ಬಳೆ ಮಾರಿ ಬೈಲಾಟ ಬದುಕಿಸಿದ ಮೇಸ್ಟ್ರೆ


Team Udayavani, Oct 18, 2018, 11:31 AM IST

gul-3.jpg

ವಾಡಿ: ಕಲೆ ಕಲೆಗಾಗಿ ಅಲ್ಲ.. ಕಲೆ ಸಮಾಜಕ್ಕಾಗಿ ಎಂದು ಪ್ರತಿಪಾದಿಸುತ್ತ ಬದುಕುವ ಕಲಾವಿದರು ಇಂದಿನ ವ್ಯಾವಹಾರಿಕ ಜಗತ್ತಿನಲ್ಲಿ ಬಲು ವಿರಳ. ಆದರೆ ಇಲ್ಲೊಬ್ಬ ಮೇಸ್ಟ್ರೆ ಬಳೆಗಳನ್ನು ಮಾರಿ ಬದುಕು ಕಟ್ಟುವ ಮೂಲಕ ಜನಮಾನಸದಿಂದ ಕಣ್ಮರೆಯಾಗುತ್ತಿದ್ದ ಜಾನಪದ ಕಲೆಯ ಭಾಗವಾದ ಬೈಲಾಟವನ್ನು ಬದುಕಿಸಿ ಸ್ವತಃ ಎಲೆಮರೆ ಕಾಯಿಯಂತೆ ಬದುಕುತ್ತಿದ್ದಾರೆ.

ಅ.20 ರಂದು ಅಳ್ಳೊಳ್ಳಿ ಗ್ರಾಮದಲ್ಲಿ ವಿಶ್ವಜನ ಸೇವಾ ಸಂಸ್ಥೆ ಹಾಗೂ ನಾಗಾವಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನಡೆಯುತ್ತಿರುವ ಚಿತ್ತಾಪುರ ತಾಲೂಕು ಮಟ್ಟದ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿರುವ ಲಾಡ್ಲಾಪುರ ಗ್ರಾಮದ ಬೈಲಾಟ ಮೇಸ್ಟ್ರೆ ನಿರಂಜನಪ್ಪ
ಮಲಕಂಡಿ ಅವರು ಬಡತನದ ಬದುಕು ಬೆನ್ನಿಗೆ ಕಟ್ಟಿಕೊಂಡು ಹತ್ತನೇ ತರಗತಿ ವರೆಗೆ ಅಕ್ಷರ ಕಲಿತದ್ದಾರೆ. ಅಲ್ಲದೇ ಒಟ್ಟು 75 ದೊಡ್ಡಾಟದ ಕಥೆಗಳನ್ನು ರಂಗದ ಮೇಲೆ ತಂದು ನೂರಾರು ಜನ ರೈತರನ್ನು ಬೈಲಾಟದ ಕಲಾವಿದರನ್ನಾಗಿ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

