ಕೋವಿಡ್ ತಡೆಗೆ ಸರ್ಕಾರ ವಿಫಲ
Team Udayavani, Jun 27, 2020, 7:51 AM IST
ಚಿತ್ತಾಪುರ: ಮಹಾಮಾರಿ ಕೋವಿಡ್ ಸೋಂಕು ತಡೆಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.
ಪಟ್ಟಣದ ಬಜಾಜ್ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ 16.18 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ದೇಶದಲ್ಲಿ ಮೊದಲ ಪ್ರಕರಣ ಕಲಬುರಗಿಯಲ್ಲೇ ಪತ್ತೆಯಾದ ನಂತರ ಜಿಲ್ಲೆಯಲ್ಲಿ ಟೆಸ್ಟಿಂಗ್ ಕೇಂದ್ರ ಸ್ಥಾಪನೆಗೆ ಕಾಂಗ್ರೆಸ್ ಶಾಸಕರೆಲ್ಲ ಸೇರಿ ಆಗ್ರಹಿಸಿದ್ದೆವು. 24 ಗಂಟೆಯಲ್ಲೆ ಸ್ಥಾಪಿಸುವುದಾಗಿ ಸದನದಲ್ಲಿ ಮುಖ್ಯಮಂತ್ರಿ ಹೇಳಿದ್ದರು.
ಆದರೆ ಭರವಸೆ ನೀಡಿ ಮೂರು ದಿನಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು. ಕಲಬುರಗಿಯಲ್ಲಿ ಜೀಮ್ಸ್, ಜಯದೇವ ಹಾಗೂ ಇಎಸ್ಐ ಸೇರಿದಂತೆ ಹಲವಾರು ವೈದ್ಯಕೀಯ ಸುಸಜ್ಜಿತ ಸಂಸ್ಥೆಗಳು ಇವೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಮಾದರಿಗಳ ಟೆಸ್ಟಿಂಗ್ ನಡೆಯುತ್ತಿದೆ. ಮನಸ್ಸು ಮಾಡಿದರೆ ದಿನವೊಂದಕ್ಕೆ 700ಕ್ಕೂ ಅಧಿಕ ಟೆಸ್ಟಿಂಗ್ ಮಾಡಬಹುದು. ಸರ್ಕಾರದ ನಿರ್ಲಕ್ಷ್ಯತನ ಹಾಗೂ ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಇದು ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ವರ್ಗಾವಣೆ ದಂಧೆ ಜೋರಾಗಿ ನಡೆಯುತ್ತಿದೆ. ಪಿಸಿಯಿಂದ ಹಿಡಿದು ಡಿಸಿ ವರೆಗೆ ಎಲ್ಲ ಹಂತದಲ್ಲೂ ರೇಟ್ ಕಾರ್ಡ್ ಫಿಕ್ಸ್ ಆಗಿದೆ ಎಂದು ಆರೋಪಿಸಿದರು.
ಪ್ರಿಯಾಂಕ್ ಖರ್ಗೆ ಕಂಡರೆ ಬಿಜೆಪಿ ನಾಯಕರಿಗೆ ಅಲರ್ಜಿಯಾಗಿದೆ. ಕ್ಷೇತ್ರಕ್ಕೆ ಬಿಡುಗಡೆಯಾಗಿದ್ದ 228 ಕೋಟಿ ರೂ. ತಡೆ ಹಿಡಿದಿದ್ದಾರೆ. ಆದರೆ ಅವರ ಯಾವ ಪ್ರಯತ್ನಗಳನ್ನು ಯಶಸ್ವಿಯಾಗಲು ಬಿಡೋದಿಲ್ಲ ಎಂದರು. ವಿಧಾನ ಪರಿಷತ್ ಮಾಜಿ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ಮಲ್ಲಿಕಾರ್ಜುನ ಖರ್ಗೆ ರಾಜ್ಯಸಭಾ ಸದಸ್ಯರಾಗಿದ್ದಾರೆ. ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ಆಗಲಿದ್ದಾರೆ ಎಂದರು.
ಕೆಪಿಸಿಸಿ ಸದಸ್ಯ ನಾಗರೆಡ್ಡಿ ಪಾಟೀಲ ಕರದಾಳ, ಜಿಪಂ ಸದಸ್ಯ ಶಿವಾನಂದ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಜಿ.ಪಂ ಸದಸ್ಯ ಶಿವರುದ್ರ ಭೀಣಿ, ತಾ.ಪಂ ಅಧ್ಯಕ್ಷ ಜಗಣ್ಣಗೌಡ, ಎಪಿಎಂಸಿ ಅಧ್ಯಕ್ಷ ಶಿವರೆಡ್ಡಿ ನಾಲವಾರ, ಪುರಸಭೆ ಸದಸ್ಯರಾದ ಚಂದ್ರಶೇಖರ ಕಾಶಿ, ರಸೂಲ್ ಮುಸ್ತಫಾ, ವಿನೋದ್ ಗುತ್ತೇದಾರ, ಶೀಲಾ ಕಾಶಿ, ಪಾಶಾ ಖುರೇಶಿ, ಮಲ್ಲಿಕಾರ್ಜುನ ಕಾಳಗಿ, ಗೋಪಾಲ ರಾಠೊಡ, ಸ್ವಪ್ನಾ ಪಾಟೀಲ ಮತ್ತಿತರರು ಇದ್ದರು.
ಬಿಜೆಪಿ ಶಾಸಕರು, ಮಾಜಿ ಶಾಸಕರ ಇಚ್ಛೆ ಹಾಗೂ ಪ್ರತಿಷ್ಠೆಯನ್ನಾಗಿ ಮಾಡಿಕೊಂಡು ಚಿತ್ತಾಪುರ ತಾಲೂಕಿನ ಹಳ್ಳಿಗಳನ್ನು ಶಹಾಬಾದ ಹಾಗೂ ಕಾಳಗಿಗೆ ಅವೈಜ್ಞಾನಿಕವಾಗಿ ಹಂಚಲಾಗಿದೆ. ಇದಕ್ಕೆ ನನ್ನ ಸಂಪೂರ್ಣ ವಿರೋಧವಿದೆ. ಆಡಳಿತಾತ್ಮಕವಾಗಿ ಅಭಿವೃದ್ಧಿಗೆ ನನ್ನ ಸಹಮತವಿದೆ. ಜನರ ಸಭೆ ಕರೆದು, ಅವರ ಅಭಿಪ್ರಾಯ ಪಡೆದು ನಿಯಮಗಳ ಪ್ರಕಾರ ಹಳ್ಳಿಗಳನ್ನು ಹಂಚಲಿ. –ಪ್ರಿಯಾಂಕ್ ಖರ್ಗೆ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್