ಪ್ಲಾಸ್ಟಿಕ್ ಬಳಕೆಯಿಂದ ಭವಿಷ್ಯದಲ್ಲಿ ಗಂಡಾಂತರ
Team Udayavani, Sep 21, 2022, 3:49 PM IST
ಶಹಾಬಾದ: ಪ್ಲಾಸ್ಟಿಕ್ ರಾಸಾಯನಿಕಗಳಿಂದ ಪರಿಸರಕ್ಕೆ ಆಗಬಹುದಾದ ದುಷ್ಟರಿಣಾಮಗಳ ಬಗ್ಗೆ ನಾವು ಮುನ್ನಚ್ಚರಿಕೆ ವಹಿಸದಿದ್ದಲ್ಲಿ ಭವಿಷ್ಯದಲ್ಲಿ ತೀವ್ರ ಗಂಡಾಂತರ ಎದುರಿಸಬೇಕಾಗುತ್ತದೆ ಎಂದು ನಗರಸಭೆ ಪೌರಾಯುಕ್ತ ಅಶೋಕ ಬಿಲಗುಂದಿ ಹೇಳಿದರು.
ನಗರಸಭೆಯಿಂದ ಪ್ಲಾಸ್ಟಿಕ್ನಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗಾಗಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಸಮಾಜದಲ್ಲಿ ನಮ್ಮ ಜೀವನ ಶೈಲಿ ಹಾಗೂ ಸಾರ್ವಜನಿಕ ವ್ಯವಸ್ಥೆಯಿಂದ ದಿನೇದಿನೇ ಪ್ಲಾಸ್ಟಿಕ್ ಬಳಕೆ ಹೆಚ್ಚಾಗುತ್ತಿರುವುದರಿಂದ ಪರಿಸರಕ್ಕೆ ತೊಂದರೆಯಾಗುತ್ತಿದೆ. ಪ್ಲಾಸ್ಟಿಕ್ ಸಕಲ ಜೀವಿಗಳಿಗೂ ವಿಷಕಾರಿಯಾಗಿದೆ. ನಿರ್ವಹಣೆ ತಿಳಿಯದ ಕೆಲವರು ಪ್ಲಾಸ್ಟಿಕ್ ಸುಡುವ ಮೂಲಕ ಪರಿಸರ ಕಲುಷಿತಗೊಳಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ನಗರಸಭೆ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ಸಾರ್ವಜನಿಕರು ಮತ್ತು ಅಂಗಡಿಕಾರರು ಪ್ಲಾಸ್ಟಿಕ್ ಬಳಕೆ ಮಾಡದೆ ಪೇಪರ್ ಚೀಲ ಮತ್ತು ಪ್ಲಾಸ್ಟಿಕ್ ರಹಿತ ಬ್ಯಾಗ್ ಬಳಕೆ ಮಾಡಬೇಕು. ಇಲ್ಲವಾದರೆ ಕಡ್ಡಾಯವಾಗಿ ದಂಡ ಹಾಕಲಾಗುವುದು ಎಂದು ತಿಳಿಸಿದರು.
ಆರೋಗ್ಯ ನಿರೀಕ್ಷಕ ಮೋಹಿದ್ದಿನ್ ಮಾತನಾಡಿ, ಪ್ಲಾಸ್ಟಿಕ್ ನಿಷೇಧ ಕಾಯ್ದೆ ಇದ್ದು, ಸಾರ್ವಜನಿಕರು ಮತ್ತು ಮಾರಾಟಗಾರರು ಸಹಕರಿಸಿದಲ್ಲಿ ನಗರಸಭೆಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದರು. ಅನಿಲಕುಮಾರ ಹೊನಗುಂಟಿ, ಹುಣೇಶ ದೊಡ್ಡಮನಿ ಹಾಗೂ ಪೌರಕಾರ್ಮಿಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು