ಆ.15ರಿಂದ 30 ಮೆಗ್ಯಾವಾಟ್‌ ವಿದ್ಯುತ್‌ ಉತ್ಪಾದನೆ

ಕೇಂದ್ರ ಸರಕಾರದಿಂದ ಸಿಗುವ ಎಲ್ಲ ಸಹಾಯ ಸಹಕಾರ ನೀಡುತ್ತೇನೆ

Team Udayavani, Jun 28, 2022, 5:51 PM IST

ಆ.15ರಿಂದ 30 ಮೆಗ್ಯಾವಾಟ್‌ ವಿದ್ಯುತ್‌ ಉತ್ಪಾದನೆ

ಚಿಂಚೋಳಿ: ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕು ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿಯಿಂದ ಇನ್ನು ಮುಂದೆ ಶಾಪ ಮುಕ್ತವಾಗುವುದಕ್ಕಾಗಿ ಸಿದ್ಧಸಿರಿ ಎಥೆನಾಲ್‌ ಹಾಗೂ ಪವರ್‌ ಉತ್ಪಾದನೆ ಕೆಲಸಗಳು ಭರದಿಂದ ನಡೆಯುತ್ತಿವೆ. ಒಟ್ಟು 450 ಕೋಟಿ ರೂ.ಯೋಜನೆಯಲ್ಲಿ ಅತ್ಯಾಧುನಿಕ ಯಂತ್ರೋಪಕರಣಗಳ ಜೋಡಣೆ ನಡೆಯುತ್ತಿದ್ದು, 30 ಮೆಗ್ಯಾವಾಟ್‌ ವಿದ್ಯುತ್‌ ಉತ್ಪಾದನೆ ಆಗಸ್ಟ್‌ 15ಕ್ಕೆ ಪ್ರಾರಂಭ ಆಗಲಿದೆ ಎಂದು ವಿಜಯಪುರ ಶಾಸಕರು ಹಾಗೂ ಸಿದ್ಧಸಿರಿ ಸೌಹಾರ್ದ ಸಹಕಾರಿ ಅಧ್ಯಕ್ಷ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಪಟ್ಟಣದಲ್ಲಿ ಸಿದ್ಧಸಿರಿ ಎಥೆನಾಲ್‌ ಹಾಗೂ ಪವರ್‌ ವಿಭಾಗದಿಂದ ಸಿದ್ಧಸಿರಿ ಸಂಕೀರ್ಣಗಳ, ಗೋಶಾಲೆ, ಸಿಬಿಎಸ್‌ಸಿ ಪಬ್ಲಿಕ್‌ ಶಾಲೆ, 108 ಹಾಸಿಗೆವುಳ್ಳ ಆಸ್ಪತ್ರೆ, ಎಸ್‌.ಮಾರ್ಟ್‌, ಕಲ್ಯಾಣ ಮಂಟಪ, ಕೃಷಿ ಸೇವಾ ಕೇಂದ್ರ, ಇಂಧನ ಕೇಂದ್ರಗಳ ಭೂಮಿಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆಯನ್ನು 37.74ಕೋಟಿ ರೂ.ಗಳನ್ನು ನೀಡಿ ಹರಾಜು ಟೆಂಡರ್‌ನಲ್ಲಿ ಪಡೆದುಕೊಂಡಿದ್ದೇನೆ. ದೇಶದಲ್ಲಿಯೇ 4.23 ಲಕ್ಷ ಟನ್‌ ಎಥೆನಾಲ್‌ ಉತ್ಪಾದನೆ 10 ಟನ್‌ ಸಿಎನ್‌ಜಿ ಉತ್ಪಾದಿಸಲಾಗುವುದು. 213 ಎಕರೆ ಜಮೀನುದಲ್ಲಿ 96 ಎಕರೆ ಜಮೀನು ಕಾರ್ಖಾನೆಗೆ ಒಳಪಟ್ಟಿದೆ. 113 ಎಕರೆ ಪಂಜಾಬ್‌ ಬ್ಯಾಂಕ್‌ ನೀಡುತ್ತಿದೆ. ಮುಂದಿನ ವರ್ಷ 10 ಲಕ್ಷ ಟನ್‌ ಎಥೆನಾಲ್‌ ಉತ್ಪಾದನೆ ಮಾಡಲಾಗುವುದು. ರೈತರು ನಮ್ಮ ಮೇಲೆ ವಿಶ್ವಾಸ ಇರಬೇಕು. ಈಗಾಗಲೇ ಕಾರ್ಖಾನೆಯಲ್ಲಿ 154 ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಲಾಗಿದೆ ಎಂದರು.

