, ಶ್ರೀಮಂತ ಕಟ್ಟಿಮನಿ, ಅಶೋಕ ಚವ್ಹಾಣ, ಅಜೀತ ಪಾಟೀಲ, ಸಾರಿಗೆ ಇಲಾಖೆ ಅಧಿಕಾರಿಗಳಾದ ನಾಗರಾಜ ಸಿರಾಳಿ, ಎಂ.ಎ. ಖಾದ್ರಿ, ಶಮಿಯೋದ್ದೀನ್ ಶಾಹಿನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್