12 ವರ್ಷದ ಬಾಲಕನಿದ್ದಾಗ ಅಂದರೆ, 42 ವರ್ಷಗಳ ಹಿಂದೆ ಲಾಡ್ಲಾಪುರದಲ್ಲಿ ಏರ್ಪಡಿಸಲಾಗಿದ್ದ ವೀರ ಅಭಿಮನ್ಯು ಎನ್ನುವ ಬೈಲಾಟದಲ್ಲಿ ತಂದೆ ಶರಣಪ್ಪ ಮಲಕಂಡಿ ಅವರ ಅನುಮತಿ ಮೇರೆಗೆ ಗಣಪತಿ ಪಾತ್ರಕ್ಕೆ ಬಣ್ಣ ಹಚ್ಚಿದ ಮೇಸ್ಟ್ರೆ ಮಲಕಂಡಿ ಜನಮೆಚ್ಚುವಂತಹ ಅಭಿನಯ ನೀಡಿ ಗಮನ ಸೆಳೆದಿದ್ದರು. ಅಂದಿನಿಂದ ಬೈಲಾಟದ ಹುಚ್ಚು ಬೆಳೆಸಿಕೊಂಡ ನಿರಂಜನಪ್ಪ, ನಾಟಕಗಳಲ್ಲಿ ಪಾತ್ರಗಳನ್ನು ಬಯಸದೆ ಸ್ವತಃ ನಿರ್ದೇಶನಕ್ಕೆ ಮುಂದಾದರು. ನಾಲವಾರ ವಲಯ ಸೇರಿದಂತೆ ತಾಲೂಕಿನ ಹಲವು ಗ್ರಾಮಗಳಲ್ಲಿ ಬೈಲಾಟಗಳ ಬೈಠಕ್‌ ನಡೆಸಿ ಯಶಸ್ವಿ ಪ್ರದರ್ಶನಗಳನ್ನು ನೀಡಿದ್ದಾರೆ. ಕುರುಕ್ಷೇತ್ರ ಕಾಳಗ ಅರ್ಥಾತ್‌ ಶ್ರೀಕೃಷ್ಣ ಸಂಧಾನ, ರತಿ ಕಲ್ಯಾಣ, ಶ್ರೀದೇವಿ ಮಹಾತ್ಮೆ, ಮಹಿಷಾಸುರ ಮರ್ಧನಿ, ಸೇತುರಾಜ, ಬಬ್ರುವಾಹನ, ಯುದ್ಧ ವನಕಾಂಡ, ವೀರ ಅಭಿಮನ್ಯು, ಕರ್ಣ ಅರ್ಜುನ ಕಾಳಗ, ಇಂದ್ರಜೀತ ಕಾಳಗ ಹಾಗೂ ದುಶ್ಯಾಸನ ಅರ್ಥಾತ್‌ ಕೀಚಕನ ವಧೆ ಹೀಗೆ ಒಟ್ಟು 75 ಬೈಲಾಟಗಳನ್ನು ಕಲಿಸುವ ಮೂಲಕ ಪ್ರತಿಫಲಾಪೇಕ್ಷೆಯಿಲ್ಲದೆ ನಿಸ್ವಾರ್ಥದಿಂದ ಕಲಾ ಸೇವೆ ಮಾಡಿರುವುದು ಸಾಮಾನ್ಯ ಸಾಧನೆಯಲ್ಲ.

ಗ್ರಾಮದ ಧರ್ಮ ಶಾಲೆಗಳಲ್ಲಿ ನಡೆಯುತ್ತಿದ್ದ ಬೈಲಾಟದ ಬೈಠಕ್‌ಗಳನ್ನು ನೋಡಲು ಹೋಗುತ್ತಿದ್ದ ಬಾಲಕ ನಿರಂಜನಪ್ಪ, ದೊಡ್ಡಾಟದ ಹಲವು ಕಥೆಗಳನ್ನು ಹಳ್ಳಿಗಾಡಿನ ಅನಕ್ಷರಸ್ಥ ರೈತರಿಗೆ ಕಳೆದ 35 ವರ್ಷಗಳಿಂದ ಅಭಿನಯ ಹೇಳಿಕೊಡುವ ಜತೆಗೆ ಕಥಾ ಸಾರಾಂಶವನ್ನು ಹೇಳಿಕೊಟ್ಟು ಬೈಲಾಟದ ಮೇಸ್ಟ್ರು ಆಗಿ ಬೆಳೆದಿದ್ದಾರೆ.

ನಾಟಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಅಧಿ ಕಾರಿಗಳ ಕಣ್ಣಿಗೆ ಬೀಳದ ನಿರಂಜನಪ್ಪ ಮಲಕಂಡಿ ಅವರ ಕಲಾ ಸೇವೆಯು ನಾಗಾವಿ ಸಾಂಸ್ಕೃತಿಕ ಪ್ರತಿಷ್ಠಾನದ ಪದಾಧಿಕಾರಿಗಳ ಕಣ್ಣಿಗೆ ಬಿದ್ದು, ತಾಲೂಕು ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ಪಟ್ಟ ದಕ್ಕಿಸಿಕೊಂಡಿರುವುದು ಗುಡ್ಡದ ಊರು ಲಾಡ್ಲಾಪುರದ ಜನರಲ್ಲಿ ಹರ್ಷ ಮೂಡಿಸಿದೆ.

„ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.