ಆಮ್ ಆದ್ಮಿಯಿಂದ ಜನಸ್ಪಂದನ
Team Udayavani, May 14, 2022, 2:57 PM IST
ಆಳಂದ: ಆಮ್ ಆದ್ಮಿ ಪಕ್ಷದಿಂದ ಪಟ್ಟಣದ ಶ್ರೀರಾಮ ಮಾರುಕಟ್ಟೆಯಲ್ಲಿ ಮೇ 17ರಂದು ಸಂಜೆ 5ಗಂಟೆಗೆ ಜನಸ್ಪಂದನ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ಜಿಲ್ಲಾ ಮುಖಂಡರು, ಶ್ರಮಜೀವಿಗಳ ವೇದಿಕೆ ರಾಜ್ಯಾಧ್ಯಕ್ಷ ಚಂದ್ರಶೇಖರ ಹಿರೇಮಠ ಧುತ್ತರಗಾಂವ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಮೇಲೆ ಪ್ರಥಮ ಬಾರಿಗೆ ಆಗಮಿಸಿ ಅವರು ಈ ವಿಷಯ ಪ್ರಕಟಿಸಿದರು. ಅಂದು ಬೆಳಗ್ಗೆ 11ಗಂಟೆಗೆ ಉಮರ್ಗಾ ರಸ್ತೆಯಲ್ಲಿ ಪಕ್ಷದ ನೂತನ ಕಚೇರಿ ಉದ್ಘಾಟಿಸಲಾಗುವುದು. ಅಲ್ಲದೇ ಪಟ್ಟಣದ ಮಟಕಿ ರಸ್ತೆಯ ಟಿಪ್ಪುಸುಲ್ತಾನ ಸರ್ಕಾರದಲ್ಲಿ ಆಮ್ ಆದ್ಮಿ ಪಕ್ಷದ ಜನಸಂಪರ್ಕ ಕಚೇರಿ ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.
ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ರಹಿತ ಮತ್ತು ಅಭಿವೃದ್ಧಿಗೆ ಒತ್ತು ನೀಡುವ ಏಕೈಕ ಪಕ್ಷವಾಗಿದ್ದರಿಂದ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಂಪರ್ಕಕ್ಕೆ ಬಂದಮೇಲೆ ನನ್ನ ತವರು ಕ್ಷೇತ್ರ ಆಳಂದ ವಿಧಾನಸಭೆ ಕ್ಷೇತ್ರದಿಂದಲೇ ಪಕ್ಷದ ಕಾರ್ಯ ಚಟುವಟಿಕೆ ಆರಂಭಿಸುತ್ತಿದ್ದೇನೆ ಎಂದರು.
ಜನಸ್ಪಂದನ ಸಭೆಯಲ್ಲಿ ತಾಲೂಕಿನ ಸಾರ್ವಜನಿಕ ಬೇಡಿಕೆಗಳು, ಅಭಿವೃದ್ಧಿ, ಆಳಂದ ಯುವಕರಿಗೆ ಉದ್ಯೋಗ ಸೃಷ್ಟಿ, ರೈತರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ಕೃಷಿ ಕೂಲಿಕಾರರು ಗುಳೆ ಹೋಗುವುದನ್ನು ತಪ್ಪಿಸುವುದು ಹಾಗೂ ಇನ್ನಿತರ ಜ್ವಲಂತ ಸಮಸ್ಯೆಗಳ ಕುರಿತು ಸಾರ್ವಜನಿಕರೊಂದಿಗೆ ಚರ್ಚಿಸಿ ಸಲಹೆ ಪಡೆಯಲಾಗುವುದು ಎಂದು ತಿಳಿಸಿದರು.
ಬರುವ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸದೃಢಪಡಿಸಲು ಪ್ರಾಮಾಣಿಕ ಯುವಕರ ತಂಡವನ್ನು ರಚಿಸಿ ಈ ವಾರದಿಂದಲೇ 2023ರ ವಿಧಾನಸಭೆ ಚುನಾವಣೆ ಒಳಗೆ ಆಳಂದ ವಿಧಾನಸಭಾ ಕ್ಷೇತ್ರದ ಪ್ರತಿ ಮನೆಗೆ ಕನಿಷ್ಟ ಮೂರು ಬಾರಿ ಭೇಟಿ ನೀಡಲಾಗುವುದು ಎಂದು ಹೇಳಿದರು.
ನಿವೃತ್ತ ಜಂಟಿ ಆಯುಕ್ತ, ಪಕ್ಷದ ಮುಖಂಡ ಎಲ್.ಎಸ್. ರಾಠೊಡ, ಐಟಿ ಉದ್ಯಮಿ ಶರಣ ಪಾಟೀಲ, ಮುಖಂಡ ಕಾಂಬಳೆ ಇತರರು ಮಾತನಾಡಿದರು. ಪಕ್ಷದ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…