ಕೋವಿಡ್ ವರದಿ ಒಂದೇ ದಿನದಲ್ಲಿ ಕೊಡಿ


Team Udayavani, Aug 5, 2020, 2:45 PM IST

ಕೋವಿಡ್ ವರದಿ ಒಂದೇ ದಿನದಲ್ಲಿ ಕೊಡಿ

ಕಲಬುರಗಿ: ಕೋವಿಡ್‌ 19 ಸೋಂಕು ಪತ್ತೆಗಾಗಿ ತಪಾಸಣೆಯ ವೈದ್ಯಕೀಯ ಮಾದರಿ ವರದಿಯನ್ನು 24 ಗಂಟೆಯಲ್ಲಿ ಸಾರ್ವಜನಿಕರಿಗೆ ದೊರಕುವಂತಾಗಬೇಕೆಂದು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್‌ ರೇವೂರ್‌ ಹೇಳಿದರು.

ನಗರದ ಕೆಕೆಆರ್‌ಡಿಬಿ ಕಚೇರಿಯಲ್ಲಿ ಕೋವಿಡ್‌ 19 ನಿಯಂತ್ರಣ ಮತ್ತು ಜಿಮ್ಸ್‌ ಆಸ್ಪತ್ರೆಗೆ ಮಂಡಳಿಯ ಅನುದಾನದಲ್ಲಿ ಕೈಗೊಂಡ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್‌ ನಿಯಂತ್ರಿಸಲು ಸ್ಯಾಂಪಲ್‌ ನೀಡಿದ ವ್ಯಕ್ತಿಗೆ ತ್ವರಿತಗತಿಯಲ್ಲಿ ವೈದ್ಯಕೀಯ ವರದಿ ನೀಡುವತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ. ಸ್ಯಾಂಪಲ್‌ ಪಡೆದು ವಾರಗಟ್ಟಲೆಯಾದರೂ ವರದಿ ಬಾರದಿದ್ದಲ್ಲಿ ಜನರು ಅನಗತ್ಯ ಗೊಂದಲಕ್ಕೆ ಈಡಾಗುತ್ತಾರೆ. ಇದಕ್ಕೆ ಅವಕಾಶ ನೀಡಬಾರದು. ಸ್ಯಾಂಪಲ್ಸ್‌ ಹೆಚ್ಚು ಸಂಗ್ರಹಗೊಂಡಲ್ಲಿ ಬೆಂಗಳೂರು ಅಥವಾ ಪುಣೆಗೆ ಕಳುಹಿಸಿ 24 ಗಂಟೆಯಲ್ಲಿ ವೈದ್ಯಕೀಯ ವರದಿಯನ್ನು ಸಂಬಂ ಧಿಸಿದ ವ್ಯಕ್ತಿಗಳಿಗೆ ತಿಳಿಸುವ ಕೆಲಸವಾಗಬೇಕು ಎಂದು ಸೂಚಿಸಿದರು.

ಕೋವಿಡ್‌ ಆಸ್ಪತ್ರೆ ಮತ್ತು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ರೋಗಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ, ಅಂಬ್ಯುಲೆನ್ಸ್‌ ಸೇವೆ, ಹಾಸಿಗೆ ಲಭ್ಯತೆ, ಊಟೋಪಚಾರ ಸರಿಯಾಗಿ ತಲುಪುತ್ತಿಲ್ಲ ಎಂಬ ಆರೋಪ ಬರುತ್ತಿದ್ದು, ತಕ್ಷಣವೇ ವೈದ್ಯೋಪಚಾರ ಗುಣಮಟ್ಟವನ್ನು ಹೆಚ್ಚಿಸಬೇಕು. ಜನರಲ್ಲಿ ಕೊರೊನಾ ರೋಗಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದೆ ಎಂಬುದರ ಬಗ್ಗೆ ವಿಶ್ವಾಸ ಬರಲು ವಿನೂತನ ಪ್ರಯತ್ನಗಳು ಆಗಬೇಕಿದೆ ಎಂದರು.

