ಬಡವರಿಗೆ ಉಚಿತ ಅನಿಲ ಭಾಗ್ಯ
Team Udayavani, Feb 19, 2018, 11:53 AM IST
ಅಫಜಲಪುರ: ಗ್ರಾಮೀಣ ಭಾಗದ ತಾಯಂದಿರು ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವುದರಿಂದ ಹೊಗೆ ನುಂಗಿ
ನೋವು ಅನುಭವಿಸುತ್ತಿದ್ದರು. ಅದನ್ನು ತಪ್ಪಿಸುವ ಸಲುವಾಗಿ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅಡಿ ಉಚಿತ
ಗ್ಯಾಸ್ ಯೋಜನೆ ಅರ್ಹತಾ ಪ್ರಮಾಣ ಪತ್ರಗಳನ್ನು ಶಾಸಕ ಮಾಲೀಕಯ್ಯ ಗುತ್ತೇದಾರ ವಿತರಿಸಿದರು.
ತಾಲೂಕಿನ ದೇಸಾಯಿ ಕಲ್ಲೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಅರ್ಹತಾ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು, ಬಿಪಿಎಲ್ ಕಾರ್ಡುದಾರರಿಗೆ ಈ ಸೌಲಭ್ಯ ಅನ್ವಯವಾಗಲಿದೆ. ನಮ್ಮ ಸರ್ಕಾರ ಗ್ರಾಮೀಣ ಭಾಗದ ತಾಯಂದಿರ ಕಷ್ಟ ನೋಡಲಾರದೆ ಯೋಜನೆ ಜಾರಿಗೊಳಿಸಿದೆ. ಕಟ್ಟಿಗೆ ಒಲೆಯಿಂದ ಹೊಗೆ ನುಂಗಿ ಅಡುಗೆ ಮಾಡಿದ್ದು ಸಾಕು ಇನ್ನು ಮುಂದೆ ಸರ್ಕಾರದ ಅನಿಲ ಭಾಗ್ಯ ಯೋಜನೆಯಡಿ ಬರುವ ಗ್ಯಾಸ್ನಲ್ಲಿ ಅಡುಗೆ ತಯಾರಿಸಿ ಹೊಗೆ ಮುಕ್ತ ಅಡುಗೆ ಕೋಣೆ ನಿಮ್ಮದಾಗಲಿ ಎಂದು ಹೇಳಿದರು.
ಎಪಿಎಂಸಿ ಅಧ್ಯಕ್ಷ ಶಂಕರಲಿಂಗ ಮೇತ್ರಿ ಹಾಗೂ ಸಿದ್ದಯ್ಯ ಆಕಾಶಮಠ, ಶಿವುಕುಮಾರ ಘಾಣೂರ ಮಾತನಾಡಿ,
ಸರ್ಕಾರದ ಉಚಿತ ಅನಿಲ ಭಾಗ್ಯ ಯೋಜನೆ ಬಹಳ ಉಪಯುಕ್ತವಾಗಿದೆ. ಅದರಲ್ಲೂ ನಮ್ಮ ಗ್ರಾಮೀಣ ಭಾಗದ
ಹೆಣ್ಣು ಮಕ್ಕಳು ಕಟ್ಟಿಗೆ ಒಲೆಯಲ್ಲಿ ಅಡುಗೆ ಮಾಡುವಾಗ ಹೊಗೆ ನುಂಗಿ ಸುಸ್ತಾಗುತ್ತಿದ್ದರು. ಈಗ ಇದರಿಂದ ಹೊಗೆ
ಮುಕ್ತ ಅಡುಗೆ ಕೋಣೆ ಜತೆಗೆ ಸ್ವತ್ಛತೆ ಸಹ ಇರಲಿದೆ. ಹೀಗಾಗಿ ಅನಿಲ ಭಾಗ್ಯದ ಸದುಪಯೋಗ ಪಡೆದುಕೊಳ್ಳಿ
ಎಂದು ಹೇಳಿದರು.
ಗ್ರಾಪಂ ಅಧ್ಯಕ್ಷೆ ಉಷಾ ಜಮದಾರ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಪಾಶಾ ಮಣೂರ, ದೇವೇಂದ್ರ ಜಮಾದಾರ, ಸಿದ್ದು ದಿಕ್ಸಂಗಿ, ಗುರುಪಾದ ಆಲೂರ, ನಿಂಗಪ್ಪ ಬಗಲೂರ, ರೇವಣಸಿದ್ದಪ್ಪ ಪಂಚರಕಟ್ಟಿ, ಶಿವಾಜಿ ನಿಂಬರ್ಗಿ, ತಹಶೀಲ್ದಾರ ಇಸ್ಮಾಯಿ ಮುಲ್ಕಿ, ಆಹಾರ ನಿರೀಕ್ಷಕ ಇಸಾಕ್ ಪಾಶಾ, ನಾಗೇಶ ಬಿಲ್ವಾಡ, ಅಭಿವೃದ್ಧಿ ಅಧಿ ಕಾರಿ ಸೇರಿದಂತೆ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