ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಪ್ರೊ. ಮಹೇಶ್ವರಯ್ಯ ಇನ್ನಿಲ್ಲ
Team Udayavani, Jun 13, 2021, 6:08 PM IST
ಕಲಬುರಗಿ: ರಾಜ್ಯದ ಏಕೈಕ ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಹಿಂದಿನ ಕುಲಪತಿ ಪ್ರೊ. ಎಚ್.ಎಂ ಮಹೇಶ್ವರಯ್ಯ (70) ರವಿವಾರ ಧಾರವಾಡದಲ್ಲಿ ನಿಧನರಾದರು.
ಕರ್ನಾಟಕದ ಕೇಂದ್ರೀಯ ವಿವಿಯ ಪ್ರಥಮ ಪೂರ್ಣಾವಧಿ ಕುಲಪತಿಗಳೆಂದು ಹೆಸರು ಪಡೆದಿದ್ದ ಪ್ರೊ. ಮಹೇಶ್ವರಯ್ಯ ಅವರು 2015ರ ಏಪ್ರಿಲ್ 20ರಿಂದ 2020ರ ನವ್ಹೆಂಬರ್ 13ರವರೆಗೆ ಐದು ವರ್ಷ ಆರು ತಿಂಗಳ ಕಾಲ ಕುಲಪತಿಗಳಾಗಿ ಕಾರ್ಯನಿರ್ವಹಿಸಿದ್ದಾರೆ.
ಸಿಯುಕೆ ಕುಲಪತಿಗಳಾಗಿ ವಿವಿಯ ಕಟ್ಟಡಗಳನ್ನು ಪೂರ್ಣಗೊಳಿಸುವ ಕುರಿತಾಗಿ ವಿಶೇಷ ನಿಗಾ ವಹಿಸಿದ್ದಲ್ಲದೇ ಅನೇಕ ಹೊಸ ಕೋರ್ಸುಗಳ ಪ್ರಾರಂಭಕ್ಕೆ ಕಾರಣಿಭೂತರಾಗಿದ್ದರು. ವಿವಿಯಲ್ಲಿದ್ದುಕೊಂಡು ವಿವಿಯ ಸರ್ವಾಂಗೀಣ ಅಭಿವೃದ್ಧಿಗೆ ಹಗಲಿರಳು ಶ್ರಮಿಸಿದ್ದರು ಎಂದರೆ ತಪ್ಪಾಗಲಿಕ್ಕಿಲ್ಲ. ವಿವಿಯ ಶೈಕ್ಷಣಿಕ ಚಟುವಟಿಕೆಗಳನ್ನು ಕಾಲಾನುಕಾಲ ಆರಂಭಗೊಳ್ಳುವಲ್ಲಿ ಹಾಗೂ ಸಕಾಲಕ್ಕೆ ಘಟಿಕೋತ್ಸವ ನಡೆಯುವಲ್ಲಿ ಪ್ರೊ. ಮಹೇಶ್ವರಯ್ಯ ಅವರ ಕಾರ್ಯಶೀಲತೆಗೆ ಹಿಡಿದ ಕನ್ನಡಿಯಾಗಿದೆ.
ಇದನ್ನೂ ಓದಿ: ದೇವಸ್ಥಾನದ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆ ಸೃಷಿಸಿ ದೇಣಿಗೆ ಲೂಟಿ: ಪ್ರಕರಣ ದಾಖಲು
ಸಿಯುಕೆ ಕುಲಪತಿಗಳಾಗುವ ಮುಂಚೆ ಮೈಸೂರಿನಲ್ಲಿನ ಭಾರತೀಯ ಭಾಷಾ ಸಂಸ್ಥೆಯ ನಿರ್ದೇಶಕರಾಗಿದ್ದರು. ಅದಕ್ಕೂ ಮುಂಚೆ ಧಾರವಾಡದ ಕರ್ನಾಟಕ ವಿವಿಯ ಭಾಷಾಶಾಸ್ತ್ರದ ಪ್ರಾಧ್ಯಾಪರಾಗಿದ್ದರು.
