ಮಾಜಿ ಸಂಸದ ಕೆ. ಬಿ ಶಾಣಪ್ಪ ಕೋವಿಡ್-19 ಸೋಂಕಿಗೆ ಬಲಿ
Team Udayavani, May 9, 2021, 5:12 PM IST
ಕಲಬುರಗಿ: ರಾಜ್ಯಸಬೆಯ ಮಾಜಿ ಸದಸ್ಯ, ಮಾಜಿ ಸಚಿವ, ಹಿರಿಯ ನಾಯಕ ಕೆ.ಬಿ ಶಾಣಪ್ಪ ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ ಸೋಂಕು ದೃಢವಾಗಿದ್ದ ಅವರನ್ನು ಮೂರು ದಿನಗಳ ಹಿಂದೆ ಇಲ್ಲಿನ ಜಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಇಂದು ಕೊನೆಯುಸಿರೆಳೆದರು. ಅವರಿಗೆ 83 ವರ್ಷ ವಯಸ್ಸಾಗಿತ್ತು.
ಆರಂಭದಲ್ಲಿ ಕಾರ್ಮಿಕ ನಾಯಕರಾಗಿ ಗುರುತಿಸಿಕೊಂಡ ಶಾಣಪ್ಪ ಅವರು ಎರಡು ಸಲ ಶಹಾಬಾದ ಮೀಸಲು ಕ್ಷೇತ್ರದಿಂದ ಕಮ್ಯುನಿಸ್ಟ್ ಪಕ್ಷದಿಂದ ಶಾಸಕರಾಗಿದ್ದರು. ಅದರಲ್ಲೂ ಒಂದು ಬಾರಿ ಕೇವಲ 80 ಮತಗಳ ಅಂತರದಿಂದ ಸಿ. ಗುರುನಾಥ ಎದುರು ಗೆಲುವು ಸಾಧಿಸಿದ್ದರು. ನಂತರ ಹಲವು ಚುನಾವಣೆಯಲ್ಲಿ ಸ್ಪರ್ಧಿಸಿದಾದರೂ ಗೆಲುವು ಸಾಧಿಸಲಿಲ್ಲ.
ತದನಂತರ ಜನತಾ ಪರಿವಾರ ನಾಯಕ ಎಂದೇ ಖ್ಯಾತಿ ಪಡೆದಿದ್ದ ಶಾಣಪ್ಪ ಅವರು ಜೆ. ಎಚ್. ಪಟೇಲ್ ಸಂಪುಟದಲ್ಲಿ ಮಂತ್ರಿಯಾಗಿದ್ದರು.
ಎಂಎಲ್ಎ- ಎಂಎಲ್ಸಿ ಇಲ್ಲದೇ ಮಂತ್ರಿಯಾದವರು: ಕೆ.ಬಿ. ಶಾಣಪ್ಪ ಎಂಎಲ್ಎ ಇರದಿದ್ದರೂ ಜೆ.ಎಚ್.ಪಟೇಲ್ ಅವರು ಶಾಣಪ್ಪ ಅವರನ್ನು ಮಂತ್ರಿ ಮಂಡಲಕ್ಕೆ ಸೇರಿಸಿಕೊಂಡು ಅಬಕಾರಿ ಖಾತೆಯನ್ನೇ ನೀಡಿದ್ದರು. ನಂತರ ಆರು ತಿಂಗಳೊಳಗೆ ಎಂಎಲ್ಎ ಇಲ್ಲವೇ ಎಂಎಲ್ಸಿ ಆಗದಿದ್ದಕ್ಕೆ ಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಜೆ.ಪಿ. ಚಳುವಳಿಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದರು.
ಇದನ್ನೂ ಓದಿ:ನಿಮಗೆಷ್ಟು ಗೊತ್ತು ‘ಅಮಾಂಗ್ ಅಸ್’ ಎಂಬ ಮಲ್ಟಿಪ್ಲೇಯರ್ ಗೇಮ್ ಬಗ್ಗೆ.? ಇಲ್ಲಿದೆ ಮಾಹಿತಿ
ನಂತರ ಬಿಜೆಪಿ ಸೇರಿದ್ದ ಕೆ.ಬಿ. ಶಾಣಪ್ಪ ಅವರನ್ನು ಮೊದಲು ರಾಜ್ಯಸಭೆಗೆ ನಾಮಕರಣಗೊಳಿಸಲಾಗಿತ್ತು. ತದನಂತರ ರಾಜ್ಯ ವಿಧಾನ ಪರಿಷತ್ ಗೂ ನಾಮನಿರ್ದೇಶನಗೊಳಿಸಲಾಗಿತ್ತು. ಇತ್ತೀಚಿಗಷ್ಟೇ ಅಂದರೆ ಕಳೆದ 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರಿದ್ದರು.