ಮುಂದಿನ ದಿನದಲ್ಲಿ ಕನಿಷ್ಠ ಅರ್ಧ ಗಂಟೆಗೊಮ್ಮೆ ವೈದ್ಯ ಅಥವಾ ನರ್ಸ್‌ಗಳು ರೋಗಿಯನ್ನು ವೈಯಕ್ತಿಕವಾಗಿ ವಿಚಾರಿಸಿದಲ್ಲಿ ರೋಗಿಯಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಬೇಗ ಗುಣಮುಖನಾಗಲು ಸಾಧ್ಯ. ಜಿಮ್ಸ್‌ಗೆ ಬರುವ ಯಾವುದೇ ರೋಗಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯವಿಲ್ಲದಿದ್ದಲ್ಲಿ ಬೇರೆ ಆಸ್ಪತ್ರೆಯಲ್ಲಿ ರೋಗಿ ಪ್ರವೇಶ ಪಡೆಯಲು ಅಗತ್ಯ ಕ್ರಮ ವಹಿಸಬೇಕು. ಕೋವಿಡ್‌ 19 ನಿಯಂತ್ರಣಕ್ಕೆ ಮಂಡಳಿಯಿಂದ ನೀಡಬೇಕಾದ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ಅನುದಾನ ಬಳಕೆ ಮಾಡಿಕೊಳ್ಳಿ: ಜಿಮ್ಸ್‌ ಆಸ್ಪತ್ರೆ ಆವರಣದಲ್ಲಿ ರೋಗಿಗಳಿಗೆ ನೀರು ಪೂರೈಸಲೆಂದೇ 2.77 ಕೋಟಿ ರೂ. ಮೊತ್ತಕ್ಕೆ ಮಾ.2ರಂದೇ ಅನುಮೋದನೆ ಸಿಕ್ಕಿದೆ. ಇದೂವರೆಗೆ ಕಾಮಗಾರಿ ಆರಂಭಿಸದಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಧ್ಯಕ್ಷರು, ಕೂಡಲೇ ಕಾಮಗಾರಿ ಕೈಗೆತ್ತಿಕೊಲುÛವಂತೆ ಮತ್ತು ಮಂಡಳಿ ಅನುದಾನ ಸದುಪಯೋಗ ಮಾಡಿಕೊಳ್ಳುವಂತೆ ಜಿಮ್ಸ್‌ ನಿರ್ದೇಶಕರಿಗೆ ಸೂಚಿಸಿದರು.

ಜಿಮ್ಸ್‌ ನಿರ್ದೇಶಕಿ ಡಾಣ ಕವಿತಾ ಪಾಟೀಲ ಮಾತನಾಡಿ, ಜಿಮ್ಸ್‌ ಆಸ್ಪತ್ರೆ ಮತ್ತು ಐಸೋಲೇಷನ್‌ ವಾರ್ಡ್‌ನಲ್ಲಿ ರೋಗಿಗಳಿಗೆಸರಿಯಾದ ಸಮಯಕ್ಕೆ ಊಟ ಮತ್ತು ಚಿಕಿತ್ಸೆ ನೀಡಲಾಗುತ್ತಿದೆ. ನೆಲ ಮಹಡಿಯಲ್ಲಿ ಸ್ಕ್ರೀನಿಂಗ್‌ ಮಾಡಲಾಗುತ್ತಿದ್ದು, ಇದಕ್ಕಾಗಿ ಎರಡು ಹಾಸಿಗೆಗಳನ್ನು ವೆಂಟಿಲೇಟರ್‌ ಸಮೇತ ಇಡಲಾಗಿದೆ ಎಂದರು.

ಡಿಎಚ್‌ಒ ಡಾಣ ರಾಜಶೇಖರ್‌ ಮಾಲಿ ಮಾತನಾಡಿದರು. ಸಭೆಯಲ್ಲಿ ಕೆಕೆಆರ್‌ ಡಿಬಿ ಕಾರ್ಯದರ್ಶಿ, ಪ್ರಾದೇಶಿಕ ಆಯುಕ್ತ ಡಾಣ ಎನ್‌.ವಿ.ಪ್ರಸಾದ, ಜಿಪಂ ಸಿಇಒ ಡಾಣ ಪಿ.ರಾಜಾ, ಡಿಸಿಪಿ ಕಿಶೋರ ಬಾಬು, ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಜಿಮ್ಸ್‌ ಆಡಳಿತ ಮಂಡಳಿ ಸದಸ್ಯರಾದ ಧನಂಜಯ ಕುರಿ, ಪ್ರಹ್ಲಾದ ಪೂಜಾರಿ, ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಡಾಣ ಶಿವಾನಂದ ಸುರಗಾಳಿ, ಜಿಲ್ಲಾಸ್ಪತ್ರೆಯ ಸರ್ಜನ್‌ ಡಾಣ ಅಂಬಾರಾಯ ರುದ್ರವಾಡಿ, ಜಿಮ್ಸ್‌ ವೈದ್ಯಕೀಯ ಅಧಿಧೀಕ್ಷಕ ಡಾಣ ಶಫಿಯುದ್ದಿನ್‌, ಡಾಣ ಸಂದೀಪ್‌, ಸಹಾಯಕ ಆಡಳಿತಾಧಿಕಾರಿ ಪಾರ್ವತಿ ಸೇರಿದಂತೆ ಇಎಸ್‌ಐಸಿ ಮತ್ತು ಜಿಮ್ಸ್‌ ಆಸ್ಪತ್ರೆಯ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.