ಡೀನ್ (ಕಲಾ ವಿಭಾಗ), ಮತ್ತು ಕರ್ನಾಟಕ ವಿಶ್ವವಿದ್ಯಾಲಯದ ಧಾರವಾಡದ ಡಾ. ಆರ್.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ನಿರ್ದೇಶಕರು, ವಿದ್ಯಾರ್ಥಿ ಕಲ್ಯಾಣ ನಿರ್ದೇಶಕರು, ಪತ್ರಿಕಾ ಮತ್ತು ಪ್ರಕಟಣೆಗಳ ನಿರ್ದೇಶಕರು, ಸಿಂಡಿಕೇಟ್, ಸೆನೆಟ್ ಮತ್ತು ಅಕಾಡೆಮಿಕ್ ಕೌನ್ಸಿಲ್ ಸದಸ್ಯರ ಇತರ ಆಡಳಿತಾತ್ಮಕ ಪಾತ್ರಗಳಿಗೆ ಹೆಚ್ಚುವರಿಯಾಗಿ – ಚಾರ್ಜ್ ಉಪಕುಲಪತಿ ಮತ್ತು ರಿಜಿಸ್ಟ್ರಾರ್ ಅವರ ಸಾಮರ್ಥ್ಯದಲ್ಲಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಸೇವೆ ಸಲ್ಲಿಸಿದ್ದಾರೆ.
ಕಲಬುರಗಿ ಯ ಕೇಂದ್ರೀಯವಿಶ್ವ ವಿದ್ಯಾಲಯದ ಕುಲಪತಿ ಗಳಾಗಿ ಅವರು ಸೇವೆ ಸಲ್ಲಿಸಿ ಗಮನ ಸೆಳೆದಿದಗದ ಅವರು ಕರ್ನಾಟಕ ಜಾನಪದ ವಿವಿಗೆ ಆರಂಭದಲ್ಲಿ ಮಾರ್ಗ ದರ್ಶಕ ರಾಗಿ ಸೇವೆ ಸಲ್ಲಿಸಿದ್ದಾರೆ.
ಜಾನಪದ ಭಾಷಾ ಅಧ್ಯಯನ ಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಧ್ಯಯನ ಕೈಗೊಂಡ ಅವರು ತಮ್ಮ ವಿದ್ಯಾರ್ಥಿಗಳಿಗೆ ಇದೇ ವಿಷಯಗಳ ಮೇಲೆ ಪಿಎಚ್ಡಿ ಮಾಡಲು ಮಾರ್ಗದರ್ಶನ ಮಾಡಿದ್ದರು.
ಅಷ್ಟೇ ಯಲ್ಲ ದೇಶಿ ಜ್ಞಾನ ಪರಂಪರೆಯ ವಿಚಾರಗಳನ್ನು ಅಳವಡಿಸಿ ಕೊಂಡಿದಗದ ಅವರು ಕಡೆ ಅವರೆಗು ತಮ್ಮ ಸಂಶೋಧನಾ ಪ್ರವೃತ್ತಿ ಕೈ ಬಿಟ್ಟಿರಲಿಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಜಾನಪದ ಸಂವಹನ ವಿಷಯದಲ್ಲಿ ಅವರು ಹೊರತಂದ ಕೃತಿಗಳು ಯುವ ಸಂಶೋಧಕರಿಗೆ ದಾರಿ ದೀಪ ವಾಗಿವೆ.
ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಪ್ರೊ. ಎಚ್. ಎಂ. ಮಹೇಶ್ವರಯ್ಯ ಪತ್ನಿ, ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಪ್ರೊ. ಮಹೇಶ್ವರಯ್ಯ ನಿಧನಕ್ಕೆ ಕರ್ನಾಟಕ ಕೇಂದ್ರೀಯ ವಿವಿಯ ಪ್ರಾಧ್ಯಾಪಕ ಹಾಗೂ ಸಿಬ್ಬಂದಿ ವರ್ಗ ಶೋಕ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’