ಪುಸ್ತಕ ಓದುವುದರಲ್ಲಿ ಹೆಚ್ಚು ತೊಡಗಿಸಿಕೊಳ್ಳುತ್ತಿದ್ದ ಕೆ. ಬಿ.ಶಾಣಪ್ಪ ಅವರು ಖ್ಯಾತ ಲೇಖಕರ ಪ್ರಸಿದ್ದ ಆಂಗ್ಲ ಕೃತಿಗಳನ್ನು ಓದಿರುವುದನ್ನು ಕೆಲವು ಸಂದರ್ಭಗಳಲ್ಲಿ ಉಲ್ಲೇಖಿಸುತ್ತಿದ್ದರು.
ಬಿಎಸ್ ವೈ-ಎಚ್ ಡಿಕೆ ಸಂತಾಪ: ಮಾಜಿ ಸಚಿವ ಕೆ. ಬಿ. ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಶಾಣಪ್ಪ ಅವರು ಕಲ್ಯಾಣ ಕರ್ನಾಟಕ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ಸದನದಲ್ಲಿ ಸದಾ ನೊಂದ ಜನರ ದನಿಯಾಗಿದ್ದರು. ಅವರ ನಿಧನದಿಂದ ಒಬ್ಬ ನೇರ ನಿಷ್ಠುರ ನಡವಳಿಕೆಯ ನಾಯಕನನ್ನು ಕಳೆದುಕೊಂಡಂತಾಗಿದೆ ಎಂದಿದ್ದಾರೆ.
ಮಾಜಿ ಸಚಿವರು, ಮಾಜಿ ರಾಜ್ಯಸಭಾ ಸದಸ್ಯರು ಆಗಿದ್ದ ಹಿರಿಯ ಮುತ್ಸದ್ಧಿ ರಾಜಕಾರಣಿ ಕೆ. ಬಿ. ಶಾಣಪ್ಪನವರು ಕೊರೊನಾ ಸೋಂಕಿನಿಂದ ನಿಧನರಾದ ಸುದ್ದಿ ಮನಸ್ಸಿಗೆ ಅತೀವ ದುಃಖವನ್ನುಂಟು ಮಾಡಿದೆ. ಅಭಿಮಾನಿಗಳು ಮತ್ತು ಕುಟುಂಬವರ್ಗಕ್ಕೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಜಗತ್ ಕಿಲಾಡಿ! ವೈದ್ಯನೆಂದು ಹೇಳಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ ಹಣ್ಣಿನ ವ್ಯಾಪಾರಿ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCTV: ಬೆಳಗಾವಿಯಲ್ಲಿ ಹುಲಿ ಓಡಾಟದ ವಿಡಿಯೋ ವೈರಲ್… ಸುಳ್ಳು ಸುದ್ದಿ ಎಂದ ಅರಣ್ಯ ಇಲಾಖೆ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
MUST WATCH
ಹೊಸ ಸೇರ್ಪಡೆ
Sparrows ಕಣ್ಮರೆಯಾಗುತ್ತಿರುವ ಗುಬ್ಬಚ್ಚಿಗಳು..ಆದರೆ ಇಲ್ಲಿವೆ ನೂರಾರು ಚಿಂವ್..ಚಿಂವ್ ಗಳು..
ಉದ್ಯಾವರ-ಮರ್ಣೆ-ಬೆಳ್ಳೆ ರಸ್ತೆ ಅಭಿವೃದ್ಧಿ
Panaji; ಹೊಸ ದಾಖಲೆ ನಿರ್ಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
ರಾಷ್ಟ್ರೀಯ ನಾಟ್ಯೋತ್ಸವ; ದೇಶವೇ ಕೆರೆಮನೆಯತ್ತ ನೋಡುವಂತಾಗಿದ್ದು ಸಾಧನೆ
Thirthahalli ಅಂಗನವಾಡಿ ಮಿಲೆಟ್ ಲಡ್ಡು ಮಿಶ್ರಣದಲ್ಲಿ ಹುಳು ಪ್ರತ್ಯಕ್ಷ !