ದೇವಲಗಾಣಗಾಪುರದಲ್ಲಿ ಸಂಭ್ರಮದ ಗೋಪಾಳ ಕಾಳ
Team Udayavani, Feb 5, 2018, 10:21 AM IST
ಅಫಜಲಪುರ: ರಾಜ್ಯದ ಐತಿಹಾಸಿಕ ಯಾತ್ರಾ ಸ್ಥಳ ತಾಲೂಕಿನ ದೇವಲಗಾಣಗಾಪುರದ ದತ್ತಾತ್ರೇಯ ದೇವಸ್ಥಾನದಲ್ಲಿ ರವಿವಾರ ಗೋಪಾಳ ಕಾಳ(ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ) ಸಂಭ್ರಮದಿಂದ ನಡೆಯಿತು.
ಸೀಮಾಂಧ್ರ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ದೇಶದ ನಾನಾ ಮೂಲೆಗಳಿಂದ ಆಗಮಿಸಿದ ಭಕ್ತರು ದತ್ತಾತ್ರೇಯ ದೇವರ ದರ್ಶನ ಪಡೆದರು.
ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ನಂತರ ದತ್ತ ಮಹಾರಾಜರ ಪಲ್ಲಕ್ಕಿ ಉತ್ಸವ ಸಕಲ ವಾದ್ಯ-ಮೇಳ, ಬಾಜಾ
ಭಜಂತ್ರಿಯೊಂದಿಗೆ ನಡೆಯಿತು. ರುದ್ರಪಾದ ತೀರ್ಥದವರೆಗೂ ತೆರಳಿ ಪೂಜೆ ಸಲ್ಲಿಸಿ ಉತ್ಸವ ಪುನಃ ದೇವಸ್ಥಾನಕ್ಕೆ ಬಂದು ತಲುಪಿತು ಎಂದು ದೇವಸ್ಥಾನದ ಅರ್ಚಕರಾದ ಕೃಷ್ಣಂಭಟ್ ಪೂಜಾರಿ, ನಾಗೇಶ ಪೂಜಾರಿ, ನಂದಕುಮಾರ ಪೂಜಾರಿ ಹೇಳಿದರು.
ದೇವಲ ಗಾಣಗಾಪುರ ಪಿಎಸ್ಐ ಕೃಷ್ಣಕುಮಾರ, ಎಎಸ್ಐ ಭೀಮಾಶಂಕರ ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು ಎಂದು ದೇವಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಜಿ. ಬಿರಾದಾರ ಹೇಳಿದರು.
ಗ್ರಾಪಂ ಅಧ್ಯಕ್ಷ ಮಹೇಶ ಗುತ್ತೇದಾರ, ಸದಸ್ಯರು, ಜಿಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ, ಸದಸ್ಯ ಅರುಣಕುಮಾರ ಪಾಟೀಲ, ತಾಪಂ ಅಧ್ಯಕ್ಷೆ ರುಕ್ಮಿàಣಿ ಜಮಾದಾರ, ಸದಸ್ಯ ಬಲವಂತ ಜಕಬಾ, ಮುಖಂಡ ಮಹಾದೇವ ಗುತ್ತೇದಾರ
ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು