ಪಶು ಸಂಗೋಪನಾ ಇಲಾಖೆ ನಾಲ್ಕೂ ಉಪನಿರ್ದೇಶಕರ ಹುದ್ದೆ ಖಾಲಿ


Team Udayavani, Dec 20, 2018, 11:43 AM IST

gul-4.jpg

ಕಲಬುರಗಿ: ದನ-ಕರುಗಳು ಹಾಗೂ ಪಶು ಸಂಪತ್ತು ನಿರ್ವಹಣೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪಶು ಸಂಗೋಪನಾ ಇಲಾಖೆಯ ವಿವಿಧ ಉಪನಿರ್ದೇಶಕರ (ಡಿಡಿ) ನಾಲ್ಕೂ ಹುದ್ದೆಗಳು ಖಾಲಿ ಬಿದ್ದಿವೆ. ಹೀಗಾಗಿ ನೇಗಿಲಯೋಗಿಗೆ ಸ್ಪಂದಿಸುವ ಪಶು ವೈದ್ಯಕೀಯ ಇಲಾಖೆಯ ಎಲ್ಲಾ ನಾಲ್ಕೂ ಡಿಡಿ ಹುದ್ದೆಗಳು ಕಳದೆರಡು ವರ್ಷಗಳಿಂದ ಪ್ರಭಾರಿಯಲ್ಲಿಯೇ ಮುನ್ನಡೆದಿವೆ.

ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ, ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪನಿರ್ದೇಶಕ, ಪಾಲಿಕ್ಲಿನಿಕ್‌ ನಿರ್ವಹಣೆ ಉಪರ್ದೇಶಕ ಹಾಗೂ ಪಶು ವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕ ಹೀಗೆ ನಾಲ್ಕೂ ಹುದ್ದೆಗಳು ಖಾಲಿ ಇವೆ. ಅದರಲ್ಲೂ ಸಹಾಯಕ ನಿರ್ದೇಶಕರೊಬ್ಬರೇ ಎರಡೆರಡು ಉಪನಿರ್ದೇಶಕ ಹುದ್ದೆಗಳನ್ನು ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇಲಾಖೆಯ ಮಾತೃ ಹಾಗೂ ಪ್ರಮುಖ ಹುದ್ದೆಯಾಗಿರುವ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕರ ಹುದ್ದೆಯಾದರೂ ಪ್ರಭಾರಿಯಾಗಿರದೇ ಪೂರ್ಣ ಪ್ರಮಾಣದಲ್ಲಿ ಇರಬೇಕಿತ್ತು. ಡಾ| ನಾಮದೇವ ರಾಠೊಡ ಅವರೇ ಪ್ರಭಾರಿಯಾಗಿ ಕಳೆದೆರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಇವರೇ ಪಾಲಿಕ್ಲಿನಿಕ್‌ ಪ್ರಭಾರಿ ಉಪನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಇದೇ ಎರಡು ಡಿಡಿಗಳು ಅಫಜಲಪುರ ತಾಲೂಕಾ ಪಂಚಾಯತ್‌ ಕಾರ್ಯ ನಿರ್ವಾಹಣಾಧಿಕಾರಿಯಾಗಿ ಎರಡು ವರ್ಷಕಾಲ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸಹಾಯಕ ನಿರ್ದೇಶಕರಾಗಿರುವ ಡಾ| ನಾಮದೇವ ರಾಠೊಡ ಅವರು 2013-14 ರಿಂದ ಎಡಿ ಜತೆಗೆ ಹಲವು ಹುದ್ದೆಗಳ  ರ್ಯಭಾರ ವಹಿಸುತ್ತಾ ಇಲ್ಲಿಯೇ ಠಿಕಾಣಿ ಹೂಡಿದ್ದಾರೆ.

ಇನ್ನುಳಿದಂತೆ ಕುರಿ ಮತ್ತು ಉಣ್ಣೆ ನಿಗಮದ ಪ್ರಭಾರಿ ಉಪನಿರ್ದೇಶಕರಾಗಿ ಡಾ. ಶಿವಕುಮಾರ ಜಂಬಲದಿನ್ನಿ ಹಾಗೂ ಪಶುವೈದ್ಯಕೀಯ ಪರೀಕ್ಷಕರ ತರಬೇತಿ ಕೇಂದ್ರದ ಉಪನಿರ್ದೇಶಕರಾಗಿ ಡಾ| ನಾನಾಗೌಡ ಹಳ್ಳಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

