ಗ್ರಾಮ ಸ್ವರಾಜ್‌ ವರದಿ ನೀಡಲು ಸೂಚನೆ


Team Udayavani, Jul 7, 2018, 10:42 AM IST

gul-2.jpg

ಕಲಬುರಗಿ: ಜಿಲ್ಲೆಯ 67 ಗ್ರಾಮಗಳಲ್ಲಿ ಕೇಂದ್ರ ಸರ್ಕಾರವು ಮುಂದುವರಿದ ಗ್ರಾಮ ಸ್ವರಾಜ್‌ ಯೋಜನೆ ಜಾರಿಗೊಳಿಸಿದೆ. ತಾಪಂ ಕಾರ್ಯನಿರ್ವಾಹಕ ಅ ಧಿಕಾರಿಗಳು ಈ ಗ್ರಾಮಗಳಲ್ಲಿ ಸಮೀಕ್ಷೆ ಕೈಗೊಂಡು ಎರಡು ದಿನಗಳಲ್ಲಿ ವಿಸ್ತೃತ ವರದಿ ನಿಡಬೇಕೆಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮುಂದುವರಿದ ಗ್ರಾಮ ಸ್ವರಾಜ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆಗಳನ್ನು ತಲುಪಿಸಲು ಜಿಲ್ಲೆಯಲ್ಲಿ ಮುಂದುವರಿದ ಗ್ರಾಮ ಸ್ವರಾಜ್‌ ಯೋಜನೆ ಜಾರಿಗೊಳಿಸಲಾಗಿದೆ ಎಂದು ತಿಳಿಸಿದರು. ಈ ಗ್ರಾಮಗಳಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ, ಸೌಭಾಗ್ಯ (ಬಿಜಲಿ ಹರ ಘರ ಯೋಜನಾ), ಉಜಾಲಾ ಯೋಜನಾ, ಪ್ರಧಾನಮಂತ್ರಿ ಜನಧನ ಯೋಜನಾ, ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನಾ, ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನಾ ಹಾಗೂ ಇಂದ್ರಧನುಷ್‌ ಯೋಜನೆಯಿಂದ ವಂಚಿತ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಯೋಜನೆ ಲಾಭ ದೊರಕಿಸಬೇಕೆಂದು ಸೂಚಿಸಿದರು.

ಪ್ರಧಾನಮಂತ್ರಿ ಉಜ್ವಲ ಯೋಜನೆ: 67 ಗ್ರಾಮಗಳಲ್ಲಿ 25,105 ಕುಟುಂಬಗಳಿದ್ದು, ಈಗಾಗಲೇ 9233  ಟುಂಬಗಳಿಗೆ ಎಲ್‌.ಪಿ.ಜಿ. ಸಂಪರ್ಕ ಇದೆ. 6695 ಕುಟುಂಬಗಳು ಉಜ್ವಲ ಯೋಜನೆಗೆ ಅನರ್ಹವಾಗಿದ್ದು, ಈಗಾಗಲೇ 5215 ಕುಟುಂಬಗಳಿಗೆ ಎಲ್‌.ಪಿ.ಜಿ. ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಇನ್ನುಳಿದ ಸುಮಾರು 4000 ಮನೆಗಳಿಗೆ ಭೇಟಿ ನೀಡಿ ಅವರಿಗೆ ಎಲ್‌.ಪಿ.ಜಿ. ಸಂಪರ್ಕ ಕಲ್ಪಿಸಬೇಕು. ಎರಡು ದಿನದಲ್ಲಿ ಎಲ್‌.ಪಿ.ಜಿ. ಸಂಪರ್ಕ ಕಲ್ಪಿಸಿದ ವಿವರ ವೆಬ್‌ಸೈಟ್‌ನಲ್ಲಿ ಭರ್ತಿಮಾಡಬೇಕು. ಫಲಾನುಭವಿಗಳು ಬ್ಯಾಂಕ್‌ ಪಾಸ್‌ ಪುಸ್ತಕ ಹಾಗೂ ಜಾತಿ ಪ್ರಮಾಣ ಪತ್ರ ನೀಡಿ ಉಜ್ವಲ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.

