ಕೊರಚ-ಕೊರಮ ಸಮುದಾಯಕ್ಕೆ ಟಿಕೆಟ್‌ ನೀಡಲು ಒತ್ತಾಯ


Team Udayavani, Feb 25, 2019, 4:57 AM IST

gul-2.jpg

ಆಳಂದ: ಬರುವ ಲೋಕಸಭಾ ಚುನಾವಣೆಯಲ್ಲಿ ಕೊರಚ, ಕೊರಮ ಜನಾಂಗಕ್ಕೆ ಟಿಕೆಟ್‌ ನೀಡುವ ಮೂಲಕ ರಾಜಕೀಯ ಸ್ಥಾನಮಾನ ಕಲ್ಪಿಸಬೇಕು ಎಂದು ಕೊರಚ, ಕೊರಮ ಸಂಘದ ರಾಜ್ಯಾಧ್ಯಕ್ಷ ಬಿ. ಮಾದೇಶ ರಾಜಕೀಯ ಪಕ್ಷಗಳಿಗೆ ಆಗ್ರಹಿಸಿದರು.  ಪಟ್ಟಣದ ಗುರುಭವನ ಆವರಣದಲ್ಲಿ ರವಿವಾರ ಶರಣ ನುಲಿಯ ಚಂದಯ್ಯನವರ 911ನೇ ಜಯಂತ್ಯುತ್ಸವ, ಹಳ್ಳದ ಯಲ್ಲಮ್ಮದೇವಿ 18ನೇ ಜಾತ್ರೆ, ತಾಲೂಕು ಕೊರಮ ಸಮಾಜದ ಜನ ಜಾಗೃತಿ ಸಮಾವೇಶದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಚುನಾವಣೆಯಲ್ಲಿ ಸಮುದಾಯಕ್ಕೆ ಟಿಕೆಟ್‌ ನೀಡದೆ ಕಡೆಗಣಿಸುವ ಪಕ್ಷಗಳಿಗೆ ಬೆಂಬಲವಿಲ್ಲ ಎಂದು ಘೋಷಿಸಿದ ಅವರು, ನಾವು ಕೇಳುವ ಹಕ್ಕು ಭಿಕ್ಷೆಯಲ್ಲ. ಸಂವಿಧಾನ ಬದ್ಧ ಹಕ್ಕಾಗಿದೆ. ದೇಶದ ಸಂವಿಧಾನವೇ ಸಮುದಾಯಕ್ಕೆ ಧ್ವನಿಯಾಗಿದೆ. ಇತಿಹಾಸ, ಪರಂಪರೆ, ಕಲೆ, ಸಂಸ್ಕೃತಿ ಹೊಂದಿರುವ ಕೊರಚ, ಕೊರಮ ದೇವ ಸಮುದಾಯಕ್ಕೆ ರಾಜ್ಯ ಸರ್ಕಾರ ಕೂಡಲೇ ಅಲೆಮಾರಿ ನಿಗಮ ಸ್ಥಾಪಿಸುವ ಮೂಲಕ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಅನೇಕ ಸರ್ಕಾರಿ ಸೌಲಭ್ಯಗಳನ್ನು ಅಧಿಕಾರಿಗಳು, ಜನ ಪ್ರತಿನಿಧಿಗಳು ಅನ್ಯ ಸಮುದಾಯಕ್ಕೆ ನೀಡುವ ಮೂಲಕ ಸಮುದಾಯವನ್ನು ಕಡೆಗಣಿಸಿದ್ದಾರೆ. ಹೀಗಾಗಬಾರದು. ಸಮುದಾಯದ ಮೂಲ ಕಸುಬಿಗೆ ತರಬೇತಿ ದೊರೆಯಬೇಕು. ಕಾರ್ಖಾನೆ ಸ್ಥಾಪಿಸಬೇಕು. ಮಾರುಕಟ್ಟೆ ವಾತಾವರಣ ಕಲ್ಪಿಸಬೇಕು. ಶಿಕ್ಷಣಕ್ಕೆ ಮಹತ್ವ ನೀಡಿ ಐಎಎಸ್‌, ಐಪಿಎಸ್‌ ಹುದ್ದೆಗಳನ್ನು ಸಮಾಜದ ವಿದ್ಯಾರ್ಥಿಗಳು ಪಡೆಯಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಅಭಿವೃದ್ಧಿ ಸಾಧಿಸಲು ರಾಜ್ಯದಲ್ಲಿ ಸಂಘಟಿತ ಹೋರಾಟಕ್ಕೆ ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು.

