ಉತ್ತಮ ಪತ್ರಕರ್ತ ಪತ್ರಿಕೆ ಜೀವಾಳ: ಕಾಂತಾ


Team Udayavani, Jul 16, 2018, 9:26 AM IST

gul-3.gif

ಕಲಬುರಗಿ: ಉತ್ತಮ ಪತ್ರಕರ್ತ ಪತ್ರಿಕೆಯ ಜೀವಾಳ. ಹೀಗಾಗಿಯೇ ರಾಮ ಮನೋಹರ ಲೋಹಿಯಾ ಅವರು ಚೌಕಮ್ಮಾ ಪತ್ರಿಕೆ ಸ್ಥಾಪಿಸಿ ದೇಶದ ಸಮಸ್ಯೆಗಳನ್ನು ಎತ್ತಿ ತೋರಿಸಲಾರಂಭಿಸಿದ್ದರು. ಆ ಗಡಸುತನ ಇಂದಿನ ಪತ್ರಕರ್ತರಲ್ಲಿ ಬರಬೇಕು. ಜನಸಾಮಾನ್ಯರು ಪೊಲೀಸ್‌ರೆಂದರೆ ಭಯ ಹುಟ್ಟಿಸುವರೆಂದು ಅರ್ಥೈಸಿಕೊಳ್ಳುವುದು ಸರಿಯಲ್ಲ ಎಂದು ಮಾಜಿ ಕಾರ್ಮಿಕ ಸಚಿವ ಎಸ್‌.ಕೆ. ಕಾಂತಾ ಹೇಳಿದರು.

ನಗರದ ಹೊರವಲಯದ ತಾಜ ಸುಲ್ತಾನಪುರದ ಕೆಎಸ್‌ಆರ್‌ಪಿ ಕ್ಯಾಂಪ್‌ನಲ್ಲಿ ವಿಶ್ವಜ್ಯೋತಿ ಪ್ರತಿಷ್ಠಾನ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ “ಸಮಾಜ ರಕ್ಷಣೆಯಲ್ಲಿ ಪೆನ್‌ ಮತ್ತು ಗನ್‌’ ಎನ್ನುವ ವಿಚಾರ ಗೋಷ್ಠಿಗೆ ಚಾಲನೆ ನೀಡಿ ಅವರು ಮಾತನಾಡಿದರು.
 
ಡಾ| ಅಂಬೇಡ್ಕರ್‌ ಹೇಳಿದಂತೆ ಸಮಾಜದಲ್ಲಿ ಶೋಷಣೆ ಮಾಡುವವರು ನಮಗಿಂತ ಮೇಲಿದ್ದವರು. ಮೂಲ ಕೆಲಸಗಾರರಿಗೆ ನಿಜವಾದ ನ್ಯಾಯ ಸಿಗುತ್ತಿಲ್ಲ. ಕೆಳಗಿನವರು ಮಾಡಿರುವ ಕೆಲಸಕ್ಕೆ ಮೇಲಾಧಿಕಾರಿಗಳು ಅದರ ಗೌರವ ಪಡೆಯುತ್ತಾರೆ. ಇದು ನಿಜಕ್ಕೂ ವಿಪರ್ಯಾಸ. ಆದರೆ ಪತ್ರಕರ್ತರು ಹಾಗೂ ಪೊಲೀಸರು ಸಮಾಜದಲ್ಲಿ ತಮ್ಮ ವೈಯಕ್ತಿಕ ಹಾಗೂ ಸಾಮಾಜಿಕ ಬದುಕಿಗಾಗಿ ಬೇರೊಬ್ಬರ ಬಾಲ ಬಡಿಯುವುದನ್ನು ಬಿಟ್ಟು ತಮ್ಮ ಹಕ್ಕನ್ನು ಪಡೆಯುವರಾಗಿ ಬೆಳೆಯಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಕೆಎಸ್‌ಆರ್‌ಪಿ ಕಮಾಂಡೆಂಟ್‌ ಬಸವರಾಜ ಜಿಳ್ಳೆ ಮಾತನಾಡಿ, ಕಾನೂನು ಹಾಗೂ ಸುವ್ಯವಸ್ಥೆ ಜೊತೆ ಸಾಮಾಜಿಕ ಕಾಳಜಿ ಎತ್ತಿ ಹಿಡಿದ ಗೌರವ ಪತ್ರಕರ್ತರದ್ದು. ಪೆನ್ನಿನ ಮೂಲಕ ಸಮಾಜ ತಿದ್ದುವಲ್ಲಿ ಪತ್ರಕರ್ತರ ಹಾಗೂ ಪೊಲೀಸರ ಸೇವೆ ಅನನ್ಯವಾಗಿದೆ. ಸಮಾಜದಲ್ಲಿ ಅಹಿತಕರ ಘಟನೆಗಳು ನಡೆದಾಗ ಅದನ್ನು ಆದಷ್ಟು ಮಾತಿನ ಮೂಲಕ ಬಗೆಹರಿಸುವಲ್ಲಿ ಇಲಾಖೆ ಪ್ರಯತ್ನಿಸುತ್ತಿದೆ. ಮಿತಿ ಮೀರಿದಾಗ ಮಾತ್ರ ಗನ್‌ನ್ನು ಬಳಸಬೇಕಾಗುತ್ತದೆ ಎಂದರು.

ಸಂಜಯ ಪಾಟೀಲ ಉಪನ್ಯಾಸ ನೀಡಿದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ್‌ ಠಾಕೂರ, ಪ್ರತಿಷ್ಠಾನದ ಸಂಸ್ಥಾಪಕ ವಿಜಯಕುಮಾರ ತೇಗಲತಿಪ್ಪಿ, ಅಧ್ಯಕ್ಷ ಶ್ರೀಕಾಂತ ಪಾಟೀಲ ತಿಳಗೂಳ, ನಿಸಾರ್‌ ಅಹ್ಮದ್‌, ಪರಮೇಶ್ವರ ಶಟಕಾರ, ಡಾ| ಬಾಬುರಾವ ಶೇರಿಕಾರ,
ಶಿವರಾಜ ಅಂಡಗಿ ಹಾಗೂ ಇತರರಿದ್ದರು. 

ಪತ್ರಿಕೋದ್ಯಮದ ವಿವಿಧ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರಾದ ವಿಶ್ವನಾಥ ಸ್ವಾಮೀಜಿ, ವೀರಣ್ಣಗೌಡ ಪಾಟೀಲ ಯಡ್ಡಳ್ಳಿ, ಚನ್ನಬಸಯ್ಯ ಗಾರಂಪಳ್ಳಿ, ಅಮರೇಶ ಎತ್ತಿನ ಮಾಳಗಿ, ಮಮತಾ ಬಾಬುರಾವ ಯಡ್ರಾಮಿ, ಭೀಮಾಶಂಕರ ಫಿರೋಜಾಬಾದ, ಸಂತೋಷ ನಾಡಗಿರಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಪತ್ರಕರ್ತರು, ಪೊಲೀಸ್‌ ಅಧಿಕಾರಿಗಳು, ಸಾಹಿತ್ಯಾಸಕ್ತರು ಹಾಜರಿದ್ದರು.

ಟಾಪ್ ನ್ಯೂಸ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.