33 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಉಚಿತ ತರಬೇತಿ


Team Udayavani, Dec 3, 2019, 2:44 PM IST

GB-TDY-2

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು 6 ಜಿಲ್ಲೆಗಳ 33 ತಾಲೂಕು ಕೇಂದ್ರಗಳಲ್ಲಿ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆಯ ನೇಮಕಾತಿಗೆ ಪೂರ್ವಭಾವಿಯಾಗಿ ನಡೆಸುವ ಟಿಇಟಿ ಪರೀಕ್ಷೆಗೆ ಉಚಿತ ತರಬೇತಿ ಶಿಬಿರ ಹಮ್ಮಿಕೊಂಡಿದೆ ಎಂದು ಕೆ.ಕೆ.ಆರ್‌.ಡಿ.ಬಿ. ಮಂಡಳಿಯ ಕಾರ್ಯದರ್ಶಿ ಸುಬೋಧ ಯಾದವ ತಿಳಿಸಿದರು.

ನಗರದ ಬಿ.ಎಡ್‌. ಕಾಲೇಜಿನಲ್ಲಿ ಕಲಬುರಗಿ ದಕ್ಷಿಣ ವಲಯ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ2019-20ನೇ ಸಾಲಿಗೆ ಶಿಕ್ಷಕರ ಅರ್ಹತಾಪರೀಕ್ಷೆಯ (ಟಿ..ಟಿ) ಪೂರ್ವಭಾವಿವಾಗಿ ನಡೆದ ಉಚಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಂಡಳಿಯು ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಟ್ಟಿಬದ್ಧವಾಗಿದೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. 371ಜೆ ಅನ್ವಯ ಇಲ್ಲಿನ ಅಭ್ಯರ್ಥಿಗಳಿಗೆ ಉದ್ಯೋಗದಲ್ಲಿ ಮೀಸಲಾತಿ ಸೌಲಭ್ಯವಿರುವುದರಿಂದ ಸ್ಥಳೀಯ ವಿದ್ಯಾರ್ಥಿಗಳು ಶಿಕ್ಷಕರ ಹುದ್ದೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೇಮಕಾತಿಯಾಗಲು ತರಬೇತಿ ನೀಡಲಾಗುತ್ತದೆ. ಮುಂದೆ ಸಿಇಟಿ ಪರೀಕ್ಷೆಗೂ ಉಚಿತ ತರಬೇತಿನೀಡುವ ಚಿಂತನೆ ನಡೆಯುತ್ತಿದೆ. ಹಿಂದುಳಿದ ಪ್ರದೇಶದ ಅಭ್ಯರ್ಥಿಗಳು ಬ್ಯಾಂಕಿಂಗ್‌, ಎಸ್‌.ಡಿ.., ಎಫ್‌.ಡಿ.. ಪರೀಕ್ಷೆ ಬರೆಯಲು ಅನುಕೂಲವಾಗುವ ನಿಟ್ಟಿನಲ್ಲಿಯೂ ತರಬೇತಿ ನೀಡಲಾಗುತ್ತಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಳಿನ್‌ ಅತುಲ್‌ ಮಾತನಾಡಿ, 33 ಉಚಿತ ತರಬೇತಿ ಕೇಂದ್ರಗಳಲ್ಲಿ ಇಂದಿನಿಂದ 45 ದಿನಗಳ ಕಾಲ ಪ್ರತಿದಿನ ಸಾಯಂಕಾಲ 4.30 ರಿಂದ 7.30ರ ವರೆಗೆ ನಡೆಯುವ ತರಬೇತಿಯಲ್ಲಿ ಆಂಗ್ಲ, ವಿಜ್ಞಾನ ಮತ್ತು ಗಣಿತವಿಷಯ ಬೋಧನೆ ಮಾಡಲಾಗುತ್ತದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ಬೋಧನೆ ಮಾಡಲಿದ್ದಾರೆ ಎಂದರು.

7 ವಾರಗಳ ಈ ತರಬೇತಿಯಲ್ಲಿ 6 ವಾರಗಳಲ್ಲಿಯೇ ಪ್ರತಿ ವಿಷಯದ ಎಲ್ಲಾ ಪಾಠಗಳನ್ನು ಮುಗಿಸುವ ಗುರಿ ಹೊಂದಲಾಗಿದೆ. ಕಲಿಕೆಯ ಗುಣಮಟ್ಟ ಪರಿಶೀಲಿಸಲು ಪ್ರತಿ ವಾರಕ್ಕೆ ಕಿರು ಪರೀಕ್ಷೆ ನಡೆಸಲಾಗುವುದಲ್ಲದೆ ಕೊನೆಯ ವಾರ ಪುನರ್‌ ಮನನ ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಉಚಿತ ತರಬೇತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಆಂಗ್ಲ, ವಿಜ್ಞಾನ, ಗಣಿತ ವಿಷಯದೊಂದಿಗೆ ಮನೋವಿಜ್ಞಾನ ವಿಷಯದತರಬೇತಿ ನಮಗೆ ಅಗತ್ಯವಿದೆ. ಸಿಇಟಿಯಲ್ಲಿ 50 ಅಂಕ ವಸ್ತುನಿಷ್ಠ ಪ್ರಕಾರ ಮತ್ತು 100 ಅಂಕ ವಿವರಣಾತ್ಮಕ ಪ್ರಕಾರ ಪರೀಕ್ಷೆ ಇರುವುದರಿಂದಅದಕ್ಕೆ ಪೂರ್ವಕವಾಗಿ ಬೋಧಿ ಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಸಹ ನಿರ್ದೇಶಕ ವಿಜಯಕುಮಾರ, ಅಪರ ಶಿಕ್ಷಣ ಆಯುಕ್ತಾಲಯದ ನಿರ್ದೇಶಕ ಟಿ. ನಾರಾಯಣಗೌಡ, ಮಂಡಳಿಯ ಶಿಕ್ಷಣ ತಜ್ಞ ಎನ್‌.ಬಿ. ಪಾಟೀಲ್‌ ಸೇರಿದಂತೆ ಸಂಪನ್ಮೂಲ ಶಿಕ್ಷಕರು, ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಹಾಜರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.