41,364 ಮಕ್ಕಳಿಗೆ ಬಿಸಿಯೂಟ ಆಹಾರ ಧ್ಯಾನ ವಿತರಿಸುವ ಗುರಿ
Team Udayavani, Aug 1, 2020, 3:02 PM IST
ಸಾಂದರ್ಭಿಕ ಚಿತ್ರ
ಆಳಂದ: ದೇಶದಲ್ಲಿ ಕೋವಿಡ್ ಹೆಚ್ಚುತ್ತಿರುವುದರಿಂದ ಮೇಲಿಂದ ಮೇಲೆ ಲಾಕ್ಡೌನ್ ಜಾರಿ ಆಗುತ್ತಿದೆ. ಈ ವೇಳೆ ಮಕ್ಕಳಿಗೆ ಪಠ್ಯ, ಪುಸ್ತಕ, ಸಮವಸ್ತ್ರದೊಂದಿಗೆ ಅಕ್ಕಿ, ಬೆಳೆ, ಎಣ್ಣೆ ನೀಡುತ್ತಿರುವುದರಿಂದ ಬಡ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ತಾಲೂಕು ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಡಾ| ರಾಜಕುಮಾರ ಪಾಟೀಲ್ ಹೇಳಿದರು.
ತಾಲೂಕಿನ ಧಂಗಾಪುರ ಪ್ರತಿಬಿಂಬ ಸೇವಾ ಸಂಸ್ಥೆ ಕಾರ್ಯಾಯದಲ್ಲಿ ಏರ್ಪಡಿಸಿದ್ದ ಸರ್ಕಾರಿ ಪ್ರೌಢಶಾಲಾ ಮಕ್ಕಳಿಗೆ ಆಹಾರ ಧ್ಯಾನ ವಿತರಿಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಒಟ್ಟು 279 ಶಾಲೆಗಳು ಅನುದಾನಿತ ಮತ್ತು ಸರಕಾರಿ ಪ್ರೌಢಶಾಲೆ 59 ಇದ್ದು, ಒಟ್ಟು 41,364 ಮಕ್ಕಳು ಇದ್ದಾರೆ. 3 ಎನ್ಜಿಒ ಮುಖಾಂತರ 1,575 ಮಕ್ಕಳು ಒಳಪಡುತ್ತವೆ. ಒಟ್ಟು 19 ಸಾವಿರ ಕ್ವಿಂಟಲ್ ಅಕ್ಕಿ ಗುರಿ ಇದ್ದು, ಅದರಲ್ಲಿ 18 ಸಾವಿರ ಕ್ವಿಂಟಲ್ ಲಭ್ಯವಿದೆ. 1090 ಕ್ವಿಂಟಲ್ ಬೆಳೆ ಬೇಕಾಗಿದ್ದು, ಅದರಲ್ಲಿ 380 ಕ್ವಿಂಟಲ್ ಬೆಳೆ ಇದೆ. ಈಗಾಗಲೇ 3,032 ಮಕ್ಕಳಿಗೆ ಆಹಾರ ಧ್ಯಾನ ವಿತರಣೆ ಮಾಡಲಾಗಿದೆ ಎಂದು ವಿವರಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸರಕಾರಿ ಪ್ರೌಢಶಾಲೆ ಮುಖ್ಯಗುರು ಸ್ನೇಹಲತಾ ಕುಲಕರ್ಣಿ ಮಾತನಾಡಿ, ನಮ್ಮ ಶಾಲೆಗೆ ಪ್ರತಿಬಿಂಬ ಸೇವಾ ಸಂಸ್ಥೆಗಳ ಮೂಲಕ ಸುಮಾರು ವರ್ಷಗಳಿಂದ ಬಿಸಿಯೂಟ ಪಡೆಯುತ್ತಿದ್ದೇವೆ. ಸಂಸ್ಥೆಯ ಸಹ ಭಾಗಿತ್ವದಲ್ಲಿ ಮಕ್ಕಳಿಗೆ ಆಹಾರ ಧ್ಯಾನ ವಿತರಣೆ ಆಗುತ್ತಿದೆ ಎಂದರು.
ಗ್ರಾಮ ಸುಧಾರಣಾ ಸಮಿತಿಯ ಚಂದ್ರಶೇಖರ ಶೇಗಜಿ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ರಾಕೇಶ ಚವ್ಹಾಣ, ಅಶೋಕ ಗಾಯಕವಾಡ, ಸುರೇಶ ಕುಲಕರ್ಣಿ, ಅಂಬಿಕಾ ಅಷ್ಠಗಿ, ಪುತಳಾಬಾಯಿ ತಳವಾರ ಹಾಗೂ ಹಣಮಂತ ಕುಲಕರ್ಣಿ, ಜಗದೀಶ ಕೋರೆ, ಶಾಂತಪ್ಪ ಕೋರೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