ಪ್ರಧಾನಮಂತ್ರಿ ಜನಧನ, ಜೀವನ ಜ್ಯೋತಿ ಬಿಮಾ ಹಾಗೂ ಸುರಕ್ಷಾ ಬಿಮಾ ಯೋಜನೆ: ಈಗಾಗಲೇ ಜನಧನ ಯೋಜನೆ ಬ್ಯಾಂಕ್‌ ಖಾತೆಗಳನ್ನು ತೆರೆಯಲಾಗಿದೆ. ಅವುಗಳ ವಿವರ ನೀಡಬೇಕು. ಜನಧನ ಬ್ಯಾಂಕ್‌ ಖಾತೆಗಳನ್ನು ತೆರೆಯದವರನ್ನು ಗುರುತಿಸಿ ಖಾತೆ ಪ್ರಾರಂಭಿಸಬೇಕು. ಫಲಾನುಭವಿಗಳಿಗೆ ಜೀವನ ಜ್ಯೋತಿ ಹಾಗೂ ಸುರಕ್ಷಾ ಬಿಮಾ ಯೋಜನೆ ಲಾಭಗಳನ್ನು ವಿವರಿಸಿ ಜಾಗೃತಿ ಮೂಡಿಸಿ ಅವರಿಂದ ವಿಮಾ ಕಂತು ಪಡೆಯಬೇಕು.

ಗ್ರಾಮಗಳಲ್ಲಿ ಗ್ರಾಮಸಭೆಗಳನ್ನು ನಡೆಸಿ ಫಲಾನುಭವಿಗಳಿಂದ ಜೀವನ ಜ್ಯೋತಿ ಯೋಜನೆಗಾಗಿ 330 ರೂ. ಹಾಗೂ ಸುರಕ್ಷಾ ಬಿಮಾ ಯೋಜನೆಗಾಗಿ 12 ರೂ.ಗಳ ವಿಮಾ ಕಂತನ್ನು ಪಡೆಯಬೇಕು. ಸರ್ಕಾರಿ ನೌಕರರಿಗೆ ಕಡ್ಡಾಯವಾಗಿ ಈ ಯೋಜನೆಗಳಡಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಇಂದ್ರಧನುಷ: 67 ಗ್ರಾಮಗಳಲ್ಲಿ ಈಗಾಗಲೇ ಇಂದ್ರ ಧನುಷ್‌ ವಿಶೇಷ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶೇ. 91 ರಷ್ಟು ಲಸಿಕೆ ಗುರಿ ತಲುಪಲಾಗಿದೆ. ಉಳಿದ ಗುರಿ ತಲುಪಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಸೌಭಾಗ್ಯ ಯೋಜನೆ: ವಿದ್ಯುತ್‌ ಸಂಪರ್ಕ ಹೊಂದಿರದ ಬಿ.ಪಿ.ಎಲ್‌. ಮತ್ತು ಎ.ಪಿ.ಎಲ್‌. ಕುಟುಂಬಗಳನ್ನು ಗುರುತಿಸಿ
ಅವರಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕಾಗಿದೆ. ಈ ಹಿಂದೆ ಕೈಗೊಂಡ ಸಮೀಕ್ಷೆಯಂತೆ 67 ಗ್ರಾಮಗಳಲ್ಲಿ 1928 ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕ ಇರುವುದಿಲ್ಲ. ಆದಷ್ಟು ಬೇಗ ಈ ಕುಟುಂಬಗಳ ಮನೆಗಳಿಗೆ ವಿದ್ಯುತ್‌ ಸಂಪಕ್‌ ಕಲ್ಪಿಸಬೇಕು. ಇನ್ನೊಮ್ಮೆ ಮರು ಸಮೀಕ್ಷೆ ಕೈಗೊಂಡು ವರದಿ ನೀಡಬೇಕು ಎಂದರು.

ಉಜಾಲಾ ಯೋಜನೆ: ಉಜಾಲಾ ಯೋಜನೆಯಡಿ ಜಿಲ್ಲೆಯಲ್ಲಿ ಗುಲ್ಬರ್ಗಾ ಒನ್‌ ಹಾಗೂ ಮುಖ್ಯ ಅಂಚೆ ಕಚೇರಿಯಲ್ಲಿ ಮಾತ್ರ ಸಹಾಯಧನದ ಎಲ್‌.ಇ.ಡಿ. ಬಲ್ಬ್ಗಳನ್ನು ವಿತರಿಸಲಾಗುತ್ತಿದೆ. ಗ್ರಾಮ ಸ್ವರಾಜ್‌ ಯೋಜನೆ ಜಾರಿಗೊಳಿಸಲಾದ ಗ್ರಾಮಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ ಎಲ್‌.ಇ.ಡಿ. ಬಲ್ಬ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ಪ್ರವೀಣ ಪ್ರಿಯಾ ಡೇವಿಡ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಅರುಣಕುಮಾರ ಸಂಗಾವಿ, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌, ಎಲ್ಲ ತಾಲೂಕುಗಳ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಶು ಅಭಿವೃದ್ಧಿ ಅಧಿಕಾರಿಗಳು, ಎಲ್‌.ಪಿ.ಜಿ. ಗ್ಯಾಸ್‌ ವಿತರಕರು ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.