 ಎಡಿ ಹುದ್ದೆಗಳು ಪ್ರಭಾರಿ: ಡಿಡಿಯಲ್ಲದೇ ತಾಲೂಕಾ ಸಹಾಯಕ ನಿರ್ದೇಶಕರ (ಎಡಿ) ಹುದ್ದೆಗಳಲ್ಲೂ ಪ್ರಭಾರಿಗಳದ್ದೇ ಕಾರುಬಾರು ಎನ್ನುವಂತಾಗಿದೆ. ಚಿಂಚೋಳಿ, ಆಳಂದ ಹಾಗೂ ಚಿತ್ತಾಪುರ ಈ ಮೂರು ತಾಲೂಕುಗಳಲ್ಲಿ ಎಡಿ ಹುದ್ದೆಗಳನ್ನು ಪ್ರಭಾರಿಯಾಗಿ ಮುನ್ನಡೆಸಲಾಗುತ್ತಿದೆ. ಹಿರಿಯ ಪಶು ವೈದ್ಯಕೀಯ ಪರೀಕ್ಷಕರೇ ಇವುಗಳನ್ನು ನಿರ್ವಹಿಸುತ್ತಿದ್ದಾರೆ. ಒಟ್ಟಾರೆ ಪಶು ಸಂಗೋಪನಾ ಇಲಾಖೆಯೇ ಪ್ರಭಾರಿ ಎನ್ನುವಂತಾಗಿದೆ.

ವಿಭಾಗೀಯ ಕೇಂದ್ರ ಹೊಂದಿರುವ ಕಲಬುರಗಿ ಜಿಲ್ಲೆಯ ಪಶು ಸಂಗೋಪನಾ ಇಲಾಖೆಯ ನಾಲ್ಕೂ ಉಪನಿರ್ದೇಶಕರ ಹುದ್ದೆಗಳು ಅದರಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿನಿಧಿಸುವ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲೂ ಎಡಿ ಹುದ್ದೆ ಪ್ರಭಾರಿಯಾಗಿರುವುದು ಆಡಳಿತ ವ್ಯವಸ್ಥೆಗೆ ಹಿಡಿದ ಕನ್ನಡಿ ಎನ್ನಬಹುದು. 

ಆಡಳಿತದ ಮೇಲೆ ಪರಿಣಾಮ: ಮಹತ್ವದ ಪಶು ಸಂಗೋಪನಾ ಇಲಾಖೆ ನಾಲ್ಕೂ ಡಿಡಿ ಹುದ್ದೆಗಳು ಪ್ರಭಾರಿಯಲ್ಲಿರುವುದು ಆಡಳಿತದ ಮೇಲೆ ಪರಿಣಾಮ ಬೀರುತ್ತಿದೆ. ಹೀಗಾಗಿ ಇಲಾಖೆ ಕಾರ್ಯಕ್ರಮಗಳು ನಿಗದಿತವಾಗಿ ನಡೆಯದೇ ವಿಳಂಬವಾಗುತ್ತಿವೆ. ಜಿಲ್ಲೆಯ ಹಲವು ತಾಲೂಕುಗಳಲ್ಲಿ ಪಶುಭಾಗ್ಯ ಫಲಾನುಭವಿಗಳನ್ನು
ಅಂತಿಮಗೊಳಿಸಿಲ್ಲ. ಅದೇ ರೀತಿ ಇತರ ಕಾರ್ಯಗಳಲ್ಲೂ ನಿರೀಕ್ಷಿತ ಪ್ರಮಾಣದಲ್ಲಿ ಕಾರ್ಯಗಳು ನಡೆಯುತ್ತಿಲ್ಲ.

ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ: ರಾಜ್ಯದ ವಿಭಾಗಕ್ಕೊಂದು ಪಶುಗಳ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳು ಸ್ಥಾಪನೆಯಾಗುತ್ತಿವೆ. ಈ ನಿಟ್ಟಿನಲ್ಲಿ ಪಶು ಸಂಗೋಪನಾ ಇಲಾಖೆ ಆವರಣದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆಗೆಂದು ಸುಸಜ್ಜಿತ ಕಟ್ಟಡ ನಿರ್ಮಾಣವಾಗುತ್ತಿದೆ. ಇಂತಹ ಭವ್ಯ ಕಟ್ಟಡಕ್ಕೆ ಅಡಿಗಲ್ಲು ನೆರವೇರಿಸದೇ ಆರಂಭಗೊಳಿಸಲಾಗಿದೆ ಎಂದರೆ ಇಲಾಖೆ ಕಾರ್ಯವೈಖರಿ ಅರ್ಥೈಯಿಸಿಕೊಳ್ಳಬಹುದು. ಕಟ್ಟಡ ನಿರ್ಮಾಣ ಕಾರ್ಯ ಗುಣಮಟ್ಟದಲ್ಲಿ ನಡೆಯುತ್ತಿಲ್ಲ ಎನ್ನು ಆರೋಪಗಳು ಕೇಳಿ ಬರುತ್ತಿದ್ದರೂ ಯಾರೂ ಪರಿಶೀಲನೆ ಮಾಡುತ್ತಿಲ್ಲ.

„ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.