ಗೈರಾಣಿ ಜಮೀನು ಪಾಲಿಕೆಗೆ ಹಸ್ತಾಂತರಿಸಿ
Team Udayavani, Jan 25, 2019, 6:40 AM IST
ಕಲಬುರಗಿ: ತಾಲೂಕಿನ ಕುಸನೂರ ಗ್ರಾಮದ ಹೊರವಲಯದ ಸರ್ಕಾರಿ ಗೈರಾಣಿ ಜಮೀನಿನಲ್ಲಿ ಪೌರಕಾರ್ಮಿಕರ ಗೃಹ ಭಾಗ್ಯ ಮತ್ತು ಆಶ್ರಯ ನಿವೇಶನ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಜನಜಾಗೃತಿ ಸಂಘರ್ಷ ಸಮಿತಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.
ಕಳೆದ ಒಂಭತ್ತು ವರ್ಷಗಳಿಂದ ಕಲಬುರಗಿ ದಕ್ಷಿಣ, ಉತ್ತರ ಮತ ಕ್ಷೇತ್ರ ಸೇರಿದಂತೆ ಜಿಲ್ಲಾದ್ಯಂತ ಆರ್ಥಿಕ ಕಡು ಬಡವರು, ನಿವೇಶನ ರಹಿತರು ಮತ್ತು ಬಾಡಿಗೆ ಮನೆಯಲ್ಲಿ ಜೀವನ ಸಾಗಿಸುತ್ತಿರುವರರನ್ನು ಗುರುತಿಸಿ 2,500 ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು. ಮನೆಗಳ ನಿರ್ಮಾಣಕ್ಕೆ ಕುಸನೂರ ಗ್ರಾಮದ ಸರ್ವೇ ನಂ.151ರ 95 ಎಕರೆ 36 ಗುಂಟೆ ಜಾಗ ಗುರುತಿಸಿಲಾಗಿದೆ. ಇದುವರೆಗೂ ಪಾಲಿಕೆಗೆ ಜಾಗವನ್ನು ಹಸ್ತಾಂತರಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಗುರುತಿಸಿದ ಜಾಗವನ್ನು ಪೌರ ಕಾರ್ಮಿಕರ ಗೃಹ ಭಾಗ್ಯ ಮತ್ತು ಆಶ್ರಯ ನಿವೇಶನ ಫಲಾನುಭವಿಗಳಿಗೆ ಹಂಚಿಕೆ ಮಡುವಂತೆ ಈ ಹಿಂದೆ ಪೌರಾಡಳಿತ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಈ ಹಿಂದೆಯೇ ಪಾಲಿಕೆಗೆ ಹಸ್ತಾಂತರಿಸಲು ಸೂಚಿಸಿದ್ದರು. ಆದರೂ, ಎರಡ್ಮೂರು ವರ್ಷಗಳಿಂದ ಈ ಕುರಿತು ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸುತ್ತಿದೆ. ಕೂಡಲೇ ಸಂಬಂಧಿಸಿದ ಜಾಗವನ್ನು ಪಾಲಿಕೆಗೆ ಹಸ್ತಾಂತರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಸಮಿತಿ ರಾಜ್ಯ ಸಂಚಾಲಕ ರುಕ್ಕಪ್ಪ ಟಿ.ಕಾಂಬಳೆ, ಕಾರ್ಯದರ್ಶಿ ಸಿದ್ಧಾರೂಢ ದುಮ್ಮನಸೂರ, ಜಿಲ್ಲಾಧ್ಯಕ್ಷ ಅಮೀರ ಸಾಬ್ ನದಾಫ, ಜೈರಾಜ ಕಿರಣಗೀಕರ, ವಿಜಯಕುಮಾರ ಸಾವಳಗಿ, ಧರ್ಮಣ್ಣ ಪೂಜಾರಿ, ಶಿವಾಜಿ ಪಟ್ಟಣ, ಮಹಾನಂದ ಕುಮಸಿ, ನೂರ ಅಹ್ಮದ ಹಾಗೂ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