ತೊಗರಿಗೆ ಸೂಕ್ತ ಬೆಂಬಲ ಬೆಲೆ ನೀಡಿ


Team Udayavani, Jan 1, 2018, 11:57 AM IST

gul-6.jpg

ಚಿಂಚೋಳಿ: ತಾಲೂಕಿನ ಕೋಡ್ಲಿ ಗ್ರಾಮದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡರು ತೊಗರಿಗೆ
ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ತಹಶೀಲ್ದಾರ್‌ ಮುಖಾಂತರ ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಜಿಲ್ಲಾ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ವಿದೇಶಿ ರಾಷ್ಟ್ರಗಳಿಂದ ಬೇಳೆ ಕಾಳು ಆಮದಿನಿಂದಾಗಿ 2015-16ರಲ್ಲಿ 67ಲಕ್ಷ ಟನ್‌ ಮತ್ತು 2016-17ನೇ ಸಾಲಿನಲ್ಲಿ 57ಲಕ್ಷ ಟನ್‌, 2017-18ನೇ ಸಾಲಿನಲ್ಲಿ 18 ಲಕ್ಷ ಟನ್‌ ಬೇಳೆ ಕಾಳು ಆಮದು ಮಾಡಿಕೊಂಡಿರುವುದರಿಂದ ತೊಗರಿ ಬೆಲೆ ಕುಸಿತಕ್ಕೆ ಕಾರಣವಾಗಿದೆ. ದೇಶದಲ್ಲಿ ಇರುವ ಬಲಿಷ್ಠ ಕಂಪನಿಗಳ ಒತ್ತಡಕ್ಕೆ ಮಣಿದು ಕೇಂದ್ರ ಸರಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಳೆದ ವರ್ಷ ರಾಜ್ಯದಲ್ಲಿ 12ಲಕ್ಷ ಟನ್‌ ತೊಗರಿ ಬೆಳೆಯಲಾಗಿತ್ತು. ಈ ವರ್ಷ 7ಲಕ್ಷ ಟನ್‌ ತೊಗರಿ ಬೆಳೆಯುವ ನಿರೀಕ್ಷೆ ಇದೆ. ಬೆಲೆ ಕುಸಿತದಿಂದ ತೊಗರಿಯನ್ನು ರೈತರು ಕಡಿಮೆ ಬೆಲೆಯಲ್ಲಿ ಮಾರಾಟ ಮಾಡಿಕೊಳ್ಳುತ್ತಿದ್ದಾರೆ.
ಸ್ವಾಮಿನಾಥನ್‌ ವರದಿಯಂತೆ ಸರಕಾರ ರೈತರ ತೊಗರಿ ಬೆಂಬಲ ಬೆಲೆ 7500ರೂ. ನಿಗದಿಪಡಿಸಬೇಕು ಕೃಷಿ ಸಚಿವರನ್ನು ಒತ್ತಾಯಿಸಿದರು.

ರೈತ ಮುಖಂಡ ಮಾರುತಿ ಗಂಜಿಗಿರಿ ಮಾತನಾಡಿ, ಕೇಂದ್ರ ಸರಕಾರ 6800ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಇದಕ್ಕೆ ರಾಜ್ಯ ಸರಕಾರ 450 ರೂ.ಸಹಾಯ ಧನ ನೀಡಬೇಕು .ಪ್ರತಿಯೊಂದು ಗ್ರಾಪಂ ಕೇಂದ್ರಗಳಲ್ಲಿ ತೊಗರಿ ಮಾರಾಟ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ಕ್ವಿಂಟಲ್‌ಗೆ 7500ರೂ. ನಿಗದಿಪಡಿಸಬೇಕು. ಕಬ್ಬಿಗೆ 3600ರೂ. ಬೆಲೆ ನಿಗದಿಪಡಿಸಬೇಕು ಮತ್ತು ಪ್ರತಿ ಟನ್‌ಗೆ 2500ರೂ.ನೀಡಬೇಕೆಂದು ಅಗ್ರಹಿಸಿದರು.

ಪರಮೇಶ್ವರ ಕಾಂತಾ ಮಾತನಾಡಿ, ಅರಣ್ಯ ಭೂಮಿ ಮಂಜೂರಾತಿಗೆ ಅರಣ್ಯ ಹಕ್ಕಿನ 2006ರ ಅಡಿಯಲ್ಲಿ ಸಾಗುವಳಿದಾರರಿಂದ ಅರ್ಜಿ ಕರೆಯಬೇಕು. ಗೈರಾಣಿ ಜಮೀನು ಹಕ್ಕು ಪತ್ರ ಕೊಡಬೇಕೆಂದು ಸರಕಾರಕ್ಕೆ
ಒತ್ತಾಯಿಸಿದರು. 

ಚಿಂತಕುಂಟಿ ರೈತ ಮುಖಂಡ ಭರತ ಬುಳ್ಳ, ದೇವೇಂದ್ರಪ್ಪ ಪಾಟೀಲ ಕೊರವಿ, ಪ್ರದೀಪ ತಿರಲಾಪುರ, ಸಿದ್ದಲಿಂಗಯ್ಯ
ಸ್ವಾಮಿ ಎಂಪಳ್ಳಿ, ಗೌರಿಶಂಕರ ಕಿಣ್ಣಿ, ತಾರಾಚಂದ, ಸಂತೋಷ ರಾಠೊಡ್‌, ಗೌರಿಶಂಕರ ರಟಕಲ್‌, ರಾಘವೇಂದ್ರ
ಜಿಳ್ಳೆ, ಅನೀಲಕುಮಾರ ಕುಳಗೇರಿ, ಚಂದ್ರಶೇಖರ ಚೌಕಾ, ನಾಗಣ್ಣ ರಾಮಾ, ಕಾಶಿನಾಥ ಚೌಕಾ, ಪರಮೇಶ್ವರ ಕಾಂತಾ ವಿವಿಧ ಬೇಡಿಕೆಗಳ ಮನವಿ ಪತ್ರವನ್ನು ಎಪಿಎಂಸಿ ಕಾರ್ಯದರ್ಶಿ ಮಹಾದೇವಿ ಪಾಟೀಲರಿಗೆ ಸಲ್ಲಿಸಿದರು.

ಟಾಪ್ ನ್ಯೂಸ್

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.