ಬಾಲರಾಜ ಬ್ರಿಗೇಡ್ನಿಂದ ಉಚಿತ ಆರೋಗ್ಯ ಶಿಬಿರ
Team Udayavani, Jul 14, 2022, 3:13 PM IST
ಸೇಡಂ: ವಿನೂತನ ಸಮಾಜಮುಖೀ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿರುವ ಬಾಲರಾಜ ಬ್ರಿಗೇಡ್ ಮುಂಬರುವ ದಿನಗಳಲ್ಲಿ ವಿಧಾನಸಭೆ ಕ್ಷೇತ್ರದ 133 ಹಳ್ಳಿಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಲು ಮುಂದಾಗಿದೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.
ತಾಲೂಕಿನ ಮೋತಕಪಲ್ಲಿ ಗ್ರಾಮದ ಶ್ರೀ ಬಲಭೀಮಸೇನ ದೇವಾಲಯದ ಕಲ್ಯಾಣ ಮಂಟಪದಲ್ಲಿ ಶಾರದಾ ಚಾರಿಟೇಬಲ್ ಟ್ರಸ್ಟ್, ಬಾಲರಾಜ ಬ್ರಿಗೇಡ್ ಫೌಂಡೇಷನ್ ಸೇಡಂ ಹಾಗೂ ಯುನೈಟೆಡ್ ಆಸ್ಪತ್ರೆ ಕಲಬುರಗಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಳ್ಳಿ ಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ನಿರಂತರವಾಗಿ ಜನತೆಯ ಸೇವೆಗಾಗಿ ಮೀಸಲಿರಿಸಲಾಗಿದೆ. ಕೊರೊನಾದಂತ ಮಹಾಮಾರಿಯ ಸಂದರ್ಭದಲ್ಲಿಯೂ ಸೇವೆ ಮಾಡಿದ್ದೇವೆ. ಈಗ ಪ್ರತಿ ಹಳ್ಳಿಯಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸುವ ಮೂಲಕ ಜನಸೇವೆಗೆ ಮುಂದಾಗಿದ್ದೇವೆ ಎಂದರು.
ಬಾಲರಾಜ ಬ್ರಿಗೇಡ್ ಅಧ್ಯಕ್ಷ ಶಿವಕುಮಾರ ನಿಡಗುಂದಾ, ಗೋವರ್ಧನರೆಡ್ಡಿ ಮೋತಕಪಲ್ಲಿ, ವೆಂಕಟರೆಡ್ಡಿ ಗಾಡದಾನ, ಪರಮಾರೆಡ್ಡಿ ಶಕ್ಲಾಸಪಲ್ಲಿ, ಮುಖಂಡರಾದ ಹಣಮಯ್ಯ ಗುತ್ತೇದಾರ, ಬಸಯ್ಯ ಗೌಡ್ಸ್, ಪರಮೇಶ್ವರ ಪಾಟೀಲ, ಸೇವ್ಯಾನಾಯಕ, ಮಹೇಶ ಹೂಗಾರ, ಜಗನ್ನಾಥ, ಉದಯ ಕೋಲಕುಂದಾ, ಭೀಮಶಪ್ಪ, ಲಕ್ಷ್ಮೀಕಾಂತ, ಭೀಮು, ಸಿದ್ದು, ಸುದರ್ಶನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು