ಗಲ್ಲಿಗಲ್ಲಿಗಳಲ್ಲಿ ಗಜಮುಖನ ದರ್ಶನ


Team Udayavani, Sep 16, 2018, 11:21 AM IST

gul-1.jpg

ಕಲಬುರಗಿ: ಚೌತಿ ನಿಮಿತ್ತ ಗಜಮುಖ ಗಣಪ ಹತ್ತು-ಹಲವು ಅವತಾರಗಳೊಂದಿಗೆ ನಗರದ ಗಲ್ಲಿ-ಗಲ್ಲಿಗಳಲ್ಲಿ ವಿರಾಜಿಸಿದ್ದಾನೆ. ಗಣೇಶ ಮಂಡಳಿಗಳು, ಸಂಘ-ಸಂಸ್ಥೆಗಳು, ಸಮುದಾಯಗಳ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟ ಗಣಪತಿ ಮೂರ್ತಿಗಳು ಸಾರ್ವಜನಿಕರ ಕಣ್ಮನ ಸೆಳೆಯುತ್ತಿವೆ.

ನಗರದ ಹಲವು ಬಡಾವಣೆಗಳ ಪ್ರಮುಖ ರಸ್ತೆಗಳು, ದೇವಸ್ಥಾನ, ಭವನಗಳು ಸೇರಿದಂತೆ ಬೃಹತ್‌ ಪೆಂಡಾಲ್‌ಗ‌ಳನ್ನು ಹಾಕಿ ಬಗೆಬಗೆಯ ಆಕಾರದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಪುಟಾಣಿ ಗಲ್ಲಿ. ಮಿಲನ್‌ ಚೌಕ್‌, ಚಕ್ಕರ ಕಟ್ಟಾ, ನೆಹರು ಗಂಜ್‌, ಚಪ್ಪಲ ಬಜಾರ್‌ ಸೇರಿದಂತೆ ನಗರದೆಲ್ಲೆಡೆ ಪ್ರತಿ ವರ್ಷದಂತೆ ಗಣಪನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದ್ದು, ಒಂದಕ್ಕಿಂತ ಒಂದನ್ನು ಮೀರಿಸುವಂತಿವೆ.

ಪುಟಾಣಿ ಗಲ್ಲಿಯಲ್ಲಿ 18 ಅಡಿಯ ಎತ್ತರದ ಹನುಮನ ಅವತಾರದ ಗಣಪ, ನೆಹರು ಗಂಜ್‌ನಲ್ಲಿ ಲಿಂಗದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ, ಚಕ್ಕರ ಕಟ್ಟಾದ ಡೊಳ್ಳು ಬಾರಿಸುವ ಗಣಪತಿ ಮೂರ್ತಿಗಳು ಜನರನ್ನು ಆಕರ್ಷಿಸುತ್ತಿದೆ. ಆಯಾ ಬಡಾವಣೆ ಮಹಿಳೆಯರು, ಮಕ್ಕಳು ಬೆಳಗ್ಗೆ ಮತ್ತು ಸಂಜೆ ಪೂಜೆ ಸಲ್ಲಿಸುವ ಮೂಲಕ ವಿಘ್ನ ನಿವಾರಕನನ್ನು ಆರಾಧಿಸುತ್ತಿದ್ದಾರೆ. 

ಸಾಯಂಕಾಲ 6 ಗಂಟೆ ನಂತರ ಗಣೇಶ ಪೆಂಡಾಲ್‌ ಗಳ ಎದುರು ಹಮ್ಮಿಕೊಳ್ಳಲಾಗುತ್ತಿರುವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಸುತ್ತಮುತ್ತಲಿನ ಬಡಾವಣೆಗಳ ಜನರು ಜಮಾಯಿಸುತ್ತಿದ್ದಾರೆ.

21 ದಿನಗಳವರೆಗೂ ಪ್ರತಿಷ್ಠಾಪನೆ: ಪ್ರಸಕ್ತ ವರ್ಷ ಜಿಲ್ಲೆಯಾದ್ಯಂತ ಒಟ್ಟು 1,447 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಕಲಬುರಗಿ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ 655ಕ್ಕೂ ಹೆಚ್ಚು ಗಣಪನ ಮೂರ್ತಿಗಳನ್ನು
ಪ್ರತಿಷ್ಠಾಪಿಸಲಾಗಿದೆ. ಮೂರು ದಿನಗಳಿಂದ ಹಿಡಿದು 21 ದಿನಗಳವರೆಗೂ ಗಣೇಶನನ್ನು ಪ್ರತಿಷ್ಠಾಪಿಸಿ ವಿಸರ್ಜನೆ ಮಾಡಲಾಗುತ್ತಿದೆ. ಅತಿ ಹೆಚ್ಚು ಗಣೇಶ ವಿಸರ್ಜನೆಗಳು 5, 7, 9 ಹಾಗೂ 11ನೇ ದಿನ ನಡೆಯುತ್ತವೆ.
 
ಮನೆಗಳಲ್ಲಿ ಪರಿಸರ ಸ್ನೇಹಿ ಗಣಪ: ಬಣ್ಣ-ಬಣ್ಣದ ರಾಸಾಯನಿಕಯುಕ್ತ ಪಿಒಪಿ ಮೂರ್ತಿಗಳ ಭರಾಟೆ ನಡುವೆಯೂ ನಗರದ ಜನತೆ ಪರಿಸರ ಸ್ನೇಹಿ ಜೇಡಿ ಮಣ್ಣಿನ ಗಣಪ ಮೂರ್ತಿಗಳನ್ನು ಪ್ರತಿಷ್ಠಾಪಿಸುವ ಮೂಲಕ ಸಾಮಾಜಿಕ ಕಳಕಳಿಗೆ ಸ್ಪಂದಿಸಿದ್ದಾರೆ. ಮನೆಗಳಲ್ಲಿ ಮಣ್ಣಿನ ಗಣೇಶ ವಿಗ್ರಹ ಪ್ರತಿಷ್ಠಾಪಿಸಿ ವಿಘ್ನ ನಿವಾರಕನ ಕೃಪೆಗೆ ಪಾತ್ರರಾಗಿದ್ದಾರೆ.

ನೂತನ ಮಹಾವಿದ್ಯಾಲಯದ ಕಲಾ ವಿಭಾಗದ ವಿದ್ಯಾರ್ಥಿಗಳು ಹಾಗೂ ಕೆ-ಲ್ಯಾಪ್‌ ಮತ್ತಿತರ ಸಂಸ್ಥೆಗಳು ಪರಿಸರ ಸ್ನೇಹಿ ಗಣಪಗಳ ತಯಾರಿಕೆ ಮಾಡಿದ್ದು, 500ಕ್ಕೂ ಹೆಚ್ಚು ಪರಿಸರ ಸ್ನೇಹಿ ಗಣೇಶ ಮೂರ್ತಿಗಳು ಮಾರಾಟವಾಗಿದ್ದು ವಿಶೇಷವಾಗಿದೆ.

ಕಲಬುರಗಿ ಗಣೇಶ ಮಹಾ ಮಂಡಳ 65 ವರ್ಷಗಳಿಂದ ಇದ್ದು, ಈ ವರ್ಷ ಮಂಡಳದ ಆಶ್ರಯದಲ್ಲಿ ನಗರದಾದ್ಯಂತ ಸುಮಾರು 190 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ. ಸೆ.17ರಂದು ಹೈದ್ರಾಬಾದ ಕರ್ನಾಟಕ ವಿಮೋಚನೆ ದಿನಾಚರಣೆ ನಿಮಿತ್ತ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನಗರಕ್ಕೆ ಬರುತ್ತಿದ್ದು, ಅಂದು ಪುಟಾಣಿ ಗಲ್ಲಿಯ 18 ಅಡಿ ಎತ್ತರದ ಹನುಮನ ಗಣಪತಿಯನ್ನು ವೀಕ್ಷಿಸುವಂತೆ ಅವರಲ್ಲಿ ಮನವಿ ಮಾಡಲಾಗುತ್ತಿದೆ. 
 ಬಾಬುರಾವ್‌ ಜಹಾಗೀರದಾರ, ಅಧ್ಯಕ್ಷ, ಗಣೇಶ ಮಹಾ ಮಂಡಳಿ

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.