ನಾನು ಯಾರಿಗೂ ಲಂಚ ಕೊಡುವುದು ಇಲ್ಲ ಲಂಚ ಕೊಟ್ಟಿದ್ದರೆ ನಾನು ಆಗಲೇ ಮಂತ್ರಿಯಾಗುತ್ತಿದ್ದೆ. ನಮ್ಮಲ್ಲಿ ಗೂಂಡಾಗಿರಿ ನಡೆಯುವುದಿಲ್ಲ. ಗುಂಡಾಗಿರಿಯಿಂದಲೇ ರಾಜಕೀಯ ಪ್ರಾರಂಭಿಸಿದ್ದೇನೆ. ಚಿಂಚೋಳಿ ತಾಲೂಕು ಭವಿಷ್ಯದಲ್ಲಿ ಸುವರ್ಣಾಕ್ಷರದಲ್ಲಿ ಬರೆಯುವಂತಹದಾಗಲಿದೆ. ನನಗೆ ಇಳಿಸುವುದು ಏರಿಸುವುದು ಎಲ್ಲವೂ ಗೊತ್ತಿದೆ. ಮುಂದೆ ನಾನು ಜ್ಯೋತಿಷ್ಯ ಆಗುತ್ತೇನೆ ನಗೆ ಚಟಾಕಿ ಹಾರಿಸಿದರು.

ಕೇಂದ್ರ ಸಚಿವ ಭಗವಂತ ಖುಬಾ ಮಾತನಾಡಿ, ನಮ್ಮ ಮತಕ್ಷೇತ್ರದಲ್ಲಿ ಬಸನಗೌಡ ಪಾಟೀಲ ಯತ್ನಾಳ ಎಥೆನಾಲ್‌ ಮತ್ತು ಪವರ್‌ ಘಟಕ ಪ್ರಾರಂಭಿಸುವುದಕ್ಕಾಗಿ 450 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿದ್ದಾರೆ. ಇನ್ನು ಮುಂದೇ ದೇಶದಲ್ಲಿ ಎಥೆನಾಲ್‌ ಬೇಡಿಕೆ ಹೆಚ್ಚಾಗಲಿದೆ. ಸಂಸದ ಡಾ|ಉಮೇಶ ಜಾಧವ್‌ ಕಾಂಗ್ರೆಸ್‌ ಪಕ್ಷದಲ್ಲಿಯೇ ಇದ್ದರೆ ಈ ಕಾರ್ಖಾನೆ ಪ್ರಾರಂಭಗೊಳ್ಳುತ್ತಿರಲಿಲ್ಲ. ಬಿಜೆಪಿ ಬಂದ ನಂತರ ಎಲ್ಲ ಉತ್ತಮ ಬೆಳವಣಿಗೆ ಆಗಿವೆ. ಕೇಂದ್ರ ಸರಕಾರದಿಂದ ಸಿಗುವ ಎಲ್ಲ ಸಹಾಯ ಸಹಕಾರ ನೀಡುತ್ತೇನೆ ಎಂದು ಸಚಿವ ಖುಬಾ ಭರವಸೆ ನೀಡಿದರು.

ಅರಣ್ಯ ಸಚಿವ ಉಮೇಶ ಕತ್ತಿ ಮಾತನಾಡಿ, ಕಾರ್ಖಾನೆ ಪ್ರಾರಂಭದಿಂದ ಹಿಂದುಳಿದ ಪ್ರದೇಶ ಇನ್ನು ಹೆಚ್ಚು ಅಭಿವೃದ್ಧಿ ಆಗಲಿದೆ. ನಾನು ರೊಕ್ಕ ಕೊಟ್ಟು ಮಂತ್ರಿಯಾಗಿಲ್ಲ. 8 ಸಲ ಶಾಸಕನಾಗಿದ್ದೇನೆ. ಸಚಿವರಾಗಿ ಕೆಲಸ ಮಾಡಿದ್ದರಿಂದ ನನಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಹೇಳಿದರು.ಸಂಸದ ಡಾ| ಉಮೇಶ ಜಾಧವ್‌ ಮಾತನಾಡಿದರು.

ಶಾಸಕರಾದ ಡಾ|ಅವಿನಾಶ ಜಾಧವ್‌, ರಾಜಕುಮಾರ ಪಾಟೀಲ ತೇಲ್ಕೂರ, ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿದರು. ರಾಮನಗೌಡ ಪಾಟೀಲ ಯತ್ನಾಳ, ಜಗದೀಶ ಕ್ಷತ್ರಿ, ಹಾರಕೂಡ ಪೀಠಾಧಿಪತಿ ಡಾ| ಚೆನ್ನವೀರ ಶಿವಾಚಾರ್ಯರು, ಜಗದೇವಿ ಗಡಂತಿ, ಶಿವಶರಣಪ್ಪ ಜಾಪಟ್ಟಿ, ಬಸಯ್ಯ ಹಿರೇಮಠ, ಶಿವಾನಂದ, ಸಾಯಿಬಾಬಾ, ರಮೇಶ ಬೀರಾದಾರ, ಶೈಲಜಾ ಪಾಟೀಲ, ಸೋಮಶೇಖರ ಬಂಡಿ, ಗಣಪತಿ, ಜ್ಯೋತಿಬಾ ಸಿದ್ರಾಮಪ್ಪ ದಂಗಾಪೂರ, ಬಸವಣ್ಣಪ್ಪ ಕುಡಹಳ್ಳಿ ಇನ್ನಿತರಿದ್ದರರು. ಪ್ರಭುಗೌಡ ದೇಸಾಯಿ ಸ್ವಾಗತಿಸಿದರು. ಸಂಗನಬಸಪ್ಪ ಸಜ್ಜನ ವಂದಿಸಿದರು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.