ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಗೆ ಸರ್ಕಾರ ಆದೇಶ
Team Udayavani, Feb 16, 2022, 1:15 PM IST
ಕಲಬುರಗಿ: ಮಾರುಕಟ್ಟೆ ಪ್ರವೇಶಿಸಿ ಕಡಲೆ ಖರೀದಿಸಲು ಸರ್ಕಾರ ಮುಂದಾಗಿದೆ. ಮಾರುಕಟ್ಟೆಯಲ್ಲಿ ಕಡಲೆ ಬೆಲೆಯು ಬೆಂಬಲ ಬೆಲೆಗಿಂತ ಕುಸಿತವಾಗಿದ್ದರಿಂದ ಸರ್ಕಾರ ಖರೀದಿ ಕೇಂದ್ರ ಸ್ಥಾಪಿಸಿ, ರೈತರಿಂದ ಕಡಲೆ ಖರೀದಿಸಲು ಮುಂದಾಗಿದೆಯಲ್ಲದೇ ಖರೀದಿ ಕೇಂದ್ರಗಳನ್ನು ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ.
ಕಡಲೆ ಕ್ವಿಂಟಾಲ್ ಗೆ 5230 ರೂ. ದರದಲ್ಲಿ ಖರೀದಿ ಮಾಡಲು ಹಾಗೂ ಪ್ರತಿ ರೈತನಿಂದ ಎಕರೆಗೆ 4 ಕ್ವಿಂಟಾಲ್ ದಂತೆ ಗರಿಷ್ಟ 15 ಕ್ವಿಂಟಾಲ್ ವರೆಗೂ ಖರೀದಿಸಲು ನಿರ್ಧರಿಸಲಾಗಿದೆ.
ಉದಯವಾಣಿ ವರದಿ ಫಲಶ್ರುತಿ: ಕಡಲೆ ಬೆಲೆಯು ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆಯಾಗಿದೆ. ಕ್ವಿಂಟಾಲ್ ಗೆ 4400- 4500 ರೂ.ಗೆ ಇಳಿದಿದೆ. ಇದರಿಂದ ರೈತರಿಗೆ ಕ್ವಿಂಟಾಲ್ ದಿಂದ ಸಾವಿರ ರೂ ಹಾನಿಯಾಗುತ್ತಿದೆ. ಹೀಗಾಗಿ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿಗೆ ಮುಂದಾಗದ ಸರಕಾರ ಎಂಬುದಾಗಿ ಉದಯವಾಣಿ ಯಲ್ಲಿ ಕಳೆದ ಫೆ. 7ರಂದು ವಿಶೇಷ ವರದಿ ಪ್ರಕಟಿಸಲಾಗಿತ್ತು.
ಇದನ್ನೂ ಓದಿ:ಎನ್ಎಸ್ಎಸ್ ಸ್ವಯಂಸೇವಕರನ್ನು 10 ಲಕ್ಷಕ್ಕೆ ಹೆಚ್ಚಿಸುವ ಗುರಿ: ಸಚಿವ ಡಾ.ನಾರಾಯಣಗೌಡ
ಬೆಂಬಲ ಬೆಲೆಯಲ್ಲಿ ಕಡಲೆ ಮಾರಾಟ ಮಾಡಲು ರೈತರು ಇಂದಿನಿಂದ 45 ದಿನಗಳ ಕಾಲ ನೊಂದಣಿ ಜತೆಗೆ 90 ದಿನಗಳವರೆಗೂ ಕಾಲಾವಧಿ ನಿಗದಿ ಮಾಡಲಾಗಿದೆ. ಹೀಗಾಗಿ ರೈತರು ಈ ಸದುಪಯೋಗಪಡೆದುಕೊಳ್ಳಬೇಕೆಂದು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