ದಿವ್ಯ ಸಾನ್ನಿಧ್ಯ ವಹಿಸಿದ್ದ ನುಲಿಯ ಚಂದಯ್ಯನವರ ಪೀಠದ ಜಗದ್ಗುರು ವೃಷಭೇಂದ್ರ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ಶರಣ ನುಲಿಯ ಚಂದಯ್ಯನವರ ತತ್ವಗಳನ್ನು ಪಾಲಿಸಿ ಎಂದರು. 

ಬಿಜೆಪಿ ಮುಖಂಡ ಅಶೋಕ ಗುತ್ತೇದಾರ ಸಮಾವೇಶ ಉದ್ಘಾಟಿಸಿದರು. ಸುನೀಲ ಮಾನ್ಪಡೆ, ಕೊರಮ ಸಮಾಜದ ವಿಜಯಪುರ ಜಿಲ್ಲಾಧ್ಯಕ್ಷ ಗೋವಿಂದರಾವ್‌ ಭಜಂತ್ರಿ, ಕಲಬುರಗಿ ಎಇಇ ಶಾಂತಪ್ಪ ಎಸ್‌. ಜಾಧವ್‌, ಕಮಲಾಕರ್‌ ಮಾನೆ, ಅಧ್ಯಕ್ಷತೆ ವಹಿಸಿದ್ದ ತಾಲೂಕು ಕೊರಮ ಸಮಾಜದ
ಅಧ್ಯಕ್ಷ ಕಮಲಾಕರ ಎಲ್‌. ಮಾನೆ ಸಮಾಜ ಸಂಘಟನೆಗೆ ಆದ್ಯತೆ ನೀಡಿ ಎಂದು ಹೇಳಿದರು.

ಗುತ್ತಿಗೆದಾರ ಪ್ರಕಾಶ ಬಿ. ಫುಲಾರ, ತಾಯಪ್ಪ ಗುತ್ತೇದಾರ, ಜೇವರ್ಗಿ ತಾಪಂ ಇಒ ಪ್ರಭು ಸಿ. ಮಾನೆ, , ಜಿಲ್ಲಾ ಕೊರಮ ಸಮಾಜದ ಗೌರವಾಧ್ಯಕ್ಷ ಬಸಣ್ಣಾ ಭಜಂತ್ರಿ, ಜಿಲ್ಲಾಧ್ಯಕ್ಷ ಗಿರೀಶ ಭಜಂತ್ರಿ, ಸಮಾಜದ ತಾಲೂಕು ಗೌರವಾಧ್ಯಕ್ಷ ಅಣ್ಣಪ್ಪ ಜಾಧವ್‌, ಸೂರ್ಯಕಾಂತ ಜಾಧವ್‌ ಮಾರುತಿ ಜಾಧವ್‌, ಪ್ರಧಾನ ಕಾರ್ಯದರ್ಶಿ ಲೋಕೇಶ ಜಾಧವ್‌, ಕಾಶಿನಾಥ ಜಾಧವ್‌, ಸುರೇಶ ಜಾಧವ್‌, ಹಣಮಂತ ಜಾಧವ್‌, ಕಲ್ಯಾಣಿ ಜಾಧವ್‌, ರಮೇಶ ಜಾಧವ್‌, ಮಲ್ಲಿಕಾರ್ಜುನ ಜಾಧವ್‌, ಭಜರಂಗ ಎಸ್‌. ಮಾನೆ, ಬಾಲಾಜಿ ಎ. ಜಾಧವ್‌ ಮತ್ತಿತರರು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಪಟ್ಟಣದ ಪ್ರವಾಸಿ ಮಂದಿರದಿಂದ ಗುರುಭವನ ವರೆಗೆ ನುಲಿಯ ಚಂದಯ್ಯನವರ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ನಂತರ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ವಿವಿಧ ಜಿಲ್ಲೆಯ ತಾಲೂಕು ಪದಾಧಿ ಕಾರಿಗಳು ಭಾಗವಹಿಸಿದ್ದರು. ಇದೆ ವೇಳೆ ಕೊರಚ, ಕೊರಮ ಸಂಘದ ಸದಸ್ಯತ್ವ ರಾಜ್ಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ರಮೇಶ ಜಾಧವ ನಿರೂಪಿಸಿದರು. ಪ್ರದೀಪ ತಳಕೇರಿ ಭಾವಗೀತೆ ಹಾಡಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.