ಗಾಣಗಾಪುರ ದೇವರ ಹೆಸರಿನಲ್ಲಿ ವಂಚನೆ : ಐವರ ಅರ್ಚಕರ ವಿರುದ್ದ ಎಫ್ಐಆರ್
Team Udayavani, Jun 23, 2022, 10:06 PM IST
ಕಲಬುರಗಿ : ದಕ್ಷಿಣ ಭಾರತದ ಪ್ರಸಿದ್ದ ಯಾತ್ರಾಸ್ಥಳವಾಗಿರುವ ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ್ ಗಾಣಗಾಪುರ ದತ್ತಾತ್ರೇಯ ಹೆಸರಿನಲ್ಲಿ ನಕಲಿ ವೆಬ್ ಸೈಟ್ ತೆರೆದು ಕೋಟ್ಯಾಂತರ ರೂ ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.
ನಕಲಿ ವೆಬ್ ಸೈಟ್ ತೆರೆದು ನೂರಾರು ಕೋ.ರೂ ಭಕ್ತರಿಂದ ಲಪಟಾಯಿಸಿರುವ ಆರೋಪದ ಮೇರೆಗೆ ದತ್ತಾತ್ರೇಯ ದೇವಾಲಯದ ಐವರು ಅರ್ಚಕರ (ಪೂಜಾರಿ) ವಿರುದ್ಧ ದೇವಲ್ ಗಾಣಗಾಪುರ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ತಾಲೂಕಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ನಾಮದೇವ ಬಾಗಶೆಟ್ಟಿ ಗುರುವಾರ ಠಾಣೆಗೆ ತೆರಳಿ ದೂರು ಸಲ್ಲಿಸಿದ್ದಾರೆ. ವಂಚನೆ, ಸೈಬರ್ ಅಪರಾಧದಡಿ ಪ್ರಕರಣ ದಾಖಲಾಗಿದೆ.
ದೇವಲ್ ಗಾಣಗಾಪುರ ದತ್ತಾತ್ರೇಯ ದೇವಸ್ಥಾನ ಮುಜರಾಯಿ ಇಲಾಖೆಗೆ ಒಳಪಟ್ಟಿದ್ದು, ದೇವಸ್ಥಾನದ ಆದಾಯ ಸರ್ಕಾರ ಕ್ಕೆ ಸೇರಬೇಕು. ಆದರೆ ಅರ್ಚಕರು ನಕಲಿ ವೆಬ್ ಸೈಟ್ ತೆರೆದು ವಂಚಿಸಿದ್ದರ ಹಿನ್ನೆಲೆಯಲ್ಲಿ ಮೊಕದ್ದಮೆ ದಾಖಲಾಗಿದೆ.
ಇದನ್ನೂ ಓದಿ : ದೇವರ ತೀರ್ಥ ಸೇವಿಸುವ ವೇಳೆ ಲೋಹದ ಕೃಷ್ಣನನ್ನು ನುಂಗಿದ್ದ ವ್ಯಕ್ತಿ: ಯಶಸ್ವಿ ಶಸ್ತ್ರಚಿಕಿತ್ಸೆ
ಅರ್ಚಕರಾದ ವಲ್ಲಭ ತಂದೆ ದಿನಕರ ಭಟ್ ಪೂಜಾರಿ, ಅಂಕುರ ತಂದೆ ಆನಂದರಾವ ಪೂಜಾರಿ, ಪ್ರತೀಕ ತಂದೆ ತಂದೆ ಸದಾಶಿವ ಪೂಜಾರಿ, ಗಂಗಾಧರ ತಂದೆ ಶ್ರೀಕಾಂತ ಭಟ್ ಪೂಜಾರಿ ಹಾಗೂ ಪೂಜಾರಿ ಶರತ್ ಭಟ್ ತಂದೆ ನಂದುಭಟ್ಟ ಎನ್ನುವ ಅರ್ಚಕರ ವಿರುದ್ಧ ದೂರು ದಾಖಲಾಗಿದೆ.
ಕಳೆದ ಐದಾರು ವರ್ಷಗಳಿಂದ ಅರ್ಚಕರು ನಕಲಿ ವೆಬ್ ಸೈಟ್ ತೆರೆದು ನೂರಾರು ಕೋ.ರೂ ವಂಚಿಸಿದ್ದಾರೆ. ಈ ಕುರಿತು ಸೂಕ್ತ ತನಿಖೆ ನಡೆದಲ್ಲಿ ಮಾತ್ರ ನ್ಯಾಯ ದೊರಕಲು ಸಾಧ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಸುಳ್ಯ, ಕೊಡಗಿನ ಕೆಲವೆಡೆ ಭಾರಿ ಶಬ್ದದೊಂದಿಗೆ ಭೂಕಂಪನ, ಗೋಡೆ ಬಿರುಕು
ಸಕಲೇಶಪುರ : ರಸ್ತೆ ಅಪಘಾತಕ್ಕೆ ದೈಹಿಕ ಶಿಕ್ಷಕ ಸ್ಥಳದಲ್ಲೇ ಸಾವು: ವಿದ್ಯಾರ್ಥಿಗಳ ಕಣ್ಣೀರು…
ಹೊಸ ಸೇರ್ಪಡೆ
ಕಲರ್ಫುಲ್ ಇವೆಂಟ್ನಲ್ಲಿ ‘’ಬೈರಾಗಿ”: ಜುಲೈ 1 ರಿಲೀಸ್
ಶ್ರೀಗಂಧದಲ್ಲಿ ಡಾ. ಪುನೀತ್ ರಾಜ್ಕುಮಾರ್ ಪುತ್ಥಳಿ
ಅವರ ದೇಹ ಮಾತ್ರ ವಾಪಸ್ ಬರಲಿದೆ…: ಸೇನಾ ಬಂಡಾಯ ಶಾಸಕರಿಗೆ ಸಂಜಯ್ ರಾವತ್ ಎಚ್ಚರಿಕೆ
ಒಂದೇ ದಿನ 45% ಏರಿಕೆ ಕಂಡ ಕೋವಿಡ್ ಪ್ರಕರಣಗಳ ಸಂಖ್ಯೆ; 17,073 ಹೊಸ ಪ್ರಕರಣಗಳು
ದನ ಮೇಯಿಸುತ್ತಿದ್ದ ಯುವತಿಯನ್ನು ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ: ಆರೋಪಿ ಬಂಧನ